AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಸಿಬಿ ಮೂಲಕ 20ಲಕ್ಷಕ್ಕೂ ಅಧಿಕ ಹಣದ ಸುರಿಮಳೆ: ಐಷಾರಾಮಿ ಮದುವೆಯ ವಿಡಿಯೋ ವೈರಲ್​​

ಉತ್ತರ ಪ್ರದೇಶದ ಸಿದ್ಧಾರ್ಥನಗರದಲ್ಲಿ ನಡೆದ ಅದ್ಧೂರಿ ಮದುವೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಜೆಸಿಬಿಗಳ ಮೂಲಕ 20 ಲಕ್ಷ ರೂಪಾಯಿಗಳಿಗೂ ಅಧಿಕ ಹಣವನ್ನು ನವದಂಪತಿಗಳ ಮೇಲೆ ಸುರಿಯಲಾಗಿದೆ. ದುಡ್ಡು ಹೆಚ್ಚಾದರೆ ಬಡವರಿಗೆ ದಾನ ಮಾಡಿ ಎಂದು ಸಾಕಷ್ಟು ಜನರು ಕಾಮೆಂಟ್​​ನಲ್ಲಿ ಬರೆದುಕೊಂಡಿದ್ದಾರೆ.

ಜೆಸಿಬಿ ಮೂಲಕ 20ಲಕ್ಷಕ್ಕೂ ಅಧಿಕ ಹಣದ  ಸುರಿಮಳೆ: ಐಷಾರಾಮಿ ಮದುವೆಯ ವಿಡಿಯೋ ವೈರಲ್​​
ಅಕ್ಷತಾ ವರ್ಕಾಡಿ
|

Updated on: Nov 20, 2024 | 12:00 PM

Share

ಉತ್ತರ ಪ್ರದೇಶದ ಸಿದ್ಧಾರ್ಥನಗರದ ಅದ್ಧೂರಿ ವಿವಾಹದ ವಿಡಿಯೋ ಸೋಶಿಯಲ್​​ ಮೀಡಿಯಾಗಳಲ್ಲಿ ಭಾರೀ ವೈರಲ್​ ಆಗುತ್ತಿದೆ. ಸಾಮಾನ್ಯವಾಗಿ ಮದುವೆಯಲ್ಲಿ ಹೂವಿನ ಸ್ವಾಗತ ಮಾಡಿದರೆ, ಈ ಮದುವೆಯಲ್ಲಿ ಕಂತು ಕಂತು ಹಣಗಳನ್ನು ಎಸೆದು ನವ ದಂಪತಿಗಳನ್ನು ಸ್ವಾಗತಿಸಲಾಗಿದೆ. ಸುಮಾರು 20ಲಕ್ಷಕ್ಕೂ ಅಧಿಕ ಹಣದ ಸರಿಮಳೆಯನ್ನು ಸುರಿಸಲಾಗಿದೆ ಎಂದು ವರದಿಯಾಗಿದೆ.

ವೈರಲ್​ ಆಗಿರುವ ವಿಡಿಯೋದಲ್ಲಿ ವರ ಹಾಗೂ ವಧುವಿನ ಸಂಬಂಧಿಕರು ಜೆಸಿಬಿಗಳ ಮೇಲೆ ಹತ್ತಿ 100, 200 ಮತ್ತು 500 ರೂಪಾಯಿಗಳ ರಾಶಿ ರಾಶಿ ನೋಟುಗಳನ್ನು ಎಸೆಯುತ್ತಿರುವುದು ಸೆರೆಯಾಗಿದೆ. ವೀಡಿಯೊದಲ್ಲಿ, ಅತಿಥಿಗಳು ವರನನ್ನು ಹೊತ್ತ ರಥದ ಮೇಲೆ ನಗದು ಸುರಿಯಲು ಎರಡು ಜೆಸಿಬಿಗಳ ಮೇಲೆ ಹತ್ತುತ್ತಿರುವುದು ಮತ್ತು ಆಚರಣೆಯನ್ನು ವೀಕ್ಷಿಸಲು ಇತರ ಜನರು ಆವರಣದಲ್ಲಿ ಜಮಾಯಿಸಿರುವುದು. ಜನರು ತಮ್ಮ ಕಟ್ಟಡಗಳ ಟೆರೇಸ್ ಮತ್ತು ಬಾಲ್ಕನಿಯಲ್ಲಿ ನಗದು ನೋಟುಗಳನ್ನು ಸುರಿಯಲು ನಿಂತಿರುವುದು ಕಂಡುಬಂದಿದೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಮಹಿಳಾ ರೋಗಿಗಳ ಮುಂದೆ ಹೆರಿಗೆ ವಾರ್ಡ್‌ನಲ್ಲಿ ಹಸ್ತಮೈಥುನ ಮಾಡುತ್ತಾ ವಿಕೃತಿ ಮೆರೆದ ವ್ಯಕ್ತಿ

entertainmenthers ಎಂಬ ಯೂಟ್ಯೂಬ್​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ವೈರಲ್​ ಆಗುತ್ತಿದೆ. ದುಡ್ಡು ಹೆಚ್ಚಾದರೆ ಬಡವರಿಗೆ ದಾನ ಮಾಡಿ ಎಂದು ಸಾಕಷ್ಟು ಜನರು ಕಾಮೆಂಟ್​​ನಲ್ಲಿ ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ