AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮೊಸರು ಕುಡಿಕೆ ಉತ್ಸವದಲ್ಲಿ ಪಿರಮಿಡ್ ಹತ್ತಿ ಮಡಕೆ ಹೊಡೆದ ವೃದ್ಧೆ

ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಆಯೋಜಿಸಿದ್ದ ಮೊಸರು ಕುಡಿಕೆ ಉತ್ಸವದಲ್ಲಿ ವೃದ್ಧೆಯೊಬ್ಬರು ಪಿರಮಿಡ್ ಹತ್ತಿ ಮಡಕೆಯನ್ನು ಹೊಡೆದಿದ್ದಾರೆ. ಇದರ ವಿಡಿಯೋ ಇಲ್ಲಿದೆ ನೋಡಿ.

Viral Video: ಮೊಸರು ಕುಡಿಕೆ ಉತ್ಸವದಲ್ಲಿ ಪಿರಮಿಡ್ ಹತ್ತಿ ಮಡಕೆ ಹೊಡೆದ ವೃದ್ಧೆ
ಪಿರಮಿಡ್ ಹತ್ತಿ ಮಡಕೆ ಹೊಡೆದ ವೃದ್ಧೆ
TV9 Web
| Updated By: Rakesh Nayak Manchi|

Updated on:Aug 21, 2022 | 2:35 PM

Share

ಶ್ರೀಕೃಷ್ಣ ಜನ್ಮಾಷ್ಟಮಿ ಹಬ್ಬವನ್ನು ವಿಜ್ರಂಭಣೆಯಿಂದ ಆಚರಿಸಿ ಇದೀಗ ಗಣೇಶ ಹಬ್ಬಕ್ಕೆ ಭರ್ಜರಿ ತಯಾರಿಗಳನ್ನು ನಡೆಸಲಾಗುತ್ತಿದೆ. ಈ ನಡುವೆ ಕೃಷ್ಣ ಜನ್ಮಾಷ್ಟಮಿ ಹಬ್ಬದಂದು ಜನರು ಕಿಕ್ಕಿರುವುದು ಸೇರುವ ಮೊಸರು ಕುಡಿಕೆಯ ವಿಡಿಯೋವೊಂದು ವೈರಲ್ ಆಗುತ್ತಿದೆ. ಇದರಲ್ಲಿ ವಿಶೇಷ ಏನೆಂದರೆ, ಮಹಿಳೆಯರೇ ರಚಿಸಿದ ಪಿರಮಿಟ್ ಮೇಲೆ ಹತ್ತಿದ ವೃದ್ಧೆಯೊಬ್ಬರು ಮಡಕೆಯನ್ನು ಹೊಡೆದಿದ್ದಾರೆ.  ಮಹಾರಾಷ್ಟ್ರ ರಾಜ್ಯದ ಪ್ರದೇಶವೊಂದರಲ್ಲಿ ನಡೆದ ಮೊಸರು ಕುಡಿಕೆ ಉತ್ಸವದಲ್ಲಿ ಈ ದೃಶ್ಯಾವಳಿಯನ್ನು ಸೆರೆಹಿಡಿಯಲಾಗಿದೆ.

ಈ ವಿಡಿಯೋವನ್ನು ಶಿವಸೇನಾ ನಾಯಕಿ ಪ್ರಿಯಾಂಕಾ ಚತುರ್ವೇದಿ ಅವರು ತಮ್ಮ ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡಿದ್ದು, “ವಯಸ್ಸು ಎಂಬುದು ನಾವು ಎಣಿಸುವ ಸಂಖ್ಯೆ” ಎಂದು ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ. ಈ ವಿಡಿಯೋ ವೈರಲ್ ಪಡೆದು 13ಸಾವಿರಕ್ಕೂ ಹೆಚ್ಚು ವೀಕ್ಷಣೆಗಳನ್ನು ಸಂಗ್ರಹಿಸಿದ್ದು, ನೂರಾರು ಲೈಕ್​ಗಳು ಗಿಟ್ಟಿಸಿಕೊಂಡಿದೆ.

ವೈರಲ್ ವಿಡಿಯೋದಲ್ಲಿ ಇರುವಂತೆ, ಮೊಸರು ಕುಡಿಕೆ ಕಾರ್ಯಕ್ರಮದ ಹಿನ್ನೆಲೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಬಂದು ಗುಂಪು ಸೇರಿದ್ದಾರೆ. ಕುಡಿಕೆಯನ್ನು ಹೊಡೆಯಲು ಮಹಿಳೆಯರು ಸಜ್ಜಾಗಿ ನಿಂತಿರುತ್ತಾರೆ. ಅದರಂತೆ ಪಿರಮಿಡ್ ಮೇಲೆ ಹತ್ತಿದ ವೃದ್ಧೆಯೊಬ್ಬರು, ತಮ್ಮ ದೇಹವನ್ನು ಸಮತೋಲನ ಮಾಡಿಕೊಂಡು ಮಡಕೆಯನ್ನು ಹೊಡೆದು ಕ್ಷಣಾರ್ಥದಲ್ಲೇ ಕೆಳಗೆ ಬಿದ್ದಿದ್ದಾರೆ. ಅಷ್ಟೇ ಅಲ್ಲದೆ ಮಡಕೆಯನ್ನು ಹೊಡೆದ ಖುಷಿಯಲ್ಲಿ ಮಹಿಳೆಯರು, ಹೆಣ್ಣುಮಕ್ಕಳು ಎಲ್ಲರೂ ಖುಷಿಯಿಂದ ನಲಿಯುವುದನ್ನು ಕಾಣಬಹುದು.

ಮತ್ತಷ್ಟು ಟ್ರೆಂಡಿಂಗ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:35 pm, Sun, 21 August 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?