AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ಪ ಅಮ್ಮ ಇಲ್ಲದಿದ್ರೆ ಸತ್ತೇ ಹೋಗ್ತಿದ್ವಿ; ಚಿರತೆಯಿಂದ ಕಾಪಾಡಿದ ಮುಳ್ಳುಹಂದಿಗಳ ವಿಡಿಯೋ ವೈರಲ್

Porcupine : ಮುಳ್ಳುಹಂದಿಗಳ ಕುಟುಂಬವೊಂದು ರಸ್ತೆ ದಾಟುವುದಕ್ಕೂ ಚಿರತೆ ಬೇಟೆಗಾಗಿ ಹೊಂಚು ಹಾಕುವುದಕ್ಕೂ ತಾಳೆಯಾಗಿದೆ. ಆದರೂ ತಮ್ಮ ಮರಿಗಳನ್ನು ಕಾಪಾಡಿಕೊಳ್ಳಲು ಮುಳ್ಳುಹಂದಿಗಳು ಸಾಕಷ್ಟು ಹೋರಾಡಿವೆ.

ಅಪ್ಪ ಅಮ್ಮ ಇಲ್ಲದಿದ್ರೆ ಸತ್ತೇ ಹೋಗ್ತಿದ್ವಿ; ಚಿರತೆಯಿಂದ ಕಾಪಾಡಿದ ಮುಳ್ಳುಹಂದಿಗಳ ವಿಡಿಯೋ ವೈರಲ್
ಚಿರತೆಯಿಂದ ತಮ್ಮ ಮರಿಗಳನ್ನು ರಕ್ಷಿಸುತ್ತಿರುವ ಮುಳ್ಳುಹಂದಿಗಳು
TV9 Web
| Updated By: ಶ್ರೀದೇವಿ ಕಳಸದ|

Updated on:Jan 21, 2023 | 4:03 PM

Share

Viral Video : ಅಪ್ಪ ಅಮ್ಮನೊಂದಿಗೆ ಈ ಇಬ್ಬರೂ ಮರಿಮುಳ್ಳುಹಂದಿಗಳು ರಸ್ತೆ ದಾಟುತ್ತಿದ್ದರು. ಎಷ್ಟೊತ್ತಿನಿಂದ ಹಸಿದುಕೊಂಡು ಬೇಟೆಗಾಗಿ ಹೊಂಚು ಹಾಕುತ್ತಿತ್ತೋ ಈ ಚಿರತೆ ಮರಿಗಳ ಮೇಲೆ ಕಣ್ಣು ನೆಟ್ಟೇಬಿಟ್ಟಿತು. ಮರಿಗಳು ಕಂಗಾಲಾಗಿ ಕೂಗಾಡಲಾರಂಭಿಸಿದವು. ಅವುಗಳ ಅಪ್ಪ ಅಮ್ಮ ತನ್ನ ಚೂಪಾದ ಮುಳ್ಳುಗಳನ್ನು ಮತ್ತಷ್ಟು ನಿಗುರಿಸಿಕೊಂಡು ಚಿರತೆಯೊಂದಿಗೆ ಕಾದಾಡಲು ಶುರು ಮಾಡಿದವು. ಇದೀಗ ಈ ವಿಡಿಯೋ ವೈರಲ್ ಆಗುತ್ತಿದ್ದು ಈ ಮುಳ್ಳುಹಂದಿಗಳನ್ನು ನೆಟ್ಟಿಗರು ಭಲೇ ಎನ್ನುತ್ತಿದ್ಧಾರೆ.

ಐಎಎಸ್ ಅಧಿಕಾರಿ ಸುಪ್ರಿಯಾ ಸಾಹು ವನ್ಯಜೀವಿಗಳಿಗೆ ಸಂಬಂಧಿಸಿದ ಇಂಥ ಆಸಕ್ತಿಕರ ವಿಡಿಯೋ ಅನ್ನು ಆಗಾಗ ಟ್ವೀಟ್ ಮಾಡುತ್ತಿರುತ್ತಾರೆ. ಇದೀಗ ಅವರು ಟ್ವೀಟ್ ಮಾಡಿರುವ ಈ ವಿಡಿಯೋ, ಮಕ್ಕಳನ್ನು ಪೋಷಿಸುವುದು ಎಂಥ ಜವಾಬ್ದಾರಿಯುತ ಎನ್ನುವುದನ್ನು ತೋರಿಸುತ್ತದೆ. ಈ ವಿಡಿಯೋ ಅನ್ನು ಈತನಕ 2.80 ಲಕ್ಷಕ್ಕೂ ಹೆಚ್ಚು ಜನರು ನೋಡಿದ್ಧಾರೆ. 5,000 ಕ್ಕೂ ಹೆಚ್ಚು ಜನರು ಇಷ್ಟಪಟ್ಟಿದ್ದಾರೆ. 900 ಜನರು ರೀಟ್ವೀಟ್ ಮಾಡಿದ್ಧಾರೆ. ನೂರಾರು ಜನರು ಪ್ರತಿಕ್ರಿಯಿಸಿದ್ಧಾರೆ.

ಇದನ್ನೂ ಓದಿ : ಪಾಕಿಸ್ತಾನದ ಸ್ಕರ್ದೂ ಕಣಿವೆಯಲ್ಲಿ ಕಟ್ಟಿಗೆ ಆಯಲು ಬಂದ ಪುಟ್ಟಿಯ ವಿಡಿಯೋ ವೈರಲ್

ಪ್ರಾಣಿಗಳಲ್ಲಿಯೂ ಪೋಷಕತ್ವ ಎಷ್ಟೊಂದು ತೀವ್ರತರವಾಗಿ ಜಾಗೃತವಾಗಿರುತ್ತದೆಯಲ್ಲ! ಸಲಾಂ ಎಂದಿದ್ದಾರೆ ಒಬ್ಬರು. ವಾಹ್​ ಝೆಡ್​ ಪ್ಲಸ್​ ಸೆಕ್ಯೂರಿಟಿ ಎಂದಿದ್ದಾರೆ ಅನೇಕರು. ಕೊನೆಯಲ್ಲಿ ಏನಾಯಿತು, ಮರಿಗಳು ಸುರಕ್ಷಿತವಾಗಿವೆ ತಾನೆ? ಎಂದು ಅನೇಕರು ಕೇಳಿದ್ದಾರೆ. ಸದ್ಯ ಎಲ್ಲರೂ ಸುರಕ್ಷಿತವಾಗಿದ್ದರೆ ಸಾಕು ಎಂದಿದ್ದಾರೆ ಹಲವರು.

ಇದನ್ನೂ ಓದಿ : ಹೆಂಡತಿ ತವರಿಗೆ; ಕೋಪದಲ್ಲಿ ತನ್ನ ಮರ್ಮಾಂಗವನ್ನೇ ಕತ್ತರಿಸಿಕೊಂಡ ಬಿಹಾರದ ವ್ಯಕ್ತಿ

ಪೋಷಕರು ಎಂದರೆ ಯಾವಾಗಲೂ ಹೀಗೇ ಇರುತ್ತಾರೆ ಎಂದಿದ್ಧಾರೆ ಮತ್ತೊಬ್ಬರು. ತಾಯಿ ಇಲ್ಲಿ ಬಹಳ ಧೈರ್ಯದಿಂದ ಮಕ್ಕಳನ್ನು ರಕ್ಷಿಸಿದ್ದಾರೆ ಮಗದೊಬ್ಬರು. ಪ್ರಕೃತಿಯ ಕಲೆ ಇದು, ಅತ್ಯದ್ಭುತ ಎಂದಿದ್ದಾರೆ ಇನ್ನೂ ಒಬ್ಬರು. ಈ ವಿಡಿಯೋ ನೋಡಿದ ನಿಮ್ಮಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 4:01 pm, Sat, 21 January 23

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್