AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮರ ಹತ್ತಿ ಕೋತಿಯನ್ನು ಬೇಟೆಯಾಡಿ ಕೊಂದ ಚಿರತೆ; ವಿಡಿಯೋ ವೈರಲ್

ಹಸಿವಿನಿಂದ ಕಂಗೆಟ್ಟ ಚಿರತೆಯೊಂದು ಮರ ಹತ್ತಿ ಕೋತಿಯನ್ನು ಕೊಂದು ಹಾಕುತ್ತಿರುವ ದೃಶ್ಯ ಈ ವಿಡಿಯೋದಲ್ಲಿದೆ.

Viral Video: ಮರ ಹತ್ತಿ ಕೋತಿಯನ್ನು ಬೇಟೆಯಾಡಿ ಕೊಂದ ಚಿರತೆ; ವಿಡಿಯೋ ವೈರಲ್
ಚಿರತೆ
TV9 Web
| Edited By: |

Updated on: May 30, 2022 | 6:35 PM

Share

ಕ್ರೂರ ಪ್ರಾಣಿಗಳ ವಿಡಿಯೋ ಆಗಾಗ ವೈರಲ್ ಆಗುತ್ತಿರುತ್ತವೆ. ಪ್ರಾಣಿ ಸಾಮ್ರಾಜ್ಯವು ಬಹಳ ಆಸಕ್ತಿದಾಯಕವಾಗಿದೆ. ಪ್ರತಿದಿನ ಈ ಅದ್ಭುತ ಪ್ರಾಣಿಗಳ ತಮಾಷೆಯ ವೀಡಿಯೊಗಳು (Funny Videos) ವೈರಲ್ ಆಗುತ್ತಿರುತ್ತವೆ. ಕಾಡಿನಲ್ಲಿರುವ ಪ್ರಾಣಿಗಳ ವಿಡಿಯೋಗಳು ವೀಕ್ಷಿಸಲು ಸಾಕಷ್ಟು ಆಕರ್ಷಕವಾಗಿವೆ. ಚಿರತೆಯೊಂದು ಕೋತಿಯನ್ನು ಬೇಟೆಯಾಡಿದ ಕ್ಷಣವನ್ನು ತೋರಿಸುವ ಅಪರೂಪದ ಮತ್ತು ಭಯಾನಕ ವೀಡಿಯೊ ಟ್ವಿಟ್ಟರ್‌ನಲ್ಲಿ ಕಾಣಿಸಿಕೊಂಡಿದೆ. ಈ ಅಪರೂಪದ ವಿಡಿಯೋ ಕ್ಲಿಪ್ ಅನ್ನು ಮಧ್ಯಪ್ರದೇಶದ ಪನ್ನಾ ಟೈಗರ್ ರಿಸರ್ವ್‌ನಲ್ಲಿ ಚಿತ್ರೀಕರಿಸಲಾಗಿದೆ. ಈ ಹುಲಿ ಸಂರಕ್ಷಿತಾರಣ್ಯದಲ್ಲಿ ಹುಲಿ, ಕರಡಿ, ತೋಳ, ಪ್ಯಾಂಗೊಲಿನ್, ಚಿರತೆ, ಘಾರಿಯಲ್, ನರಿ ಇನ್ನೂ ಅನೇಕ ವನ್ಯಜೀವಿ ಪ್ರಭೇದಗಳು ನೆಲೆಸಿವೆ.

ಹಸಿವಿನಿಂದ ಕಂಗೆಟ್ಟ ಚಿರತೆಯೊಂದು ಮರ ಹತ್ತಿ ಕೋತಿಯನ್ನು ಕೊಂದು ಹಾಕುತ್ತಿರುವ ದೃಶ್ಯ ಈ ವಿಡಿಯೋದಲ್ಲಿದೆ. ಅದನ್ನು ಕೊಂದ ನಂತರ, ಚಿರತೆ ಮರದಿಂದ ಇಳಿಯುವಾಗ ಬೇಟೆಯನ್ನು ಬಾಯಿಯಲ್ಲಿ ಬಿಗಿಯಾಗಿ ಹಿಡಿದಿರುವುದನ್ನು ನೋಡಬಹುದು. ಪನ್ನಾ ಟೈಗರ್ ರಿಸರ್ವ್‌ನ ಅಧಿಕೃತ ಟ್ವಿಟರ್ ಹ್ಯಾಂಡಲ್ ಈ ವೀಡಿಯೊವನ್ನು ಶೇರ್ ಮಾಡಿಕೊಂಡಿದೆ. “ಪನ್ನಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಚಿರತೆ ಬೇಟೆಯಾಡುವ ಅಪರೂಪದ ದೃಶ್ಯ” ಎಂದು ಇದಕ್ಕೆ ಕ್ಯಾಪ್ಷನ್ ನೀಡಲಾಗಿದೆ.

ಈ ವಿಡಿಯೋವನ್ನು ಹುಲಿ ಸಂರಕ್ಷಣಾ ಅಧಿಕಾರಿಗಳು ಸೆರೆ ಹಿಡಿದಿದ್ದಾರೆ. ಈ ವಿಡಿಯೋ ಇಲ್ಲಿಯವರೆಗೆ 2,700ಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದುಕೊಂಡಿದೆ. ಈ ಬೇಟೆಯ ವೀಡಿಯೊ ಜನರನ್ನು ಕುತೂಹಲ ಮತ್ತು ಭಯಭೀತರನ್ನಾಗಿ ಮಾಡಿದೆ.

ಇನ್ನಷ್ಟು ಟ್ರೆಂಡಿಂಗ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್