AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕ್ಲಾಸ್​ ರೂಂನೊಳಗೆ ನುಗ್ಗಿ ವಿದ್ಯಾರ್ಥಿ ಮೇಲೆ ದಾಳಿ ಮಾಡಿದ ಚಿರತೆ

Shocking Video: ಅಲಿಗಢದ ಶಾಲೆಯೊಂದಕ್ಕೆ ಏಕಾಏಕಿ ನುಗ್ಗಿದ ಚಿರತೆಯೊಂದು ವಿದ್ಯಾರ್ಥಿಯ ಮೇಲೆ ದಾಳಿ ನಡೆಸಿದ ಘಟನೆ ನಡೆದಿದೆ.

Viral Video: ಕ್ಲಾಸ್​ ರೂಂನೊಳಗೆ ನುಗ್ಗಿ ವಿದ್ಯಾರ್ಥಿ ಮೇಲೆ ದಾಳಿ ಮಾಡಿದ ಚಿರತೆ
ಶಾಲೆಯೊಳಗೆ ನುಗ್ಗಿದ ಚಿರತೆ
TV9 Web
| Edited By: |

Updated on: Dec 02, 2021 | 1:58 PM

Share

ನವದೆಹಲಿ: ಕಾಡಿನಲ್ಲಿ ರಾಜನಂತೆ ಓಡಾಡಿಕೊಂಡಿರುವ ಚಿರತೆಗೆ ಶಾಲೆಗ ಹೋಗುವ ಮನಸಾಗಿತ್ತು. ಹೀಗಾಗಿ, ಸೀದಾ ಕ್ಲಾಸ್​ ರೂಮಿನೊಳಗೆ ಹೋದ ಚಿರತೆ ಅಲ್ಲಿದ್ದ ವಿದ್ಯಾರ್ಥಿಯನ್ನು ನೋಡಿ ಕೋಪಗೊಂಡು ಆತನ ಮೇಲೆ ದಾಳಿ ನಡೆಸಿದೆ. ಇದೇನಪ್ಪಾ ವಿಚಿತ್ರ ಕತೆ ಎಂದು ಆಶ್ಚರ್ಯ ಪಡುತ್ತಿದ್ದೀರಾ? ಈ ರೀತಿಯ ಘಟನೆ ನಡೆದಿರುವುದು ಉತ್ತರ ಪ್ರದೇಶದ ಅಲಿಗಢದಲ್ಲಿ. ಅಲಿಗಢದ ಶಾಲೆಯೊಂದಕ್ಕೆ ಏಕಾಏಕಿ ನುಗ್ಗಿದ ಚಿರತೆಯೊಂದು ವಿದ್ಯಾರ್ಥಿಯ ಮೇಲೆ ದಾಳಿ ನಡೆಸಿದ ಘಟನೆ ನಡೆದಿದೆ.

ಚಿರತೆ ಶಾಲೆಯೊಳಗೆ ನುಗ್ಗಿದ ವಿಷಯ ತಿಳಿಯುತ್ತಿದ್ದಂತೆ ವಿದ್ಯಾರ್ಥಿಯನ್ನು ಬಚಾವ್ ಮಾಡಿದ ಶಾಲಾ ಸಿಬ್ಬಂದಿ ಆ ಕ್ಲಾಸ್​ ರೂಂಗೆ ಬೀಗ ಹಾಕಿದ್ದಾರೆ. ಅಲಿಗಢ್‌ನ ಚೌಧರಿ ನಿಹಾಲ್ ಸಿಂಗ್ ಇಂಟರ್ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಚಿರತೆಯನ್ನು ಕೊಂಡೊಯ್ಯಲು ಅರಣ್ಯಾಧಿಕಾರಿಗಳಿಗಾಗಿ ಶಾಲಾ ಸಿಬ್ಬಂದಿ ಕಾಯುತ್ತಿದ್ದಾಗ ಶಾಲೆಯ ಹೊರಗೆ ಜನಜಂಗುಳಿಯಿಂದ ಭಾರೀ ಗದ್ದಲ ಉಂಟಾಯಿತು.

ನಾನು ತರಗತಿಯಲ್ಲಿ ಕೂತಿದ್ದಾಗ ಅಲ್ಲಿ ಚಿರತೆ ಬಂದಿತು. ನಾನು ಹೆದರಿ ಎದ್ದು ನಿಂತ ಕೂಡಲೆ ಚಿರತೆ ನನ್ನ ಮೇಲೆ ದಾಳಿ ಮಾಡಿ ಕೈ ಮತ್ತು ಬೆನ್ನಿಗೆ ಕಚ್ಚಿತು ಎಂದು ಚಿರತೆಯಿಂದ ಹಲ್ಲೆಗೊಳಗಾದ ವಿದ್ಯಾರ್ಥಿ ಲಕ್ಕಿ ರಾಜ್ ಸಿಂಗ್ ಹೇಳಿದ್ದಾನೆ. ಆತನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಇದೀಗ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾನೆ.

ನಿನ್ನೆ ಬೆಳಗ್ಗೆ ವಿದ್ಯಾರ್ಥಿಗಳು ಶಾಲೆಗೆ ಬರುತ್ತಿದ್ದಂತೆ ಚಿರತೆಯೊಂದು ಕ್ಯಾಂಪಸ್‌ಗೆ ನುಗ್ಗಿದೆ. ವಿದ್ಯಾರ್ಥಿಯ ಮೇಲೆ ಚಿರತೆ ದಾಳಿ ಮಾಡಿದೆ. ಗಾಯಗೊಂಡ ಮಗುವನ್ನು ಸರ್ಕಾರಿ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಯಿತು. ಈಗ ಅವನು ಮನೆಯಲ್ಲಿದ್ದು, ಆರೋಗ್ಯವಾಗಿದ್ದಾನೆ ಎಂದು ಚೌಧರಿ ನಿಹಾಲ್ ಸಿಂಗ್ ಇಂಟರ್ ಕಾಲೇಜ್ ಪ್ರಾಂಶುಪಾಲರಾದ ಯೋಗೇಶ್ ಯಾದವ್ ತಿಳಿಸಿದ್ದಾರೆ

ಇದನ್ನೂ ಓದಿ: ಚಿರತೆಯ ದಾಳಿಯಿಂದ ತಪ್ಪಿಸಿಕೊಳ್ಳಲು ವಾಕಿಂಗ್ ಸ್ಟಿಕ್​​ನೊಂದಿಗೆ ಹೋರಾಡಿದ ಮಹಿಳೆ; ಭಯಾನಕ ದೃಶ್ಯವಿದು

TikTok: ಪ್ಲಾಸ್ಟಿಕ್ ಸರ್ಜರಿ ಮಾಡುವುದನ್ನು ಬಿಟ್ಟು ಟಿಕ್​ಟಾಕ್ ವಿಡಿಯೋ ಮಾಡಿದ ಡಾಕ್ಟರ್​; ಆಮೇಲೇನಾಯ್ತು?

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?