AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮರ ಹತ್ತಿ ಕೋತಿಯನ್ನು ಬೇಟೆಯಾಡಿ ಕೊಂದ ಚಿರತೆ; ವಿಡಿಯೋ ವೈರಲ್

ಹಸಿವಿನಿಂದ ಕಂಗೆಟ್ಟ ಚಿರತೆಯೊಂದು ಮರ ಹತ್ತಿ ಕೋತಿಯನ್ನು ಕೊಂದು ಹಾಕುತ್ತಿರುವ ದೃಶ್ಯ ಈ ವಿಡಿಯೋದಲ್ಲಿದೆ.

Viral Video: ಮರ ಹತ್ತಿ ಕೋತಿಯನ್ನು ಬೇಟೆಯಾಡಿ ಕೊಂದ ಚಿರತೆ; ವಿಡಿಯೋ ವೈರಲ್
ಚಿರತೆ
TV9 Web
| Edited By: |

Updated on: May 30, 2022 | 6:35 PM

Share

ಕ್ರೂರ ಪ್ರಾಣಿಗಳ ವಿಡಿಯೋ ಆಗಾಗ ವೈರಲ್ ಆಗುತ್ತಿರುತ್ತವೆ. ಪ್ರಾಣಿ ಸಾಮ್ರಾಜ್ಯವು ಬಹಳ ಆಸಕ್ತಿದಾಯಕವಾಗಿದೆ. ಪ್ರತಿದಿನ ಈ ಅದ್ಭುತ ಪ್ರಾಣಿಗಳ ತಮಾಷೆಯ ವೀಡಿಯೊಗಳು (Funny Videos) ವೈರಲ್ ಆಗುತ್ತಿರುತ್ತವೆ. ಕಾಡಿನಲ್ಲಿರುವ ಪ್ರಾಣಿಗಳ ವಿಡಿಯೋಗಳು ವೀಕ್ಷಿಸಲು ಸಾಕಷ್ಟು ಆಕರ್ಷಕವಾಗಿವೆ. ಚಿರತೆಯೊಂದು ಕೋತಿಯನ್ನು ಬೇಟೆಯಾಡಿದ ಕ್ಷಣವನ್ನು ತೋರಿಸುವ ಅಪರೂಪದ ಮತ್ತು ಭಯಾನಕ ವೀಡಿಯೊ ಟ್ವಿಟ್ಟರ್‌ನಲ್ಲಿ ಕಾಣಿಸಿಕೊಂಡಿದೆ. ಈ ಅಪರೂಪದ ವಿಡಿಯೋ ಕ್ಲಿಪ್ ಅನ್ನು ಮಧ್ಯಪ್ರದೇಶದ ಪನ್ನಾ ಟೈಗರ್ ರಿಸರ್ವ್‌ನಲ್ಲಿ ಚಿತ್ರೀಕರಿಸಲಾಗಿದೆ. ಈ ಹುಲಿ ಸಂರಕ್ಷಿತಾರಣ್ಯದಲ್ಲಿ ಹುಲಿ, ಕರಡಿ, ತೋಳ, ಪ್ಯಾಂಗೊಲಿನ್, ಚಿರತೆ, ಘಾರಿಯಲ್, ನರಿ ಇನ್ನೂ ಅನೇಕ ವನ್ಯಜೀವಿ ಪ್ರಭೇದಗಳು ನೆಲೆಸಿವೆ.

ಹಸಿವಿನಿಂದ ಕಂಗೆಟ್ಟ ಚಿರತೆಯೊಂದು ಮರ ಹತ್ತಿ ಕೋತಿಯನ್ನು ಕೊಂದು ಹಾಕುತ್ತಿರುವ ದೃಶ್ಯ ಈ ವಿಡಿಯೋದಲ್ಲಿದೆ. ಅದನ್ನು ಕೊಂದ ನಂತರ, ಚಿರತೆ ಮರದಿಂದ ಇಳಿಯುವಾಗ ಬೇಟೆಯನ್ನು ಬಾಯಿಯಲ್ಲಿ ಬಿಗಿಯಾಗಿ ಹಿಡಿದಿರುವುದನ್ನು ನೋಡಬಹುದು. ಪನ್ನಾ ಟೈಗರ್ ರಿಸರ್ವ್‌ನ ಅಧಿಕೃತ ಟ್ವಿಟರ್ ಹ್ಯಾಂಡಲ್ ಈ ವೀಡಿಯೊವನ್ನು ಶೇರ್ ಮಾಡಿಕೊಂಡಿದೆ. “ಪನ್ನಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಚಿರತೆ ಬೇಟೆಯಾಡುವ ಅಪರೂಪದ ದೃಶ್ಯ” ಎಂದು ಇದಕ್ಕೆ ಕ್ಯಾಪ್ಷನ್ ನೀಡಲಾಗಿದೆ.

ಈ ವಿಡಿಯೋವನ್ನು ಹುಲಿ ಸಂರಕ್ಷಣಾ ಅಧಿಕಾರಿಗಳು ಸೆರೆ ಹಿಡಿದಿದ್ದಾರೆ. ಈ ವಿಡಿಯೋ ಇಲ್ಲಿಯವರೆಗೆ 2,700ಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದುಕೊಂಡಿದೆ. ಈ ಬೇಟೆಯ ವೀಡಿಯೊ ಜನರನ್ನು ಕುತೂಹಲ ಮತ್ತು ಭಯಭೀತರನ್ನಾಗಿ ಮಾಡಿದೆ.

ಇನ್ನಷ್ಟು ಟ್ರೆಂಡಿಂಗ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ