AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕೆಎಸ್​ಆರ್​ಟಿಸಿ ಬಸ್​ನಲ್ಲಿ ಅಣ್ಣವ್ರ ಹಾಡು ಹಾಡಿದ ಕಂಡಕ್ಟರ್; ಗಾಯನಕ್ಕೆ ಮನಸೋತ ಪ್ರಯಾಣಿಕರು

ಪ್ರತಿಭೆ ಅನಾವರಣಕ್ಕೆ ಅಲಂಕರಿಸಿದ ವೇದಿಕೆಯೇ ಆಗಬೇಕೆಂದಿಲ್ಲ, ತಾವು ನಿಂತಲ್ಲೇ ತಮ್ಮ ಪ್ರತಿಭೆಯನ್ನು ಹೊರಹಾಕಿ ಜನರ ಮನಸ್ಸನ್ನು ಗೆಲ್ಲಬಹುದು ಎಂಬುದಕ್ಕೆ ಈ ಬಸ್ ನಿರ್ವಾಹಕನೇ ಸಾಕ್ಷಿ.

Viral Video: ಕೆಎಸ್​ಆರ್​ಟಿಸಿ ಬಸ್​ನಲ್ಲಿ ಅಣ್ಣವ್ರ ಹಾಡು ಹಾಡಿದ ಕಂಡಕ್ಟರ್; ಗಾಯನಕ್ಕೆ ಮನಸೋತ ಪ್ರಯಾಣಿಕರು
ಕೆಎಸ್​ಆರ್​ಟಿಸಿ ಬಸ್ ನಿರ್ವಾಹಕನ ಗಾಯನಕ್ಕೆ ಮನಸೋತ ಪ್ರಯಾಣಿಕರು
TV9 Web
| Edited By: Rakesh Nayak Manchi|

Updated on:Sep 20, 2022 | 7:37 PM

Share

ಪ್ರತಿಭೆ ಅನಾವರಣಕ್ಕೆ ಅಲಂಕರಿಸಿದ ವೇದಿಕೆಯೇ ಆಗಬೇಕೆಂದಿಲ್ಲ, ತಾವು ನಿಂತಲ್ಲೇ ತಮ್ಮ ಪ್ರತಿಭೆಯನ್ನು ಹೊರಹಾಕಿ ಜನರ ಮನಸ್ಸನ್ನು ಗೆಲ್ಲಬಹುದು ಎಂಬುದಕ್ಕೆ ಈ ಬಸ್ ನಿರ್ವಾಹಕನೇ ಸಾಕ್ಷಿ. ತನ್ನ ಗಾಯನಿಂದಲೇ ಕೆಎಸ್​ಆರ್​ಟಿಸಿ ಬಸ್ ಕಂಡೆಕ್ಟರ್ ಪ್ರಯಾಣಿಕರನ್ನು ಮನಸೋಲುವಂತೆ ಮಾಡಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಇದರ ವಿಡಿಯೋ ವೈರಲ್ (Video Viral) ಆಗುತ್ತಿದ್ದು, ನೆಟ್ಟಿಗರು ಕೂಡ ಅವರ ಗಾಯನಕ್ಕೆ ಫಿದಾ ಆಗಿದ್ದಾರೆ.

ಚಾಮರಾಜನಗರ ಹೋಗೆನಕಲ್​ಗೆ ತೆರಳುತ್ತಿದ್ದ ಸರ್ಕಾರಿ ಬಸ್​ನ ನಿರ್ವಾಹಕರಾಗಿರುವ ಹೇಮಂತ್, ಎಂದಿನಂತೆ ಪ್ರಯಾಣಿಕರಿಗೆ ಟಿಕೆಟ್ ಕೊಟ್ಟು ಬೈಕ್ ಹಿಡಿದು ಹಾಡಲು ಆರಂಭಿಸಿದ್ದಾರೆ. ಡಾ.ರಾಜ್​ಕುಮಾರ್ ಅವರು ಅಭಿನಯದ ‘ನಿನ್ನ ಕಂಗಳ ಬಿಸಿಯ ಹನಿಗಳು’ ಎಂಬ ಹಾಡನ್ನು ಹಾಡಿ ಪ್ರಯಾಣಿಕರನ್ನು ರಂಜಿಸಿದ್ದಾರೆ.

ಹೇಮಂತ್ ಅವರು ತಮ್ಮ ಸುಮಧುರ ಕಂಠದಿಂದ ಅಣ್ಣವ್ರ ಹಾಡನ್ನು ಹಾಡಲು ಪ್ರಾರಂಭಿಸಿದಾಗ ಬಸ್​ನಲ್ಲಿದ್ದ ಪ್ರಯಾಣಿಕರು ತಮ್ಮ ಮೊಬೈಲ್ ಕ್ಯಾಮರಾವನ್ನು ತೆರೆದು ವಿಡಿಯೋ ಮಾಡಿಕೊಂಡಿದ್ದಾರೆ. ಹೀಗೆ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಹೇಮಂತ್ ಅವರ ಗಾಯನ ಪ್ರತಿಭೆಗೆ ನೆಟ್ಟಿಗರು ಕೂಡ ಮನಸೋತಿದ್ದು, ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಹೇಮಂತ್ ಅವರ ವೈರಲ್ ವಿಡಿಯೋ ಇಲ್ಲಿದೆ:

ಮತ್ತಷ್ಟು ವೈರಲ್ ವಿಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Published On - 7:37 pm, Tue, 20 September 22

Follow Us
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್