AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕ್ಲಾಸ್​ ರೂಂನೊಳಗೆ ನುಗ್ಗಿ ವಿದ್ಯಾರ್ಥಿ ಮೇಲೆ ದಾಳಿ ಮಾಡಿದ ಚಿರತೆ

Shocking Video: ಅಲಿಗಢದ ಶಾಲೆಯೊಂದಕ್ಕೆ ಏಕಾಏಕಿ ನುಗ್ಗಿದ ಚಿರತೆಯೊಂದು ವಿದ್ಯಾರ್ಥಿಯ ಮೇಲೆ ದಾಳಿ ನಡೆಸಿದ ಘಟನೆ ನಡೆದಿದೆ.

Viral Video: ಕ್ಲಾಸ್​ ರೂಂನೊಳಗೆ ನುಗ್ಗಿ ವಿದ್ಯಾರ್ಥಿ ಮೇಲೆ ದಾಳಿ ಮಾಡಿದ ಚಿರತೆ
ಶಾಲೆಯೊಳಗೆ ನುಗ್ಗಿದ ಚಿರತೆ
TV9 Web
| Edited By: |

Updated on: Dec 02, 2021 | 1:58 PM

Share

ನವದೆಹಲಿ: ಕಾಡಿನಲ್ಲಿ ರಾಜನಂತೆ ಓಡಾಡಿಕೊಂಡಿರುವ ಚಿರತೆಗೆ ಶಾಲೆಗ ಹೋಗುವ ಮನಸಾಗಿತ್ತು. ಹೀಗಾಗಿ, ಸೀದಾ ಕ್ಲಾಸ್​ ರೂಮಿನೊಳಗೆ ಹೋದ ಚಿರತೆ ಅಲ್ಲಿದ್ದ ವಿದ್ಯಾರ್ಥಿಯನ್ನು ನೋಡಿ ಕೋಪಗೊಂಡು ಆತನ ಮೇಲೆ ದಾಳಿ ನಡೆಸಿದೆ. ಇದೇನಪ್ಪಾ ವಿಚಿತ್ರ ಕತೆ ಎಂದು ಆಶ್ಚರ್ಯ ಪಡುತ್ತಿದ್ದೀರಾ? ಈ ರೀತಿಯ ಘಟನೆ ನಡೆದಿರುವುದು ಉತ್ತರ ಪ್ರದೇಶದ ಅಲಿಗಢದಲ್ಲಿ. ಅಲಿಗಢದ ಶಾಲೆಯೊಂದಕ್ಕೆ ಏಕಾಏಕಿ ನುಗ್ಗಿದ ಚಿರತೆಯೊಂದು ವಿದ್ಯಾರ್ಥಿಯ ಮೇಲೆ ದಾಳಿ ನಡೆಸಿದ ಘಟನೆ ನಡೆದಿದೆ.

ಚಿರತೆ ಶಾಲೆಯೊಳಗೆ ನುಗ್ಗಿದ ವಿಷಯ ತಿಳಿಯುತ್ತಿದ್ದಂತೆ ವಿದ್ಯಾರ್ಥಿಯನ್ನು ಬಚಾವ್ ಮಾಡಿದ ಶಾಲಾ ಸಿಬ್ಬಂದಿ ಆ ಕ್ಲಾಸ್​ ರೂಂಗೆ ಬೀಗ ಹಾಕಿದ್ದಾರೆ. ಅಲಿಗಢ್‌ನ ಚೌಧರಿ ನಿಹಾಲ್ ಸಿಂಗ್ ಇಂಟರ್ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಚಿರತೆಯನ್ನು ಕೊಂಡೊಯ್ಯಲು ಅರಣ್ಯಾಧಿಕಾರಿಗಳಿಗಾಗಿ ಶಾಲಾ ಸಿಬ್ಬಂದಿ ಕಾಯುತ್ತಿದ್ದಾಗ ಶಾಲೆಯ ಹೊರಗೆ ಜನಜಂಗುಳಿಯಿಂದ ಭಾರೀ ಗದ್ದಲ ಉಂಟಾಯಿತು.

ನಾನು ತರಗತಿಯಲ್ಲಿ ಕೂತಿದ್ದಾಗ ಅಲ್ಲಿ ಚಿರತೆ ಬಂದಿತು. ನಾನು ಹೆದರಿ ಎದ್ದು ನಿಂತ ಕೂಡಲೆ ಚಿರತೆ ನನ್ನ ಮೇಲೆ ದಾಳಿ ಮಾಡಿ ಕೈ ಮತ್ತು ಬೆನ್ನಿಗೆ ಕಚ್ಚಿತು ಎಂದು ಚಿರತೆಯಿಂದ ಹಲ್ಲೆಗೊಳಗಾದ ವಿದ್ಯಾರ್ಥಿ ಲಕ್ಕಿ ರಾಜ್ ಸಿಂಗ್ ಹೇಳಿದ್ದಾನೆ. ಆತನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಇದೀಗ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾನೆ.

ನಿನ್ನೆ ಬೆಳಗ್ಗೆ ವಿದ್ಯಾರ್ಥಿಗಳು ಶಾಲೆಗೆ ಬರುತ್ತಿದ್ದಂತೆ ಚಿರತೆಯೊಂದು ಕ್ಯಾಂಪಸ್‌ಗೆ ನುಗ್ಗಿದೆ. ವಿದ್ಯಾರ್ಥಿಯ ಮೇಲೆ ಚಿರತೆ ದಾಳಿ ಮಾಡಿದೆ. ಗಾಯಗೊಂಡ ಮಗುವನ್ನು ಸರ್ಕಾರಿ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಯಿತು. ಈಗ ಅವನು ಮನೆಯಲ್ಲಿದ್ದು, ಆರೋಗ್ಯವಾಗಿದ್ದಾನೆ ಎಂದು ಚೌಧರಿ ನಿಹಾಲ್ ಸಿಂಗ್ ಇಂಟರ್ ಕಾಲೇಜ್ ಪ್ರಾಂಶುಪಾಲರಾದ ಯೋಗೇಶ್ ಯಾದವ್ ತಿಳಿಸಿದ್ದಾರೆ

ಇದನ್ನೂ ಓದಿ: ಚಿರತೆಯ ದಾಳಿಯಿಂದ ತಪ್ಪಿಸಿಕೊಳ್ಳಲು ವಾಕಿಂಗ್ ಸ್ಟಿಕ್​​ನೊಂದಿಗೆ ಹೋರಾಡಿದ ಮಹಿಳೆ; ಭಯಾನಕ ದೃಶ್ಯವಿದು

TikTok: ಪ್ಲಾಸ್ಟಿಕ್ ಸರ್ಜರಿ ಮಾಡುವುದನ್ನು ಬಿಟ್ಟು ಟಿಕ್​ಟಾಕ್ ವಿಡಿಯೋ ಮಾಡಿದ ಡಾಕ್ಟರ್​; ಆಮೇಲೇನಾಯ್ತು?

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್