ನೇಪಾಳ ವಿಮಾನ ದುರಂತಕ್ಕೂ ಮುನ್ನ ಕೊನೆಯ ಟಿಕ್​ಟಾಕ್​ ಮಾಡಿದ ಗಗನಸಖಿಯ ವಿಡಿಯೋ ವೈರಲ್

Pokhara Plane Crash : ವಿಮಾನ ಅಪಘಾತವಾಗುವಾಗ ಸೆರೆಯಾದ ವಿಡಿಯೋ ಇಲ್ಲಿದೆ. ಹಾಗೆಯೇ ನೇಪಾಳದ ಜನಪ್ರಿಯ ಟಿಕ್​ಟಾಕರ್​, ಗಗನಸಖಿ ಈ ವಿಮಾನ ಪತನಗೊಳ್ಳುವ ಮೊದಲು ಚಿತ್ರೀಕರಿಸಿದ ಕೊನೆಯ ಟಿಕ್​ಟಾಕ್​ ವಿಡಿಯೋ ಕೂಡ ಇಲ್ಲಿದೆ.

ನೇಪಾಳ ವಿಮಾನ ದುರಂತಕ್ಕೂ ಮುನ್ನ ಕೊನೆಯ ಟಿಕ್​ಟಾಕ್​ ಮಾಡಿದ ಗಗನಸಖಿಯ ವಿಡಿಯೋ ವೈರಲ್
ವಿಮಾನ ಅಪಘಾತಕ್ಕೆ ಮೊದಲು ಟಿಕ್​ಟಾಕ್ ವಿಡಿಯೋ ಮಾಡಿದ ಗಗನಸಖಿ ಓಷಿನ್ ಏಲ್
Follow us
| Updated By: ಶ್ರೀದೇವಿ ಕಳಸದ

Updated on:Jan 17, 2023 | 10:52 AM

Viral Video : ಯೇಟಿ ಏರ್​ಲೈನ್ಸ್​ನ (Yeti Airlines) ವಿಮಾನವು ಭಾನುವಾರದಂದು ನೇಪಾಳದಲ್ಲಿ ಪತನಗೊಳ್ಳುವ ಮೊದಲು ಗಗನಸಖಿಯೊಬ್ಬಳು ಮಾಡಿದ ಕೊನೆಯ ಟಿಕ್​ಟಾಕ್​ ವಿಡಿಯೋ ಇದೀಗ ವೈರಲ್ ಆಗಿದೆ. ಈ ದುರಂತದಲ್ಲಿ ಸಾವನ್ನಪ್ಪಿದ ನಾಲ್ಕು ಸಿಬ್ಬಂದಿಗಳ ಪೈಕಿ ಗಗನಸಖಿ ಓಷಿನ್​ ಏಲ್ (Oshin Ale) ಕೂಡ ಒಬ್ಬರು. ಇವರು ನೇಪಾಳದ ಪ್ರಸಿದ್ಧ ಟಿಕ್​ಟಾಕರ್ (TikToker) ಆಗಿದ್ದರು. ಯಾರಿಗೆ ಗೊತ್ತಿತ್ತು, ಈ ನಗು ಹೀಗೆ ಮಾಸುತ್ತದೆಯೆಂದು. ನೋಡಿ ಏಷಿನ್ ಕೊನೆಯ ವಿಡಿಯೋ.

Moneycontrol ವರದಿಯ ಪ್ರಕಾರ, ಪೊಖಾರಾದಲ್ಲಿ ನಿರ್ಮಾಣಗೊಂಡ ಹೊಸ ವಿಮಾನ ನಿಲ್ದಾಣದಲ್ಲಿ ವಿಮಾನವು ಇಳಿಯುವ ಸಂದರ್ಭದಲ್ಲಿ ನದಿಯ ಕಮರಿಗೆ ಬಿದ್ದು ದುರಂತಕ್ಕೀಡಾಗಿದೆ. ಈ ವಿಮಾನದಲ್ಲಿ ಭಾರತೀಯರು ಸೇರಿದಂತೆ 72 ಪ್ರಯಾಣಿಕ ಪೈಕಿ 68 ಜನರು ಸಾವನ್ನಪ್ಪಿದ್ದಾರೆ. ವಿಮಾನವು ದುರಂತಕ್ಕೆ ಈಡಾಗುವ ಹೃದಯವಿದ್ರಾವಕ ಕ್ಷಣಗಳು ಇಲ್ಲಿವೆ.

TW śmierć, katastrofa

ಭಾರತೀಯ ಪ್ರಯಾಣಿಕರೊಬ್ಬರು ಅಪಘಾತಕ್ಕೆ ಮೊದಲು ಕೆಲ ಕ್ಷಣಗಳ ಕಾಲ ಫೇಸ್​ಬುಕ್​ ಲೈವ್​ ಸ್ಟ್ರೀಮ್ ಮಾಡಿದ್ಧಾರೆ. ಇದೀಗ ಈ ವಿಡಿಯೋ ಅಂತರ್ಜಾಲದಲ್ಲಿ ಹರಿದಾಡುತ್ತಿದೆ. ಉತ್ತರ ಪ್ರದೇಶದ ಘಾಝೀಪುರದ ನಾಲ್ವರು ಪ್ರಯಾಣಿಕರಲ್ಲಿ ಒಬ್ಬರಾದ ಸೋನು ಜೈಸ್ವಾಲ್ ಈ ವಿಡಿಯೋ ರೆಕಾರ್ಡ್ ಮಾಡಿದ್ದಾರೆ. ಇವರೂ ಕೂಡ ಅಪಘಾತದಲ್ಲಿ ಮಡಿದಿದ್ಧಾರೆ.

ಇದನ್ನೂ ಓದಿ : Pokhara Air Crash ಪೋಖರಾದಲ್ಲಿ ನಡೆದದ್ದು ನೇಪಾಳದಲ್ಲಿ 30 ವರ್ಷಗಳಲ್ಲಿ ನಡೆದ ಅತ್ಯಂತ ಭೀಕರ ವಿಮಾನ ಅಪಘಾತ

ನೇಪಾಳದ ಮಾಜಿ ಸಂಸದ ಮತ್ತು ನೇಪಾಳ ಕಾಂಗ್ರೆಸ್‌ ಕೇಂದ್ರ ಸಮಿತಿಯ ಸದಸ್ಯ ಅಭಿಷೇಕ್ ಪ್ರತಾಪ್ ಷಾ, ‘ನಾನು ಈ ವಿಡಿಯೋ ಅನ್ನು ಸ್ನೇಹಿತನಿಂದ ಪಡೆದುಕೊಂಡಿದ್ದೇನೆ. ಅಪಘಾತದ ನಂತರ ಅವಶೇಷಗಳಡಿ ಈ ಮೊಬೈಲ್​ ಸಿಕ್ಕಿದೆ. ಮೊದಲ ಸಲ ಇಂಥ ಭಯಾನಕ ದೃಶ್ಯವನ್ನು ನೋಡಿದ್ದು. ಇದು ತುಂಬಾ ನೋವು ತರುವಂಥ ವಿಷಯ, ದೊಡ್ಡ ದುರಂತ’ ಎಂದು ಅವರು ಟ್ವೀಟ್ ಮಾಡಿದ್ಧಾರೆ.

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 10:44 am, Tue, 17 January 23

ತಾಜಾ ಸುದ್ದಿ
ದರ್ಶನ್​ಗೆ ಲಕ್ಷ ಲಕ್ಷ ಹಣ ಕೊಟ್ಟಿದ್ದಕ್ಕೆ ಕಾರಣ ನೀಡಿದ ಮಾಜಿ ಮೇಯರ್
ದರ್ಶನ್​ಗೆ ಲಕ್ಷ ಲಕ್ಷ ಹಣ ಕೊಟ್ಟಿದ್ದಕ್ಕೆ ಕಾರಣ ನೀಡಿದ ಮಾಜಿ ಮೇಯರ್
ಕ್ಲಿಕ್ ಮಾಡುತ್ತಿದ್ದಂತೆ ಇನ್​ಸ್ಟಂಟ್ ಫೋಟೊ ಪ್ರಿಂಟ್
ಕ್ಲಿಕ್ ಮಾಡುತ್ತಿದ್ದಂತೆ ಇನ್​ಸ್ಟಂಟ್ ಫೋಟೊ ಪ್ರಿಂಟ್
Nithya Bhavishya: ಈ ರಾಶಿಯವರು ಹಣ ಕಳೆದುಕೊಂಡು ಚಿಂತಿತರಾಗುವ ಸಾಧ್ಯತೆ
Nithya Bhavishya: ಈ ರಾಶಿಯವರು ಹಣ ಕಳೆದುಕೊಂಡು ಚಿಂತಿತರಾಗುವ ಸಾಧ್ಯತೆ
Daily Devotional: ಸಾವಿನ ಮನೆಯಲ್ಲಿ ಈ ಕೆಲಸ ಯಾವತ್ತೂ ಮಾಡಬೇಡಿ
Daily Devotional: ಸಾವಿನ ಮನೆಯಲ್ಲಿ ಈ ಕೆಲಸ ಯಾವತ್ತೂ ಮಾಡಬೇಡಿ
ತುಮಕೂರಿನಲ್ಲಿ ವಿದ್ಯುತ್​ ಟ್ರಾನ್ಸ್​ಫಾರ್ಮರ್ ಏರಿ ​​ವ್ಯಕ್ತಿಯ ಹುಚ್ಚಾಟ
ತುಮಕೂರಿನಲ್ಲಿ ವಿದ್ಯುತ್​ ಟ್ರಾನ್ಸ್​ಫಾರ್ಮರ್ ಏರಿ ​​ವ್ಯಕ್ತಿಯ ಹುಚ್ಚಾಟ
ರೇಣುಕಾಸ್ವಾಮಿ ಕೊಲೆಯಾದ ದಿನ ಆ ಶೆಡ್​ಗೆ ಬಂದಿದ್ದ ಎಂಎಲ್​ಎ ಆಪ್ತ; ಯಾರವನು?
ರೇಣುಕಾಸ್ವಾಮಿ ಕೊಲೆಯಾದ ದಿನ ಆ ಶೆಡ್​ಗೆ ಬಂದಿದ್ದ ಎಂಎಲ್​ಎ ಆಪ್ತ; ಯಾರವನು?
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ