Viral Video: ಮರ ಹತ್ತಿ ಕೋತಿಯನ್ನು ಬೇಟೆಯಾಡಿ ಕೊಂದ ಚಿರತೆ; ವಿಡಿಯೋ ವೈರಲ್

ಹಸಿವಿನಿಂದ ಕಂಗೆಟ್ಟ ಚಿರತೆಯೊಂದು ಮರ ಹತ್ತಿ ಕೋತಿಯನ್ನು ಕೊಂದು ಹಾಕುತ್ತಿರುವ ದೃಶ್ಯ ಈ ವಿಡಿಯೋದಲ್ಲಿದೆ.

Viral Video: ಮರ ಹತ್ತಿ ಕೋತಿಯನ್ನು ಬೇಟೆಯಾಡಿ ಕೊಂದ ಚಿರತೆ; ವಿಡಿಯೋ ವೈರಲ್
ಚಿರತೆ
Follow us
| Updated By: ಸುಷ್ಮಾ ಚಕ್ರೆ

Updated on: May 30, 2022 | 6:35 PM

ಕ್ರೂರ ಪ್ರಾಣಿಗಳ ವಿಡಿಯೋ ಆಗಾಗ ವೈರಲ್ ಆಗುತ್ತಿರುತ್ತವೆ. ಪ್ರಾಣಿ ಸಾಮ್ರಾಜ್ಯವು ಬಹಳ ಆಸಕ್ತಿದಾಯಕವಾಗಿದೆ. ಪ್ರತಿದಿನ ಈ ಅದ್ಭುತ ಪ್ರಾಣಿಗಳ ತಮಾಷೆಯ ವೀಡಿಯೊಗಳು (Funny Videos) ವೈರಲ್ ಆಗುತ್ತಿರುತ್ತವೆ. ಕಾಡಿನಲ್ಲಿರುವ ಪ್ರಾಣಿಗಳ ವಿಡಿಯೋಗಳು ವೀಕ್ಷಿಸಲು ಸಾಕಷ್ಟು ಆಕರ್ಷಕವಾಗಿವೆ. ಚಿರತೆಯೊಂದು ಕೋತಿಯನ್ನು ಬೇಟೆಯಾಡಿದ ಕ್ಷಣವನ್ನು ತೋರಿಸುವ ಅಪರೂಪದ ಮತ್ತು ಭಯಾನಕ ವೀಡಿಯೊ ಟ್ವಿಟ್ಟರ್‌ನಲ್ಲಿ ಕಾಣಿಸಿಕೊಂಡಿದೆ. ಈ ಅಪರೂಪದ ವಿಡಿಯೋ ಕ್ಲಿಪ್ ಅನ್ನು ಮಧ್ಯಪ್ರದೇಶದ ಪನ್ನಾ ಟೈಗರ್ ರಿಸರ್ವ್‌ನಲ್ಲಿ ಚಿತ್ರೀಕರಿಸಲಾಗಿದೆ. ಈ ಹುಲಿ ಸಂರಕ್ಷಿತಾರಣ್ಯದಲ್ಲಿ ಹುಲಿ, ಕರಡಿ, ತೋಳ, ಪ್ಯಾಂಗೊಲಿನ್, ಚಿರತೆ, ಘಾರಿಯಲ್, ನರಿ ಇನ್ನೂ ಅನೇಕ ವನ್ಯಜೀವಿ ಪ್ರಭೇದಗಳು ನೆಲೆಸಿವೆ.

ಹಸಿವಿನಿಂದ ಕಂಗೆಟ್ಟ ಚಿರತೆಯೊಂದು ಮರ ಹತ್ತಿ ಕೋತಿಯನ್ನು ಕೊಂದು ಹಾಕುತ್ತಿರುವ ದೃಶ್ಯ ಈ ವಿಡಿಯೋದಲ್ಲಿದೆ. ಅದನ್ನು ಕೊಂದ ನಂತರ, ಚಿರತೆ ಮರದಿಂದ ಇಳಿಯುವಾಗ ಬೇಟೆಯನ್ನು ಬಾಯಿಯಲ್ಲಿ ಬಿಗಿಯಾಗಿ ಹಿಡಿದಿರುವುದನ್ನು ನೋಡಬಹುದು. ಪನ್ನಾ ಟೈಗರ್ ರಿಸರ್ವ್‌ನ ಅಧಿಕೃತ ಟ್ವಿಟರ್ ಹ್ಯಾಂಡಲ್ ಈ ವೀಡಿಯೊವನ್ನು ಶೇರ್ ಮಾಡಿಕೊಂಡಿದೆ. “ಪನ್ನಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಚಿರತೆ ಬೇಟೆಯಾಡುವ ಅಪರೂಪದ ದೃಶ್ಯ” ಎಂದು ಇದಕ್ಕೆ ಕ್ಯಾಪ್ಷನ್ ನೀಡಲಾಗಿದೆ.

ಈ ವಿಡಿಯೋವನ್ನು ಹುಲಿ ಸಂರಕ್ಷಣಾ ಅಧಿಕಾರಿಗಳು ಸೆರೆ ಹಿಡಿದಿದ್ದಾರೆ. ಈ ವಿಡಿಯೋ ಇಲ್ಲಿಯವರೆಗೆ 2,700ಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದುಕೊಂಡಿದೆ. ಈ ಬೇಟೆಯ ವೀಡಿಯೊ ಜನರನ್ನು ಕುತೂಹಲ ಮತ್ತು ಭಯಭೀತರನ್ನಾಗಿ ಮಾಡಿದೆ.

ಇನ್ನಷ್ಟು ಟ್ರೆಂಡಿಂಗ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್