ಅಪ್ಪ ಅಮ್ಮ ಇಲ್ಲದಿದ್ರೆ ಸತ್ತೇ ಹೋಗ್ತಿದ್ವಿ; ಚಿರತೆಯಿಂದ ಕಾಪಾಡಿದ ಮುಳ್ಳುಹಂದಿಗಳ ವಿಡಿಯೋ ವೈರಲ್

Porcupine : ಮುಳ್ಳುಹಂದಿಗಳ ಕುಟುಂಬವೊಂದು ರಸ್ತೆ ದಾಟುವುದಕ್ಕೂ ಚಿರತೆ ಬೇಟೆಗಾಗಿ ಹೊಂಚು ಹಾಕುವುದಕ್ಕೂ ತಾಳೆಯಾಗಿದೆ. ಆದರೂ ತಮ್ಮ ಮರಿಗಳನ್ನು ಕಾಪಾಡಿಕೊಳ್ಳಲು ಮುಳ್ಳುಹಂದಿಗಳು ಸಾಕಷ್ಟು ಹೋರಾಡಿವೆ.

ಅಪ್ಪ ಅಮ್ಮ ಇಲ್ಲದಿದ್ರೆ ಸತ್ತೇ ಹೋಗ್ತಿದ್ವಿ; ಚಿರತೆಯಿಂದ ಕಾಪಾಡಿದ ಮುಳ್ಳುಹಂದಿಗಳ ವಿಡಿಯೋ ವೈರಲ್
ಚಿರತೆಯಿಂದ ತಮ್ಮ ಮರಿಗಳನ್ನು ರಕ್ಷಿಸುತ್ತಿರುವ ಮುಳ್ಳುಹಂದಿಗಳು
Follow us
| Updated By: ಶ್ರೀದೇವಿ ಕಳಸದ

Updated on:Jan 21, 2023 | 4:03 PM

Viral Video : ಅಪ್ಪ ಅಮ್ಮನೊಂದಿಗೆ ಈ ಇಬ್ಬರೂ ಮರಿಮುಳ್ಳುಹಂದಿಗಳು ರಸ್ತೆ ದಾಟುತ್ತಿದ್ದರು. ಎಷ್ಟೊತ್ತಿನಿಂದ ಹಸಿದುಕೊಂಡು ಬೇಟೆಗಾಗಿ ಹೊಂಚು ಹಾಕುತ್ತಿತ್ತೋ ಈ ಚಿರತೆ ಮರಿಗಳ ಮೇಲೆ ಕಣ್ಣು ನೆಟ್ಟೇಬಿಟ್ಟಿತು. ಮರಿಗಳು ಕಂಗಾಲಾಗಿ ಕೂಗಾಡಲಾರಂಭಿಸಿದವು. ಅವುಗಳ ಅಪ್ಪ ಅಮ್ಮ ತನ್ನ ಚೂಪಾದ ಮುಳ್ಳುಗಳನ್ನು ಮತ್ತಷ್ಟು ನಿಗುರಿಸಿಕೊಂಡು ಚಿರತೆಯೊಂದಿಗೆ ಕಾದಾಡಲು ಶುರು ಮಾಡಿದವು. ಇದೀಗ ಈ ವಿಡಿಯೋ ವೈರಲ್ ಆಗುತ್ತಿದ್ದು ಈ ಮುಳ್ಳುಹಂದಿಗಳನ್ನು ನೆಟ್ಟಿಗರು ಭಲೇ ಎನ್ನುತ್ತಿದ್ಧಾರೆ.

ಐಎಎಸ್ ಅಧಿಕಾರಿ ಸುಪ್ರಿಯಾ ಸಾಹು ವನ್ಯಜೀವಿಗಳಿಗೆ ಸಂಬಂಧಿಸಿದ ಇಂಥ ಆಸಕ್ತಿಕರ ವಿಡಿಯೋ ಅನ್ನು ಆಗಾಗ ಟ್ವೀಟ್ ಮಾಡುತ್ತಿರುತ್ತಾರೆ. ಇದೀಗ ಅವರು ಟ್ವೀಟ್ ಮಾಡಿರುವ ಈ ವಿಡಿಯೋ, ಮಕ್ಕಳನ್ನು ಪೋಷಿಸುವುದು ಎಂಥ ಜವಾಬ್ದಾರಿಯುತ ಎನ್ನುವುದನ್ನು ತೋರಿಸುತ್ತದೆ. ಈ ವಿಡಿಯೋ ಅನ್ನು ಈತನಕ 2.80 ಲಕ್ಷಕ್ಕೂ ಹೆಚ್ಚು ಜನರು ನೋಡಿದ್ಧಾರೆ. 5,000 ಕ್ಕೂ ಹೆಚ್ಚು ಜನರು ಇಷ್ಟಪಟ್ಟಿದ್ದಾರೆ. 900 ಜನರು ರೀಟ್ವೀಟ್ ಮಾಡಿದ್ಧಾರೆ. ನೂರಾರು ಜನರು ಪ್ರತಿಕ್ರಿಯಿಸಿದ್ಧಾರೆ.

ಇದನ್ನೂ ಓದಿ : ಪಾಕಿಸ್ತಾನದ ಸ್ಕರ್ದೂ ಕಣಿವೆಯಲ್ಲಿ ಕಟ್ಟಿಗೆ ಆಯಲು ಬಂದ ಪುಟ್ಟಿಯ ವಿಡಿಯೋ ವೈರಲ್

ಪ್ರಾಣಿಗಳಲ್ಲಿಯೂ ಪೋಷಕತ್ವ ಎಷ್ಟೊಂದು ತೀವ್ರತರವಾಗಿ ಜಾಗೃತವಾಗಿರುತ್ತದೆಯಲ್ಲ! ಸಲಾಂ ಎಂದಿದ್ದಾರೆ ಒಬ್ಬರು. ವಾಹ್​ ಝೆಡ್​ ಪ್ಲಸ್​ ಸೆಕ್ಯೂರಿಟಿ ಎಂದಿದ್ದಾರೆ ಅನೇಕರು. ಕೊನೆಯಲ್ಲಿ ಏನಾಯಿತು, ಮರಿಗಳು ಸುರಕ್ಷಿತವಾಗಿವೆ ತಾನೆ? ಎಂದು ಅನೇಕರು ಕೇಳಿದ್ದಾರೆ. ಸದ್ಯ ಎಲ್ಲರೂ ಸುರಕ್ಷಿತವಾಗಿದ್ದರೆ ಸಾಕು ಎಂದಿದ್ದಾರೆ ಹಲವರು.

ಇದನ್ನೂ ಓದಿ : ಹೆಂಡತಿ ತವರಿಗೆ; ಕೋಪದಲ್ಲಿ ತನ್ನ ಮರ್ಮಾಂಗವನ್ನೇ ಕತ್ತರಿಸಿಕೊಂಡ ಬಿಹಾರದ ವ್ಯಕ್ತಿ

ಪೋಷಕರು ಎಂದರೆ ಯಾವಾಗಲೂ ಹೀಗೇ ಇರುತ್ತಾರೆ ಎಂದಿದ್ಧಾರೆ ಮತ್ತೊಬ್ಬರು. ತಾಯಿ ಇಲ್ಲಿ ಬಹಳ ಧೈರ್ಯದಿಂದ ಮಕ್ಕಳನ್ನು ರಕ್ಷಿಸಿದ್ದಾರೆ ಮಗದೊಬ್ಬರು. ಪ್ರಕೃತಿಯ ಕಲೆ ಇದು, ಅತ್ಯದ್ಭುತ ಎಂದಿದ್ದಾರೆ ಇನ್ನೂ ಒಬ್ಬರು. ಈ ವಿಡಿಯೋ ನೋಡಿದ ನಿಮ್ಮಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 4:01 pm, Sat, 21 January 23

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ