AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬಾವಿಗೆ ಬಿದ್ದ ಚಿರತೆ, ಅರಣ್ಯಾಧಿಕಾರಿಗಳ ರಕ್ಷಣಾ ಕಾರ್ಯಕ್ಕೆ ನೆಟ್ಟಿಗರ ಶ್ಲಾಘನೆ

ತೆರೆದ ಬಾವಿಗೆ ಬಿದ್ದ ಗಂಡು ಚಿರತೆಯನ್ನ ಅರಣ್ಯಾಧಿಕಾರಿಗಳು ರಕ್ಷಣೆ ಮಾಡಿದ್ದು, ನೆಟ್ಟಿಗರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಚಿರತೆ ರಕ್ಷಣೆಯ ವಿಡಿಯೋ ಇಲ್ಲಿದೆ ನೋಡಿ.

Viral Video: ಬಾವಿಗೆ ಬಿದ್ದ ಚಿರತೆ, ಅರಣ್ಯಾಧಿಕಾರಿಗಳ ರಕ್ಷಣಾ ಕಾರ್ಯಕ್ಕೆ ನೆಟ್ಟಿಗರ ಶ್ಲಾಘನೆ
ಚಿರತೆಯ ರಕ್ಷಣೆ
TV9 Web
| Edited By: Rakesh Nayak Manchi|

Updated on: Jun 19, 2022 | 3:58 PM

Share

ವೈರಲ್ ವಿಡಿಯೋ: ತೆರೆದ ಬಾಯಿಯೊಳಗೆ ಬಿದ್ದ ಚಿರತೆಯನ್ನು ಅರಣ್ಯಾಧಿಕಾರಿಗಳು ರಕ್ಷಣೆ ಮಾಡಿದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ರಕ್ಷಣೆ ವೇಳೆ ಗಾಬರಿಯಿಂದಲೋ ಅಥವಾ ಕೋಪದಿಂದಲೋ ಏನೋ ಭಾರಿ ಶಬ್ದದ ಮೂಲಕ ಚಿರತೆ ಕೂಗಾಡಿದೆ. ಇದರ ವಿಡಿಯೋವನ್ನುಭಾರತೀಯ ಅರಣ್ಯ ಸೇವೆ (ಐಎಫ್‌ಎಸ್) ಅಧಿಕಾರಿ ಸುಸಂತ ನಂದಾ ಅವರು ಟ್ವಿಟರ್​ನಲ್ಲಿ ಹಂಚಿಕೊಂಡಿದ್ದು, ಶೀರ್ಷಿಕೆಯಲ್ಲಿ ಜನರಿಗೆ ಎಚ್ಚರಿಕೆಯ ಮನವಿಯನ್ನು ಮಾಡಿದ್ದಾರೆ.

ಇದನ್ನೂ ಓದಿ: Viral Video: ನೀವು ಇದುವರೆಗೆ ನೋಡಿರದಂಥ ವಿಭಿನ್ನ ಸ್ಕೂಟರ್ ಇಲ್ಲಿದೆ ನೋಡಿ, ವಿಡಿಯೋ ವೈರಲ್

ವಿಡಿಯೋ ಹಂಚಿಕೊಳ್ಳುವ ವೇಳೆ ಸುಸಂತ ನಂದಾ ಅವರು ತೆರೆದ ಬಾವಿಗಳನ್ನು ಮುಚ್ಚುವಂತೆ ಸೂಚಿಸಿದ್ದಾರೆ. “ಕಾಡು ಪ್ರಾಣಿಗಳಿಗೆ ಇಂತಹ ಆಘಾತವನ್ನು ತಪ್ಪಿಸಲು ದಯವಿಟ್ಟು ತೆರೆದ ಬಾವಿಗಳನ್ನು ಮುಚ್ಚಿ” ಎಂದು ಶೀರ್ಷಿಕೆಯಲ್ಲಿ ಬರೆದುಕೊಂಡಿದ್ದಾರೆ.  ವಿಡಿಯೋದಲ್ಲಿ ಗಮನಿಸಿದಂತೆ, ತೆರೆದ ಬಾವಿಗೆ ಬೋನ್​ ಅನ್ನು ಹಗ್ಗದ ಸಹಾಯದಿಂದ ಇಳಿಸಲಾಗಿದೆ. ಆ ಬೋನಿನೊಳಗೆ ಗಂಡು ಚಿರತೆ ಸೇರಿಕೊಂಡ ನಂತರ ಜಾಗರೂಕತೆಯಿಂದ ಮೇಲೆತ್ತಲಾಗಿದೆ. ಈ ವೇಳೆ ಚಿರತೆ ಚೀರಾಡುವುದನ್ನು ನೋಡಬಹುದು.

ಭಾನುವಾರ ಹಂಚಿಕೊಂಡ ವಿಡಿಯೋ ಟ್ವಿಟರ್‌ನಲ್ಲಿ 13,000ಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದುಕೊಂಡಿದೆ. ಚಿರತೆಯನ್ನು ರಕ್ಷಿಸಿದ ಅರಣ್ಯ ಇಲಾಖೆ ಅಧಿಕಾರಿಗಳನ್ನು ಹಲವು ನೆಟ್ಟಿಗರು ಶ್ಲಾಘಿಸಿದ್ದಾರೆ. ”ಅರಣ್ಯ ಇಲಾಖೆ ಸಿಬ್ಬಂದಿ ಉತ್ತಮ ಕೆಲಸ ಮಾಡಿದ್ದಾರೆ. ವಂದನೆಗಳು. ತೆರೆದ ಬಾವಿಗಳನ್ನು ಮುಚ್ಚುವ ಅಥವಾ ಬೇಲಿ ಹಾಕುವ ಬಗ್ಗೆ ನಾವು ಜನರಿಗೆ ತಿಳುವಳಿಕೆ ನೀಡಲು ಪ್ರಾರಂಭಿಸಬೇಕು” ಎಂದು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ:Viral Video: ಸುರಿದ ಧಾರಾಕಾರ ಮಳೆಗೆ ರಸ್ತೆಗೆ ಬಂದ ಮೀನುಗಳು! ಎಲ್ಲಿ ಇದು ಗೊತ್ತಾ?

ರಾಜ್ಯದ ಶೇ.90 ರಷ್ಟು ರೈತರು ಬಾವಿಗಳನ್ನು ಮುಚ್ಚಲು ಶಕ್ತರಾಗಿಲ್ಲ ಎಂದು ಬಳಕೆದಾರರು ಹೇಳಿದರು. “ಮಹಾರಾಷ್ಟ್ರದಲ್ಲಿ 90% ರೈತರು ಕನಿಷ್ಠ ಆದಾಯದಿಂದ ತಮ್ಮನ್ನು ತಾವು ಪೋಷಿಸಲು ಸಾಧ್ಯವಾಗುತ್ತಿಲ್ಲ. ಅವರು ತೆರೆದ ಬಾವಿಗಳನ್ನು ಮುಚ್ಚಲು ಹೇಗೆ ಖರ್ಚು ಮಾಡುತ್ತಾರೆ? ಬಾವಿಗಳನ್ನು ಮುಚ್ಚಲು ಸರ್ಕಾರವು ಸಬ್ಸಿಡಿಯನ್ನು ವಿಸ್ತರಿಸಬೇಕು”ಎಂದು ಬರೆದಿದ್ದಾರೆ.

ಟ್ರೆಂಡಿಂಗ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ