AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ‘ಮೆಕ್ಕಾದ ಗಡಿಯಾರ ಗೋಪುರಕ್ಕೆ ಬಡಿದ ಸಿಡಿಲು‘ ವಿಡಿಯೋ ನೋಡಿ

Mecca : ಸೌದಿ ಅರೇಬಿಯಾದಲ್ಲಿ ಆಗಸ್ಟ್​ 5ರ ಮಧ್ಯರಾತ್ರಿ ಬೀಳುತ್ತಿದ್ದ ಮಹಾಮಳೆ. ಖಡಲ್ ಖಡಲ್​ ಎಂಬ ಸಿಡಿಲು... ಮುಂದೇನಾಯಿತು?

Viral Video: ‘ಮೆಕ್ಕಾದ ಗಡಿಯಾರ ಗೋಪುರಕ್ಕೆ ಬಡಿದ ಸಿಡಿಲು‘ ವಿಡಿಯೋ ನೋಡಿ
TV9 Web
| Edited By: ಶ್ರೀದೇವಿ ಕಳಸದ|

Updated on:Aug 07, 2022 | 4:53 PM

Share

Viral : ಇತ್ತೀಚಿನ ದಿನಗಳಲ್ಲಿ ಸೌದಿ ಅರೇಬಿಯಾದ ಬಹುಪಾಲು ಪ್ರದೇಶಗಳು ವಾತಾವರಣ ವೈಪರೀತ್ಯಕ್ಕೆ ಒಳಗಾಗುತ್ತಿವೆ. ಅತಿಯಾದ ಮಳೆ, ಗುಡುಗು, ಸಿಡಿಲು ಜನಜೀವನವನ್ನು ಅಸ್ತವ್ಯಸ್ತಗೊಳಿಸುತ್ತಿದೆ. ಆಗಸ್ಟ್ 5ರಂದು ಮೆಕ್ಕಾದಲ್ಲಿ ಮಧ್ಯರಾತ್ರಿ ದೊಡ್ಡ ಸಿಡಿಲೊಂದು ಗಡಿಯಾರ ಗೋಪುರಕ್ಕೆ ಬಡಿದು ಅದು ಆಕಾಶದಲ್ಲಿ ಮರದ ಟಿಸಿಲುಗಳು ಮೂಡಿದಂತೆ ಮೂಡಿ ಮರೆಯಾದ ರೀತಿ ನೆಟ್ಟಿಗರನ್ನು ಚಕಿತರನ್ನಾಗಿಸಿದೆ. ಈತನಕ 61 ಸಾವಿರ ವೀಕ್ಷಣೆಗೆ ಈ ವಿಡಿಯೊಓ ಒಳಪಟ್ಟಿದೆ. ಇತ್ತೀಚಿನ ದಿನಗಳಲ್ಲಿ ಸೌದಿ ಅರೇಬಿಯಾದಲ್ಲಿ ಗುಡುಗು, ಮಿಂಚಿನಿಂದ ಕೂಡಿದ ಭಾರೀ ಮಳೆ ಬೀಳುತ್ತಿದೆ. ದಶಕದಿಂದ ಇಲ್ಲಿಯ ವಾತಾವರಣ ತೇವಾಂಶದಿಂದ ಕೂಡಿದೆ ಎಂದು ಅಲ್​ ಅರೇಬಿಯಾ ವರದಿ ಮಾಡಿದೆ. ಯುನೈಟೆಡ್ ಅರಬ್ ಎಮಿರೇಟ್ಸ್‌ನ ರಾಷ್ಟ್ರೀಯ ಹವಾಮಾನ ಕೇಂದ್ರ (NCM)ವು ಪ್ರಕಾರ 30 ವರ್ಷಗಳಲ್ಲಿ ಪ್ರಸಕ್ತ ಸಾಲಿನ ಜುಲೈ ಅತ್ಯಂತ ತೇವಾಂಶದಿಂದ ಕೂಡಿದ ತಿಂಗಳಾಗಿದೆ ಎಂದು ದಾಖಲಿಸಿದೆ. ಒಟ್ಟಾರೆಯಾಗಿ ಇಲ್ಲಿ ಇನ್ನೂ ಹೆಚ್ಚನ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.

ಹೀಗೆ ಮಳೆ ಬೀಳುತ್ತಿದ್ದರೆ ಇನ್ನೇನು ಮಾಡುವುದು? ಹಗಲೆಲ್ಲಾ ಕೆಲಸ ಮಾಡಿ, ರಾತ್ರಿಯಲ್ಲಿ ಹೀಗೆ ಆಕಾಶದಲ್ಲಿ ಮಿಂಚಿ ಮರೆಯಾಗುವ ಬಳ್ಳಿಗಳನ್ನು ನೋಡುತ್ತ ಕುಳಿತುಕೊಳ್ಳುವುದು. ಇದನ್ನು ನೆಟ್ಟಿಗರು ಹಂಚಿಕೊಳ್ಳುವುದು… ಇದು ಎಲ್ಲಿಗೆ ಬಂದು ನಿಲ್ಲುತ್ತದೆಯೋ ಆ ಆಕಾಶರಾಯನೇ ಹೇಳಬೇಕು.

Published On - 4:48 pm, Sun, 7 August 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ