AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಸಿಯುದಲ್ಲಿದ್ದ ಮಹಿಳೆಯ ಮಗುವಿಗೆ ಎದೆ ಹಾಲುಣಿಸಿದ ಪೊಲೀಸ್ ಅಧಿಕಾರಿ; ವಿಡಿಯೋಗೆ ಭಾರೀ ಮೆಚ್ಚುಗೆ

ಕೊಚ್ಚಿಯ ಮಹಿಳಾ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿ ಎಂ.ಎ. ಆರ್ಯ ಕೂಡ 9 ತಿಂಗಳ ಮಗುವಿನ ತಾಯಿ. ಅವರು ಹಸಿವಿನಿಂದ ಅಳುತ್ತಿದ್ದ ಮಹಿಳೆಯ 4 ತಿಂಗಳ ಮಗುವಿಗೆ ಹಾಲುಣಿಸಿದ್ದಾರೆ. ಶಿಶುವಿನ ತಾಯಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು.

ಐಸಿಯುದಲ್ಲಿದ್ದ ಮಹಿಳೆಯ ಮಗುವಿಗೆ ಎದೆ ಹಾಲುಣಿಸಿದ ಪೊಲೀಸ್ ಅಧಿಕಾರಿ; ವಿಡಿಯೋಗೆ ಭಾರೀ ಮೆಚ್ಚುಗೆ
ಮಗುವಿಗೆ ಹಾಲುಣಿಸುತ್ತಿರುವ ಪೊಲೀಸ್
ಸುಷ್ಮಾ ಚಕ್ರೆ
|

Updated on: Nov 24, 2023 | 8:32 PM

Share

ಕೊಚ್ಚಿ: ಕೇರಳದ ಕೊಚ್ಚಿಯ ಆಸ್ಪತ್ರೆಯೊಂದರಲ್ಲಿ ತಾಯಿ ಆಸ್ಪತ್ರೆಗೆ ದಾಖಲಾಗಿದ್ದರಿಂದ ಮಗುವಿಗೆ ಎದೆಹಾಲು ಕುಡಿಸಲು ಸಾಧ್ಯವಾಗಿರಲಿಲ್ಲ. ಇದರಿಂದ ಆಕೆಯ 4 ತಿಂಗಳ ಮಗು ಹಸಿವಿನಿಂದ ಜೋರಾಗಿ ಅಳುತ್ತಿತ್ತು. ಆಗ ಮಹಿಳಾ ಪೊಲೀಸ್ ಒಬ್ಬರು ಆ ಮಗುವಿಗೆ ಎದೆಹಾಲು ಕುಡಿಸಿ, ಹಸಿವು ನೀಗಿಸಿರುವ ವಿಡಿಯೋಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಈ ವಿಡಿಯೋವನ್ನು ಕೇರಳ ಪೊಲೀಸ್ ಅಧಿಕಾರಿಯೊಬ್ಬರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಕೊಚ್ಚಿಯ ಮಹಿಳಾ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿ ಎಂ.ಎ. ಆರ್ಯ ಕೂಡ 9 ತಿಂಗಳ ಮಗುವಿನ ತಾಯಿ. ಅವರು ಹಸಿವಿನಿಂದ ಅಳುತ್ತಿದ್ದ ಮಹಿಳೆಯ 4 ತಿಂಗಳ ಮಗುವಿಗೆ ಹಾಲುಣಿಸಿದ್ದಾರೆ. ಶಿಶುವಿನ ತಾಯಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ಈ ವೀಡಿಯೊದಲ್ಲಿ ಪೊಲೀಸ್ ಅಧಿಕಾರಿ ಆರ್ಯ ಪೊಲೀಸ್ ಠಾಣೆಯಲ್ಲಿ ಹಸಿದ 4 ತಿಂಗಳ ಮಗುವಿಗೆ ಹಾಲುಣಿಸುತ್ತಿದ್ದುದನ್ನು ನೋಡಬಹುದು.

ಇದನ್ನೂ ಓದಿ: ಒಬ್ಬರಿಂದ ಅತ್ಯಾಚಾರ ಮಾಡಲು ಸಾಧ್ಯವಿಲ್ಲ: ಕಾಂಗ್ರೆಸ್​ ಮಾಜಿ ಶಾಸಕನ ಆಡಿಯೋ ವೈರಲ್​​​

ವರದಿಗಳ ಪ್ರಕಾರ, ಮಗುವಿನ ತಾಯಿ ಬಿಹಾರದ ಪಾಟ್ನಾ ನಿವಾಸಿಯಾಗಿದ್ದು, ಕೊಚ್ಚಿಯ ಎರ್ನಾಕುಲಂ ಜನರಲ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ICU) ಚಿಕಿತ್ಸೆ ಪಡೆಯುತ್ತಿದ್ದರು. ಅನಾರೋಗ್ಯಕ್ಕೊಳಗಾಗಿದ್ದ ಪಾಟ್ನಾ ನಿವಾಸಿಯ ನಾಲ್ವರು ಮಕ್ಕಳನ್ನು ನೋಡಿಕೊಳ್ಳಲು ಯಾರೂ ಇಲ್ಲದ ಕಾರಣ ಆ ಮಕ್ಕಳನ್ನು ಕೊಚ್ಚಿ ನಗರ ಮಹಿಳಾ ಠಾಣೆಗೆ ಕರೆತರಲಾಗಿತ್ತು.

ತಾಯಿ ಅನಾರೋಗ್ಯದಿಂದ ಬಳಲುತ್ತಿದ್ದ ಕಾರಣ ಹಸಿವಿನಿಂದ ಶಿಶು ನಿರಂತರವಾಗಿ ಅಳುತ್ತಿತ್ತು. ಇದನ್ನು ಕಂಡ ಅಧಿಕಾರಿ ಆರ್ಯ ಮುಂದೆ ಬಂದು ಅಳುತ್ತಿದ್ದ ಮಗುವಿಗೆ ಎದೆಹಾಲು ಕುಡಿಸಿ, ಮಗುವನ್ನು ಸಮಾಧಾನ ಪಡಿಸಿ, ಕೊನೆಗೆ ನಿದ್ರೆ ಮಾಡಿಸಿದ್ದಾರೆ. ಇದಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಕೇಸ್ ಒಂದರಲ್ಲಿ ಅನಾರೋಗ್ಯಕ್ಕೊಳಗಾಗಿರುವ ಮಹಿಳೆಯ ಪತಿ ಜೈಲಿನಲ್ಲಿದ್ದಾರೆ. ಹೀಗಾಗಿ, ಮಕ್ಕಳನ್ನು ನೋಡಿಕೊಳ್ಳಲು ಯಾರೂ ಇರಲಿಲ್ಲ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ