ಐಸಿಯುದಲ್ಲಿದ್ದ ಮಹಿಳೆಯ ಮಗುವಿಗೆ ಎದೆ ಹಾಲುಣಿಸಿದ ಪೊಲೀಸ್ ಅಧಿಕಾರಿ; ವಿಡಿಯೋಗೆ ಭಾರೀ ಮೆಚ್ಚುಗೆ

ಕೊಚ್ಚಿಯ ಮಹಿಳಾ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿ ಎಂ.ಎ. ಆರ್ಯ ಕೂಡ 9 ತಿಂಗಳ ಮಗುವಿನ ತಾಯಿ. ಅವರು ಹಸಿವಿನಿಂದ ಅಳುತ್ತಿದ್ದ ಮಹಿಳೆಯ 4 ತಿಂಗಳ ಮಗುವಿಗೆ ಹಾಲುಣಿಸಿದ್ದಾರೆ. ಶಿಶುವಿನ ತಾಯಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು.

ಐಸಿಯುದಲ್ಲಿದ್ದ ಮಹಿಳೆಯ ಮಗುವಿಗೆ ಎದೆ ಹಾಲುಣಿಸಿದ ಪೊಲೀಸ್ ಅಧಿಕಾರಿ; ವಿಡಿಯೋಗೆ ಭಾರೀ ಮೆಚ್ಚುಗೆ
ಮಗುವಿಗೆ ಹಾಲುಣಿಸುತ್ತಿರುವ ಪೊಲೀಸ್
Follow us
|

Updated on: Nov 24, 2023 | 8:32 PM

ಕೊಚ್ಚಿ: ಕೇರಳದ ಕೊಚ್ಚಿಯ ಆಸ್ಪತ್ರೆಯೊಂದರಲ್ಲಿ ತಾಯಿ ಆಸ್ಪತ್ರೆಗೆ ದಾಖಲಾಗಿದ್ದರಿಂದ ಮಗುವಿಗೆ ಎದೆಹಾಲು ಕುಡಿಸಲು ಸಾಧ್ಯವಾಗಿರಲಿಲ್ಲ. ಇದರಿಂದ ಆಕೆಯ 4 ತಿಂಗಳ ಮಗು ಹಸಿವಿನಿಂದ ಜೋರಾಗಿ ಅಳುತ್ತಿತ್ತು. ಆಗ ಮಹಿಳಾ ಪೊಲೀಸ್ ಒಬ್ಬರು ಆ ಮಗುವಿಗೆ ಎದೆಹಾಲು ಕುಡಿಸಿ, ಹಸಿವು ನೀಗಿಸಿರುವ ವಿಡಿಯೋಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಈ ವಿಡಿಯೋವನ್ನು ಕೇರಳ ಪೊಲೀಸ್ ಅಧಿಕಾರಿಯೊಬ್ಬರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಕೊಚ್ಚಿಯ ಮಹಿಳಾ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿ ಎಂ.ಎ. ಆರ್ಯ ಕೂಡ 9 ತಿಂಗಳ ಮಗುವಿನ ತಾಯಿ. ಅವರು ಹಸಿವಿನಿಂದ ಅಳುತ್ತಿದ್ದ ಮಹಿಳೆಯ 4 ತಿಂಗಳ ಮಗುವಿಗೆ ಹಾಲುಣಿಸಿದ್ದಾರೆ. ಶಿಶುವಿನ ತಾಯಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ಈ ವೀಡಿಯೊದಲ್ಲಿ ಪೊಲೀಸ್ ಅಧಿಕಾರಿ ಆರ್ಯ ಪೊಲೀಸ್ ಠಾಣೆಯಲ್ಲಿ ಹಸಿದ 4 ತಿಂಗಳ ಮಗುವಿಗೆ ಹಾಲುಣಿಸುತ್ತಿದ್ದುದನ್ನು ನೋಡಬಹುದು.

ಇದನ್ನೂ ಓದಿ: ಒಬ್ಬರಿಂದ ಅತ್ಯಾಚಾರ ಮಾಡಲು ಸಾಧ್ಯವಿಲ್ಲ: ಕಾಂಗ್ರೆಸ್​ ಮಾಜಿ ಶಾಸಕನ ಆಡಿಯೋ ವೈರಲ್​​​

ವರದಿಗಳ ಪ್ರಕಾರ, ಮಗುವಿನ ತಾಯಿ ಬಿಹಾರದ ಪಾಟ್ನಾ ನಿವಾಸಿಯಾಗಿದ್ದು, ಕೊಚ್ಚಿಯ ಎರ್ನಾಕುಲಂ ಜನರಲ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ICU) ಚಿಕಿತ್ಸೆ ಪಡೆಯುತ್ತಿದ್ದರು. ಅನಾರೋಗ್ಯಕ್ಕೊಳಗಾಗಿದ್ದ ಪಾಟ್ನಾ ನಿವಾಸಿಯ ನಾಲ್ವರು ಮಕ್ಕಳನ್ನು ನೋಡಿಕೊಳ್ಳಲು ಯಾರೂ ಇಲ್ಲದ ಕಾರಣ ಆ ಮಕ್ಕಳನ್ನು ಕೊಚ್ಚಿ ನಗರ ಮಹಿಳಾ ಠಾಣೆಗೆ ಕರೆತರಲಾಗಿತ್ತು.

ತಾಯಿ ಅನಾರೋಗ್ಯದಿಂದ ಬಳಲುತ್ತಿದ್ದ ಕಾರಣ ಹಸಿವಿನಿಂದ ಶಿಶು ನಿರಂತರವಾಗಿ ಅಳುತ್ತಿತ್ತು. ಇದನ್ನು ಕಂಡ ಅಧಿಕಾರಿ ಆರ್ಯ ಮುಂದೆ ಬಂದು ಅಳುತ್ತಿದ್ದ ಮಗುವಿಗೆ ಎದೆಹಾಲು ಕುಡಿಸಿ, ಮಗುವನ್ನು ಸಮಾಧಾನ ಪಡಿಸಿ, ಕೊನೆಗೆ ನಿದ್ರೆ ಮಾಡಿಸಿದ್ದಾರೆ. ಇದಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಕೇಸ್ ಒಂದರಲ್ಲಿ ಅನಾರೋಗ್ಯಕ್ಕೊಳಗಾಗಿರುವ ಮಹಿಳೆಯ ಪತಿ ಜೈಲಿನಲ್ಲಿದ್ದಾರೆ. ಹೀಗಾಗಿ, ಮಕ್ಕಳನ್ನು ನೋಡಿಕೊಳ್ಳಲು ಯಾರೂ ಇರಲಿಲ್ಲ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ