Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಸಿಯುದಲ್ಲಿದ್ದ ಮಹಿಳೆಯ ಮಗುವಿಗೆ ಎದೆ ಹಾಲುಣಿಸಿದ ಪೊಲೀಸ್ ಅಧಿಕಾರಿ; ವಿಡಿಯೋಗೆ ಭಾರೀ ಮೆಚ್ಚುಗೆ

ಕೊಚ್ಚಿಯ ಮಹಿಳಾ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿ ಎಂ.ಎ. ಆರ್ಯ ಕೂಡ 9 ತಿಂಗಳ ಮಗುವಿನ ತಾಯಿ. ಅವರು ಹಸಿವಿನಿಂದ ಅಳುತ್ತಿದ್ದ ಮಹಿಳೆಯ 4 ತಿಂಗಳ ಮಗುವಿಗೆ ಹಾಲುಣಿಸಿದ್ದಾರೆ. ಶಿಶುವಿನ ತಾಯಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು.

ಐಸಿಯುದಲ್ಲಿದ್ದ ಮಹಿಳೆಯ ಮಗುವಿಗೆ ಎದೆ ಹಾಲುಣಿಸಿದ ಪೊಲೀಸ್ ಅಧಿಕಾರಿ; ವಿಡಿಯೋಗೆ ಭಾರೀ ಮೆಚ್ಚುಗೆ
ಮಗುವಿಗೆ ಹಾಲುಣಿಸುತ್ತಿರುವ ಪೊಲೀಸ್
Follow us
ಸುಷ್ಮಾ ಚಕ್ರೆ
|

Updated on: Nov 24, 2023 | 8:32 PM

ಕೊಚ್ಚಿ: ಕೇರಳದ ಕೊಚ್ಚಿಯ ಆಸ್ಪತ್ರೆಯೊಂದರಲ್ಲಿ ತಾಯಿ ಆಸ್ಪತ್ರೆಗೆ ದಾಖಲಾಗಿದ್ದರಿಂದ ಮಗುವಿಗೆ ಎದೆಹಾಲು ಕುಡಿಸಲು ಸಾಧ್ಯವಾಗಿರಲಿಲ್ಲ. ಇದರಿಂದ ಆಕೆಯ 4 ತಿಂಗಳ ಮಗು ಹಸಿವಿನಿಂದ ಜೋರಾಗಿ ಅಳುತ್ತಿತ್ತು. ಆಗ ಮಹಿಳಾ ಪೊಲೀಸ್ ಒಬ್ಬರು ಆ ಮಗುವಿಗೆ ಎದೆಹಾಲು ಕುಡಿಸಿ, ಹಸಿವು ನೀಗಿಸಿರುವ ವಿಡಿಯೋಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಈ ವಿಡಿಯೋವನ್ನು ಕೇರಳ ಪೊಲೀಸ್ ಅಧಿಕಾರಿಯೊಬ್ಬರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಕೊಚ್ಚಿಯ ಮಹಿಳಾ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿ ಎಂ.ಎ. ಆರ್ಯ ಕೂಡ 9 ತಿಂಗಳ ಮಗುವಿನ ತಾಯಿ. ಅವರು ಹಸಿವಿನಿಂದ ಅಳುತ್ತಿದ್ದ ಮಹಿಳೆಯ 4 ತಿಂಗಳ ಮಗುವಿಗೆ ಹಾಲುಣಿಸಿದ್ದಾರೆ. ಶಿಶುವಿನ ತಾಯಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ಈ ವೀಡಿಯೊದಲ್ಲಿ ಪೊಲೀಸ್ ಅಧಿಕಾರಿ ಆರ್ಯ ಪೊಲೀಸ್ ಠಾಣೆಯಲ್ಲಿ ಹಸಿದ 4 ತಿಂಗಳ ಮಗುವಿಗೆ ಹಾಲುಣಿಸುತ್ತಿದ್ದುದನ್ನು ನೋಡಬಹುದು.

ಇದನ್ನೂ ಓದಿ: ಒಬ್ಬರಿಂದ ಅತ್ಯಾಚಾರ ಮಾಡಲು ಸಾಧ್ಯವಿಲ್ಲ: ಕಾಂಗ್ರೆಸ್​ ಮಾಜಿ ಶಾಸಕನ ಆಡಿಯೋ ವೈರಲ್​​​

ವರದಿಗಳ ಪ್ರಕಾರ, ಮಗುವಿನ ತಾಯಿ ಬಿಹಾರದ ಪಾಟ್ನಾ ನಿವಾಸಿಯಾಗಿದ್ದು, ಕೊಚ್ಚಿಯ ಎರ್ನಾಕುಲಂ ಜನರಲ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ICU) ಚಿಕಿತ್ಸೆ ಪಡೆಯುತ್ತಿದ್ದರು. ಅನಾರೋಗ್ಯಕ್ಕೊಳಗಾಗಿದ್ದ ಪಾಟ್ನಾ ನಿವಾಸಿಯ ನಾಲ್ವರು ಮಕ್ಕಳನ್ನು ನೋಡಿಕೊಳ್ಳಲು ಯಾರೂ ಇಲ್ಲದ ಕಾರಣ ಆ ಮಕ್ಕಳನ್ನು ಕೊಚ್ಚಿ ನಗರ ಮಹಿಳಾ ಠಾಣೆಗೆ ಕರೆತರಲಾಗಿತ್ತು.

ತಾಯಿ ಅನಾರೋಗ್ಯದಿಂದ ಬಳಲುತ್ತಿದ್ದ ಕಾರಣ ಹಸಿವಿನಿಂದ ಶಿಶು ನಿರಂತರವಾಗಿ ಅಳುತ್ತಿತ್ತು. ಇದನ್ನು ಕಂಡ ಅಧಿಕಾರಿ ಆರ್ಯ ಮುಂದೆ ಬಂದು ಅಳುತ್ತಿದ್ದ ಮಗುವಿಗೆ ಎದೆಹಾಲು ಕುಡಿಸಿ, ಮಗುವನ್ನು ಸಮಾಧಾನ ಪಡಿಸಿ, ಕೊನೆಗೆ ನಿದ್ರೆ ಮಾಡಿಸಿದ್ದಾರೆ. ಇದಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಕೇಸ್ ಒಂದರಲ್ಲಿ ಅನಾರೋಗ್ಯಕ್ಕೊಳಗಾಗಿರುವ ಮಹಿಳೆಯ ಪತಿ ಜೈಲಿನಲ್ಲಿದ್ದಾರೆ. ಹೀಗಾಗಿ, ಮಕ್ಕಳನ್ನು ನೋಡಿಕೊಳ್ಳಲು ಯಾರೂ ಇರಲಿಲ್ಲ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ