AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕೆಎಸ್​ಆರ್​ಟಿಸಿ ಬಸ್​ನಲ್ಲಿ ಅಣ್ಣವ್ರ ಹಾಡು ಹಾಡಿದ ಕಂಡಕ್ಟರ್; ಗಾಯನಕ್ಕೆ ಮನಸೋತ ಪ್ರಯಾಣಿಕರು

ಪ್ರತಿಭೆ ಅನಾವರಣಕ್ಕೆ ಅಲಂಕರಿಸಿದ ವೇದಿಕೆಯೇ ಆಗಬೇಕೆಂದಿಲ್ಲ, ತಾವು ನಿಂತಲ್ಲೇ ತಮ್ಮ ಪ್ರತಿಭೆಯನ್ನು ಹೊರಹಾಕಿ ಜನರ ಮನಸ್ಸನ್ನು ಗೆಲ್ಲಬಹುದು ಎಂಬುದಕ್ಕೆ ಈ ಬಸ್ ನಿರ್ವಾಹಕನೇ ಸಾಕ್ಷಿ.

Viral Video: ಕೆಎಸ್​ಆರ್​ಟಿಸಿ ಬಸ್​ನಲ್ಲಿ ಅಣ್ಣವ್ರ ಹಾಡು ಹಾಡಿದ ಕಂಡಕ್ಟರ್; ಗಾಯನಕ್ಕೆ ಮನಸೋತ ಪ್ರಯಾಣಿಕರು
ಕೆಎಸ್​ಆರ್​ಟಿಸಿ ಬಸ್ ನಿರ್ವಾಹಕನ ಗಾಯನಕ್ಕೆ ಮನಸೋತ ಪ್ರಯಾಣಿಕರು
TV9 Web
| Edited By: |

Updated on:Sep 20, 2022 | 7:37 PM

Share

ಪ್ರತಿಭೆ ಅನಾವರಣಕ್ಕೆ ಅಲಂಕರಿಸಿದ ವೇದಿಕೆಯೇ ಆಗಬೇಕೆಂದಿಲ್ಲ, ತಾವು ನಿಂತಲ್ಲೇ ತಮ್ಮ ಪ್ರತಿಭೆಯನ್ನು ಹೊರಹಾಕಿ ಜನರ ಮನಸ್ಸನ್ನು ಗೆಲ್ಲಬಹುದು ಎಂಬುದಕ್ಕೆ ಈ ಬಸ್ ನಿರ್ವಾಹಕನೇ ಸಾಕ್ಷಿ. ತನ್ನ ಗಾಯನಿಂದಲೇ ಕೆಎಸ್​ಆರ್​ಟಿಸಿ ಬಸ್ ಕಂಡೆಕ್ಟರ್ ಪ್ರಯಾಣಿಕರನ್ನು ಮನಸೋಲುವಂತೆ ಮಾಡಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಇದರ ವಿಡಿಯೋ ವೈರಲ್ (Video Viral) ಆಗುತ್ತಿದ್ದು, ನೆಟ್ಟಿಗರು ಕೂಡ ಅವರ ಗಾಯನಕ್ಕೆ ಫಿದಾ ಆಗಿದ್ದಾರೆ.

ಚಾಮರಾಜನಗರ ಹೋಗೆನಕಲ್​ಗೆ ತೆರಳುತ್ತಿದ್ದ ಸರ್ಕಾರಿ ಬಸ್​ನ ನಿರ್ವಾಹಕರಾಗಿರುವ ಹೇಮಂತ್, ಎಂದಿನಂತೆ ಪ್ರಯಾಣಿಕರಿಗೆ ಟಿಕೆಟ್ ಕೊಟ್ಟು ಬೈಕ್ ಹಿಡಿದು ಹಾಡಲು ಆರಂಭಿಸಿದ್ದಾರೆ. ಡಾ.ರಾಜ್​ಕುಮಾರ್ ಅವರು ಅಭಿನಯದ ‘ನಿನ್ನ ಕಂಗಳ ಬಿಸಿಯ ಹನಿಗಳು’ ಎಂಬ ಹಾಡನ್ನು ಹಾಡಿ ಪ್ರಯಾಣಿಕರನ್ನು ರಂಜಿಸಿದ್ದಾರೆ.

ಹೇಮಂತ್ ಅವರು ತಮ್ಮ ಸುಮಧುರ ಕಂಠದಿಂದ ಅಣ್ಣವ್ರ ಹಾಡನ್ನು ಹಾಡಲು ಪ್ರಾರಂಭಿಸಿದಾಗ ಬಸ್​ನಲ್ಲಿದ್ದ ಪ್ರಯಾಣಿಕರು ತಮ್ಮ ಮೊಬೈಲ್ ಕ್ಯಾಮರಾವನ್ನು ತೆರೆದು ವಿಡಿಯೋ ಮಾಡಿಕೊಂಡಿದ್ದಾರೆ. ಹೀಗೆ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಹೇಮಂತ್ ಅವರ ಗಾಯನ ಪ್ರತಿಭೆಗೆ ನೆಟ್ಟಿಗರು ಕೂಡ ಮನಸೋತಿದ್ದು, ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಹೇಮಂತ್ ಅವರ ವೈರಲ್ ವಿಡಿಯೋ ಇಲ್ಲಿದೆ:

ಮತ್ತಷ್ಟು ವೈರಲ್ ವಿಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Published On - 7:37 pm, Tue, 20 September 22

ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!