AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಸಿಯುದಲ್ಲಿದ್ದ ಮಹಿಳೆಯ ಮಗುವಿಗೆ ಎದೆ ಹಾಲುಣಿಸಿದ ಪೊಲೀಸ್ ಅಧಿಕಾರಿ; ವಿಡಿಯೋಗೆ ಭಾರೀ ಮೆಚ್ಚುಗೆ

ಕೊಚ್ಚಿಯ ಮಹಿಳಾ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿ ಎಂ.ಎ. ಆರ್ಯ ಕೂಡ 9 ತಿಂಗಳ ಮಗುವಿನ ತಾಯಿ. ಅವರು ಹಸಿವಿನಿಂದ ಅಳುತ್ತಿದ್ದ ಮಹಿಳೆಯ 4 ತಿಂಗಳ ಮಗುವಿಗೆ ಹಾಲುಣಿಸಿದ್ದಾರೆ. ಶಿಶುವಿನ ತಾಯಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು.

ಐಸಿಯುದಲ್ಲಿದ್ದ ಮಹಿಳೆಯ ಮಗುವಿಗೆ ಎದೆ ಹಾಲುಣಿಸಿದ ಪೊಲೀಸ್ ಅಧಿಕಾರಿ; ವಿಡಿಯೋಗೆ ಭಾರೀ ಮೆಚ್ಚುಗೆ
ಮಗುವಿಗೆ ಹಾಲುಣಿಸುತ್ತಿರುವ ಪೊಲೀಸ್
ಸುಷ್ಮಾ ಚಕ್ರೆ
|

Updated on: Nov 24, 2023 | 8:32 PM

Share

ಕೊಚ್ಚಿ: ಕೇರಳದ ಕೊಚ್ಚಿಯ ಆಸ್ಪತ್ರೆಯೊಂದರಲ್ಲಿ ತಾಯಿ ಆಸ್ಪತ್ರೆಗೆ ದಾಖಲಾಗಿದ್ದರಿಂದ ಮಗುವಿಗೆ ಎದೆಹಾಲು ಕುಡಿಸಲು ಸಾಧ್ಯವಾಗಿರಲಿಲ್ಲ. ಇದರಿಂದ ಆಕೆಯ 4 ತಿಂಗಳ ಮಗು ಹಸಿವಿನಿಂದ ಜೋರಾಗಿ ಅಳುತ್ತಿತ್ತು. ಆಗ ಮಹಿಳಾ ಪೊಲೀಸ್ ಒಬ್ಬರು ಆ ಮಗುವಿಗೆ ಎದೆಹಾಲು ಕುಡಿಸಿ, ಹಸಿವು ನೀಗಿಸಿರುವ ವಿಡಿಯೋಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಈ ವಿಡಿಯೋವನ್ನು ಕೇರಳ ಪೊಲೀಸ್ ಅಧಿಕಾರಿಯೊಬ್ಬರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಕೊಚ್ಚಿಯ ಮಹಿಳಾ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿ ಎಂ.ಎ. ಆರ್ಯ ಕೂಡ 9 ತಿಂಗಳ ಮಗುವಿನ ತಾಯಿ. ಅವರು ಹಸಿವಿನಿಂದ ಅಳುತ್ತಿದ್ದ ಮಹಿಳೆಯ 4 ತಿಂಗಳ ಮಗುವಿಗೆ ಹಾಲುಣಿಸಿದ್ದಾರೆ. ಶಿಶುವಿನ ತಾಯಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ಈ ವೀಡಿಯೊದಲ್ಲಿ ಪೊಲೀಸ್ ಅಧಿಕಾರಿ ಆರ್ಯ ಪೊಲೀಸ್ ಠಾಣೆಯಲ್ಲಿ ಹಸಿದ 4 ತಿಂಗಳ ಮಗುವಿಗೆ ಹಾಲುಣಿಸುತ್ತಿದ್ದುದನ್ನು ನೋಡಬಹುದು.

ಇದನ್ನೂ ಓದಿ: ಒಬ್ಬರಿಂದ ಅತ್ಯಾಚಾರ ಮಾಡಲು ಸಾಧ್ಯವಿಲ್ಲ: ಕಾಂಗ್ರೆಸ್​ ಮಾಜಿ ಶಾಸಕನ ಆಡಿಯೋ ವೈರಲ್​​​

ವರದಿಗಳ ಪ್ರಕಾರ, ಮಗುವಿನ ತಾಯಿ ಬಿಹಾರದ ಪಾಟ್ನಾ ನಿವಾಸಿಯಾಗಿದ್ದು, ಕೊಚ್ಚಿಯ ಎರ್ನಾಕುಲಂ ಜನರಲ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ICU) ಚಿಕಿತ್ಸೆ ಪಡೆಯುತ್ತಿದ್ದರು. ಅನಾರೋಗ್ಯಕ್ಕೊಳಗಾಗಿದ್ದ ಪಾಟ್ನಾ ನಿವಾಸಿಯ ನಾಲ್ವರು ಮಕ್ಕಳನ್ನು ನೋಡಿಕೊಳ್ಳಲು ಯಾರೂ ಇಲ್ಲದ ಕಾರಣ ಆ ಮಕ್ಕಳನ್ನು ಕೊಚ್ಚಿ ನಗರ ಮಹಿಳಾ ಠಾಣೆಗೆ ಕರೆತರಲಾಗಿತ್ತು.

ತಾಯಿ ಅನಾರೋಗ್ಯದಿಂದ ಬಳಲುತ್ತಿದ್ದ ಕಾರಣ ಹಸಿವಿನಿಂದ ಶಿಶು ನಿರಂತರವಾಗಿ ಅಳುತ್ತಿತ್ತು. ಇದನ್ನು ಕಂಡ ಅಧಿಕಾರಿ ಆರ್ಯ ಮುಂದೆ ಬಂದು ಅಳುತ್ತಿದ್ದ ಮಗುವಿಗೆ ಎದೆಹಾಲು ಕುಡಿಸಿ, ಮಗುವನ್ನು ಸಮಾಧಾನ ಪಡಿಸಿ, ಕೊನೆಗೆ ನಿದ್ರೆ ಮಾಡಿಸಿದ್ದಾರೆ. ಇದಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಕೇಸ್ ಒಂದರಲ್ಲಿ ಅನಾರೋಗ್ಯಕ್ಕೊಳಗಾಗಿರುವ ಮಹಿಳೆಯ ಪತಿ ಜೈಲಿನಲ್ಲಿದ್ದಾರೆ. ಹೀಗಾಗಿ, ಮಕ್ಕಳನ್ನು ನೋಡಿಕೊಳ್ಳಲು ಯಾರೂ ಇರಲಿಲ್ಲ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ