AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮೊಸರು ಕುಡಿಕೆ ಉತ್ಸವದಲ್ಲಿ ಪಿರಮಿಡ್ ಹತ್ತಿ ಮಡಕೆ ಹೊಡೆದ ವೃದ್ಧೆ

ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಆಯೋಜಿಸಿದ್ದ ಮೊಸರು ಕುಡಿಕೆ ಉತ್ಸವದಲ್ಲಿ ವೃದ್ಧೆಯೊಬ್ಬರು ಪಿರಮಿಡ್ ಹತ್ತಿ ಮಡಕೆಯನ್ನು ಹೊಡೆದಿದ್ದಾರೆ. ಇದರ ವಿಡಿಯೋ ಇಲ್ಲಿದೆ ನೋಡಿ.

Viral Video: ಮೊಸರು ಕುಡಿಕೆ ಉತ್ಸವದಲ್ಲಿ ಪಿರಮಿಡ್ ಹತ್ತಿ ಮಡಕೆ ಹೊಡೆದ ವೃದ್ಧೆ
ಪಿರಮಿಡ್ ಹತ್ತಿ ಮಡಕೆ ಹೊಡೆದ ವೃದ್ಧೆ
TV9 Web
| Edited By: Rakesh Nayak Manchi|

Updated on:Aug 21, 2022 | 2:35 PM

Share

ಶ್ರೀಕೃಷ್ಣ ಜನ್ಮಾಷ್ಟಮಿ ಹಬ್ಬವನ್ನು ವಿಜ್ರಂಭಣೆಯಿಂದ ಆಚರಿಸಿ ಇದೀಗ ಗಣೇಶ ಹಬ್ಬಕ್ಕೆ ಭರ್ಜರಿ ತಯಾರಿಗಳನ್ನು ನಡೆಸಲಾಗುತ್ತಿದೆ. ಈ ನಡುವೆ ಕೃಷ್ಣ ಜನ್ಮಾಷ್ಟಮಿ ಹಬ್ಬದಂದು ಜನರು ಕಿಕ್ಕಿರುವುದು ಸೇರುವ ಮೊಸರು ಕುಡಿಕೆಯ ವಿಡಿಯೋವೊಂದು ವೈರಲ್ ಆಗುತ್ತಿದೆ. ಇದರಲ್ಲಿ ವಿಶೇಷ ಏನೆಂದರೆ, ಮಹಿಳೆಯರೇ ರಚಿಸಿದ ಪಿರಮಿಟ್ ಮೇಲೆ ಹತ್ತಿದ ವೃದ್ಧೆಯೊಬ್ಬರು ಮಡಕೆಯನ್ನು ಹೊಡೆದಿದ್ದಾರೆ.  ಮಹಾರಾಷ್ಟ್ರ ರಾಜ್ಯದ ಪ್ರದೇಶವೊಂದರಲ್ಲಿ ನಡೆದ ಮೊಸರು ಕುಡಿಕೆ ಉತ್ಸವದಲ್ಲಿ ಈ ದೃಶ್ಯಾವಳಿಯನ್ನು ಸೆರೆಹಿಡಿಯಲಾಗಿದೆ.

ಈ ವಿಡಿಯೋವನ್ನು ಶಿವಸೇನಾ ನಾಯಕಿ ಪ್ರಿಯಾಂಕಾ ಚತುರ್ವೇದಿ ಅವರು ತಮ್ಮ ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡಿದ್ದು, “ವಯಸ್ಸು ಎಂಬುದು ನಾವು ಎಣಿಸುವ ಸಂಖ್ಯೆ” ಎಂದು ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ. ಈ ವಿಡಿಯೋ ವೈರಲ್ ಪಡೆದು 13ಸಾವಿರಕ್ಕೂ ಹೆಚ್ಚು ವೀಕ್ಷಣೆಗಳನ್ನು ಸಂಗ್ರಹಿಸಿದ್ದು, ನೂರಾರು ಲೈಕ್​ಗಳು ಗಿಟ್ಟಿಸಿಕೊಂಡಿದೆ.

ವೈರಲ್ ವಿಡಿಯೋದಲ್ಲಿ ಇರುವಂತೆ, ಮೊಸರು ಕುಡಿಕೆ ಕಾರ್ಯಕ್ರಮದ ಹಿನ್ನೆಲೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಬಂದು ಗುಂಪು ಸೇರಿದ್ದಾರೆ. ಕುಡಿಕೆಯನ್ನು ಹೊಡೆಯಲು ಮಹಿಳೆಯರು ಸಜ್ಜಾಗಿ ನಿಂತಿರುತ್ತಾರೆ. ಅದರಂತೆ ಪಿರಮಿಡ್ ಮೇಲೆ ಹತ್ತಿದ ವೃದ್ಧೆಯೊಬ್ಬರು, ತಮ್ಮ ದೇಹವನ್ನು ಸಮತೋಲನ ಮಾಡಿಕೊಂಡು ಮಡಕೆಯನ್ನು ಹೊಡೆದು ಕ್ಷಣಾರ್ಥದಲ್ಲೇ ಕೆಳಗೆ ಬಿದ್ದಿದ್ದಾರೆ. ಅಷ್ಟೇ ಅಲ್ಲದೆ ಮಡಕೆಯನ್ನು ಹೊಡೆದ ಖುಷಿಯಲ್ಲಿ ಮಹಿಳೆಯರು, ಹೆಣ್ಣುಮಕ್ಕಳು ಎಲ್ಲರೂ ಖುಷಿಯಿಂದ ನಲಿಯುವುದನ್ನು ಕಾಣಬಹುದು.

ಮತ್ತಷ್ಟು ಟ್ರೆಂಡಿಂಗ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:35 pm, Sun, 21 August 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ