AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ‘ಮೆಕ್ಕಾದ ಗಡಿಯಾರ ಗೋಪುರಕ್ಕೆ ಬಡಿದ ಸಿಡಿಲು‘ ವಿಡಿಯೋ ನೋಡಿ

Mecca : ಸೌದಿ ಅರೇಬಿಯಾದಲ್ಲಿ ಆಗಸ್ಟ್​ 5ರ ಮಧ್ಯರಾತ್ರಿ ಬೀಳುತ್ತಿದ್ದ ಮಹಾಮಳೆ. ಖಡಲ್ ಖಡಲ್​ ಎಂಬ ಸಿಡಿಲು... ಮುಂದೇನಾಯಿತು?

Viral Video: ‘ಮೆಕ್ಕಾದ ಗಡಿಯಾರ ಗೋಪುರಕ್ಕೆ ಬಡಿದ ಸಿಡಿಲು‘ ವಿಡಿಯೋ ನೋಡಿ
TV9 Web
| Edited By: |

Updated on:Aug 07, 2022 | 4:53 PM

Share

Viral : ಇತ್ತೀಚಿನ ದಿನಗಳಲ್ಲಿ ಸೌದಿ ಅರೇಬಿಯಾದ ಬಹುಪಾಲು ಪ್ರದೇಶಗಳು ವಾತಾವರಣ ವೈಪರೀತ್ಯಕ್ಕೆ ಒಳಗಾಗುತ್ತಿವೆ. ಅತಿಯಾದ ಮಳೆ, ಗುಡುಗು, ಸಿಡಿಲು ಜನಜೀವನವನ್ನು ಅಸ್ತವ್ಯಸ್ತಗೊಳಿಸುತ್ತಿದೆ. ಆಗಸ್ಟ್ 5ರಂದು ಮೆಕ್ಕಾದಲ್ಲಿ ಮಧ್ಯರಾತ್ರಿ ದೊಡ್ಡ ಸಿಡಿಲೊಂದು ಗಡಿಯಾರ ಗೋಪುರಕ್ಕೆ ಬಡಿದು ಅದು ಆಕಾಶದಲ್ಲಿ ಮರದ ಟಿಸಿಲುಗಳು ಮೂಡಿದಂತೆ ಮೂಡಿ ಮರೆಯಾದ ರೀತಿ ನೆಟ್ಟಿಗರನ್ನು ಚಕಿತರನ್ನಾಗಿಸಿದೆ. ಈತನಕ 61 ಸಾವಿರ ವೀಕ್ಷಣೆಗೆ ಈ ವಿಡಿಯೊಓ ಒಳಪಟ್ಟಿದೆ. ಇತ್ತೀಚಿನ ದಿನಗಳಲ್ಲಿ ಸೌದಿ ಅರೇಬಿಯಾದಲ್ಲಿ ಗುಡುಗು, ಮಿಂಚಿನಿಂದ ಕೂಡಿದ ಭಾರೀ ಮಳೆ ಬೀಳುತ್ತಿದೆ. ದಶಕದಿಂದ ಇಲ್ಲಿಯ ವಾತಾವರಣ ತೇವಾಂಶದಿಂದ ಕೂಡಿದೆ ಎಂದು ಅಲ್​ ಅರೇಬಿಯಾ ವರದಿ ಮಾಡಿದೆ. ಯುನೈಟೆಡ್ ಅರಬ್ ಎಮಿರೇಟ್ಸ್‌ನ ರಾಷ್ಟ್ರೀಯ ಹವಾಮಾನ ಕೇಂದ್ರ (NCM)ವು ಪ್ರಕಾರ 30 ವರ್ಷಗಳಲ್ಲಿ ಪ್ರಸಕ್ತ ಸಾಲಿನ ಜುಲೈ ಅತ್ಯಂತ ತೇವಾಂಶದಿಂದ ಕೂಡಿದ ತಿಂಗಳಾಗಿದೆ ಎಂದು ದಾಖಲಿಸಿದೆ. ಒಟ್ಟಾರೆಯಾಗಿ ಇಲ್ಲಿ ಇನ್ನೂ ಹೆಚ್ಚನ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.

ಹೀಗೆ ಮಳೆ ಬೀಳುತ್ತಿದ್ದರೆ ಇನ್ನೇನು ಮಾಡುವುದು? ಹಗಲೆಲ್ಲಾ ಕೆಲಸ ಮಾಡಿ, ರಾತ್ರಿಯಲ್ಲಿ ಹೀಗೆ ಆಕಾಶದಲ್ಲಿ ಮಿಂಚಿ ಮರೆಯಾಗುವ ಬಳ್ಳಿಗಳನ್ನು ನೋಡುತ್ತ ಕುಳಿತುಕೊಳ್ಳುವುದು. ಇದನ್ನು ನೆಟ್ಟಿಗರು ಹಂಚಿಕೊಳ್ಳುವುದು… ಇದು ಎಲ್ಲಿಗೆ ಬಂದು ನಿಲ್ಲುತ್ತದೆಯೋ ಆ ಆಕಾಶರಾಯನೇ ಹೇಳಬೇಕು.

Published On - 4:48 pm, Sun, 7 August 22

ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..!
BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..!
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಿಗ್ ಬಾಸ್​​ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಬಿಗ್ ಬಾಸ್​​ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್​​ಡಿ ದೇವೇಗೌಡ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್​​ಡಿ ದೇವೇಗೌಡ