AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮರ ಹತ್ತಿ ಕೋತಿಯನ್ನು ಬೇಟೆಯಾಡಿ ಕೊಂದ ಚಿರತೆ; ವಿಡಿಯೋ ವೈರಲ್

ಹಸಿವಿನಿಂದ ಕಂಗೆಟ್ಟ ಚಿರತೆಯೊಂದು ಮರ ಹತ್ತಿ ಕೋತಿಯನ್ನು ಕೊಂದು ಹಾಕುತ್ತಿರುವ ದೃಶ್ಯ ಈ ವಿಡಿಯೋದಲ್ಲಿದೆ.

Viral Video: ಮರ ಹತ್ತಿ ಕೋತಿಯನ್ನು ಬೇಟೆಯಾಡಿ ಕೊಂದ ಚಿರತೆ; ವಿಡಿಯೋ ವೈರಲ್
ಚಿರತೆ
TV9 Web
| Updated By: ಸುಷ್ಮಾ ಚಕ್ರೆ|

Updated on: May 30, 2022 | 6:35 PM

Share

ಕ್ರೂರ ಪ್ರಾಣಿಗಳ ವಿಡಿಯೋ ಆಗಾಗ ವೈರಲ್ ಆಗುತ್ತಿರುತ್ತವೆ. ಪ್ರಾಣಿ ಸಾಮ್ರಾಜ್ಯವು ಬಹಳ ಆಸಕ್ತಿದಾಯಕವಾಗಿದೆ. ಪ್ರತಿದಿನ ಈ ಅದ್ಭುತ ಪ್ರಾಣಿಗಳ ತಮಾಷೆಯ ವೀಡಿಯೊಗಳು (Funny Videos) ವೈರಲ್ ಆಗುತ್ತಿರುತ್ತವೆ. ಕಾಡಿನಲ್ಲಿರುವ ಪ್ರಾಣಿಗಳ ವಿಡಿಯೋಗಳು ವೀಕ್ಷಿಸಲು ಸಾಕಷ್ಟು ಆಕರ್ಷಕವಾಗಿವೆ. ಚಿರತೆಯೊಂದು ಕೋತಿಯನ್ನು ಬೇಟೆಯಾಡಿದ ಕ್ಷಣವನ್ನು ತೋರಿಸುವ ಅಪರೂಪದ ಮತ್ತು ಭಯಾನಕ ವೀಡಿಯೊ ಟ್ವಿಟ್ಟರ್‌ನಲ್ಲಿ ಕಾಣಿಸಿಕೊಂಡಿದೆ. ಈ ಅಪರೂಪದ ವಿಡಿಯೋ ಕ್ಲಿಪ್ ಅನ್ನು ಮಧ್ಯಪ್ರದೇಶದ ಪನ್ನಾ ಟೈಗರ್ ರಿಸರ್ವ್‌ನಲ್ಲಿ ಚಿತ್ರೀಕರಿಸಲಾಗಿದೆ. ಈ ಹುಲಿ ಸಂರಕ್ಷಿತಾರಣ್ಯದಲ್ಲಿ ಹುಲಿ, ಕರಡಿ, ತೋಳ, ಪ್ಯಾಂಗೊಲಿನ್, ಚಿರತೆ, ಘಾರಿಯಲ್, ನರಿ ಇನ್ನೂ ಅನೇಕ ವನ್ಯಜೀವಿ ಪ್ರಭೇದಗಳು ನೆಲೆಸಿವೆ.

ಹಸಿವಿನಿಂದ ಕಂಗೆಟ್ಟ ಚಿರತೆಯೊಂದು ಮರ ಹತ್ತಿ ಕೋತಿಯನ್ನು ಕೊಂದು ಹಾಕುತ್ತಿರುವ ದೃಶ್ಯ ಈ ವಿಡಿಯೋದಲ್ಲಿದೆ. ಅದನ್ನು ಕೊಂದ ನಂತರ, ಚಿರತೆ ಮರದಿಂದ ಇಳಿಯುವಾಗ ಬೇಟೆಯನ್ನು ಬಾಯಿಯಲ್ಲಿ ಬಿಗಿಯಾಗಿ ಹಿಡಿದಿರುವುದನ್ನು ನೋಡಬಹುದು. ಪನ್ನಾ ಟೈಗರ್ ರಿಸರ್ವ್‌ನ ಅಧಿಕೃತ ಟ್ವಿಟರ್ ಹ್ಯಾಂಡಲ್ ಈ ವೀಡಿಯೊವನ್ನು ಶೇರ್ ಮಾಡಿಕೊಂಡಿದೆ. “ಪನ್ನಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಚಿರತೆ ಬೇಟೆಯಾಡುವ ಅಪರೂಪದ ದೃಶ್ಯ” ಎಂದು ಇದಕ್ಕೆ ಕ್ಯಾಪ್ಷನ್ ನೀಡಲಾಗಿದೆ.

ಈ ವಿಡಿಯೋವನ್ನು ಹುಲಿ ಸಂರಕ್ಷಣಾ ಅಧಿಕಾರಿಗಳು ಸೆರೆ ಹಿಡಿದಿದ್ದಾರೆ. ಈ ವಿಡಿಯೋ ಇಲ್ಲಿಯವರೆಗೆ 2,700ಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದುಕೊಂಡಿದೆ. ಈ ಬೇಟೆಯ ವೀಡಿಯೊ ಜನರನ್ನು ಕುತೂಹಲ ಮತ್ತು ಭಯಭೀತರನ್ನಾಗಿ ಮಾಡಿದೆ.

ಇನ್ನಷ್ಟು ಟ್ರೆಂಡಿಂಗ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ