AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕ್ಲಾಸ್​ ರೂಂನೊಳಗೆ ನುಗ್ಗಿ ವಿದ್ಯಾರ್ಥಿ ಮೇಲೆ ದಾಳಿ ಮಾಡಿದ ಚಿರತೆ

Shocking Video: ಅಲಿಗಢದ ಶಾಲೆಯೊಂದಕ್ಕೆ ಏಕಾಏಕಿ ನುಗ್ಗಿದ ಚಿರತೆಯೊಂದು ವಿದ್ಯಾರ್ಥಿಯ ಮೇಲೆ ದಾಳಿ ನಡೆಸಿದ ಘಟನೆ ನಡೆದಿದೆ.

Viral Video: ಕ್ಲಾಸ್​ ರೂಂನೊಳಗೆ ನುಗ್ಗಿ ವಿದ್ಯಾರ್ಥಿ ಮೇಲೆ ದಾಳಿ ಮಾಡಿದ ಚಿರತೆ
ಶಾಲೆಯೊಳಗೆ ನುಗ್ಗಿದ ಚಿರತೆ
TV9 Web
| Edited By: |

Updated on: Dec 02, 2021 | 1:58 PM

Share

ನವದೆಹಲಿ: ಕಾಡಿನಲ್ಲಿ ರಾಜನಂತೆ ಓಡಾಡಿಕೊಂಡಿರುವ ಚಿರತೆಗೆ ಶಾಲೆಗ ಹೋಗುವ ಮನಸಾಗಿತ್ತು. ಹೀಗಾಗಿ, ಸೀದಾ ಕ್ಲಾಸ್​ ರೂಮಿನೊಳಗೆ ಹೋದ ಚಿರತೆ ಅಲ್ಲಿದ್ದ ವಿದ್ಯಾರ್ಥಿಯನ್ನು ನೋಡಿ ಕೋಪಗೊಂಡು ಆತನ ಮೇಲೆ ದಾಳಿ ನಡೆಸಿದೆ. ಇದೇನಪ್ಪಾ ವಿಚಿತ್ರ ಕತೆ ಎಂದು ಆಶ್ಚರ್ಯ ಪಡುತ್ತಿದ್ದೀರಾ? ಈ ರೀತಿಯ ಘಟನೆ ನಡೆದಿರುವುದು ಉತ್ತರ ಪ್ರದೇಶದ ಅಲಿಗಢದಲ್ಲಿ. ಅಲಿಗಢದ ಶಾಲೆಯೊಂದಕ್ಕೆ ಏಕಾಏಕಿ ನುಗ್ಗಿದ ಚಿರತೆಯೊಂದು ವಿದ್ಯಾರ್ಥಿಯ ಮೇಲೆ ದಾಳಿ ನಡೆಸಿದ ಘಟನೆ ನಡೆದಿದೆ.

ಚಿರತೆ ಶಾಲೆಯೊಳಗೆ ನುಗ್ಗಿದ ವಿಷಯ ತಿಳಿಯುತ್ತಿದ್ದಂತೆ ವಿದ್ಯಾರ್ಥಿಯನ್ನು ಬಚಾವ್ ಮಾಡಿದ ಶಾಲಾ ಸಿಬ್ಬಂದಿ ಆ ಕ್ಲಾಸ್​ ರೂಂಗೆ ಬೀಗ ಹಾಕಿದ್ದಾರೆ. ಅಲಿಗಢ್‌ನ ಚೌಧರಿ ನಿಹಾಲ್ ಸಿಂಗ್ ಇಂಟರ್ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಚಿರತೆಯನ್ನು ಕೊಂಡೊಯ್ಯಲು ಅರಣ್ಯಾಧಿಕಾರಿಗಳಿಗಾಗಿ ಶಾಲಾ ಸಿಬ್ಬಂದಿ ಕಾಯುತ್ತಿದ್ದಾಗ ಶಾಲೆಯ ಹೊರಗೆ ಜನಜಂಗುಳಿಯಿಂದ ಭಾರೀ ಗದ್ದಲ ಉಂಟಾಯಿತು.

ನಾನು ತರಗತಿಯಲ್ಲಿ ಕೂತಿದ್ದಾಗ ಅಲ್ಲಿ ಚಿರತೆ ಬಂದಿತು. ನಾನು ಹೆದರಿ ಎದ್ದು ನಿಂತ ಕೂಡಲೆ ಚಿರತೆ ನನ್ನ ಮೇಲೆ ದಾಳಿ ಮಾಡಿ ಕೈ ಮತ್ತು ಬೆನ್ನಿಗೆ ಕಚ್ಚಿತು ಎಂದು ಚಿರತೆಯಿಂದ ಹಲ್ಲೆಗೊಳಗಾದ ವಿದ್ಯಾರ್ಥಿ ಲಕ್ಕಿ ರಾಜ್ ಸಿಂಗ್ ಹೇಳಿದ್ದಾನೆ. ಆತನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಇದೀಗ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾನೆ.

ನಿನ್ನೆ ಬೆಳಗ್ಗೆ ವಿದ್ಯಾರ್ಥಿಗಳು ಶಾಲೆಗೆ ಬರುತ್ತಿದ್ದಂತೆ ಚಿರತೆಯೊಂದು ಕ್ಯಾಂಪಸ್‌ಗೆ ನುಗ್ಗಿದೆ. ವಿದ್ಯಾರ್ಥಿಯ ಮೇಲೆ ಚಿರತೆ ದಾಳಿ ಮಾಡಿದೆ. ಗಾಯಗೊಂಡ ಮಗುವನ್ನು ಸರ್ಕಾರಿ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಯಿತು. ಈಗ ಅವನು ಮನೆಯಲ್ಲಿದ್ದು, ಆರೋಗ್ಯವಾಗಿದ್ದಾನೆ ಎಂದು ಚೌಧರಿ ನಿಹಾಲ್ ಸಿಂಗ್ ಇಂಟರ್ ಕಾಲೇಜ್ ಪ್ರಾಂಶುಪಾಲರಾದ ಯೋಗೇಶ್ ಯಾದವ್ ತಿಳಿಸಿದ್ದಾರೆ

ಇದನ್ನೂ ಓದಿ: ಚಿರತೆಯ ದಾಳಿಯಿಂದ ತಪ್ಪಿಸಿಕೊಳ್ಳಲು ವಾಕಿಂಗ್ ಸ್ಟಿಕ್​​ನೊಂದಿಗೆ ಹೋರಾಡಿದ ಮಹಿಳೆ; ಭಯಾನಕ ದೃಶ್ಯವಿದು

TikTok: ಪ್ಲಾಸ್ಟಿಕ್ ಸರ್ಜರಿ ಮಾಡುವುದನ್ನು ಬಿಟ್ಟು ಟಿಕ್​ಟಾಕ್ ವಿಡಿಯೋ ಮಾಡಿದ ಡಾಕ್ಟರ್​; ಆಮೇಲೇನಾಯ್ತು?

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ