AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ‘ಮೆಕ್ಕಾದ ಗಡಿಯಾರ ಗೋಪುರಕ್ಕೆ ಬಡಿದ ಸಿಡಿಲು‘ ವಿಡಿಯೋ ನೋಡಿ

Mecca : ಸೌದಿ ಅರೇಬಿಯಾದಲ್ಲಿ ಆಗಸ್ಟ್​ 5ರ ಮಧ್ಯರಾತ್ರಿ ಬೀಳುತ್ತಿದ್ದ ಮಹಾಮಳೆ. ಖಡಲ್ ಖಡಲ್​ ಎಂಬ ಸಿಡಿಲು... ಮುಂದೇನಾಯಿತು?

Viral Video: ‘ಮೆಕ್ಕಾದ ಗಡಿಯಾರ ಗೋಪುರಕ್ಕೆ ಬಡಿದ ಸಿಡಿಲು‘ ವಿಡಿಯೋ ನೋಡಿ
TV9 Web
| Edited By: |

Updated on:Aug 07, 2022 | 4:53 PM

Share

Viral : ಇತ್ತೀಚಿನ ದಿನಗಳಲ್ಲಿ ಸೌದಿ ಅರೇಬಿಯಾದ ಬಹುಪಾಲು ಪ್ರದೇಶಗಳು ವಾತಾವರಣ ವೈಪರೀತ್ಯಕ್ಕೆ ಒಳಗಾಗುತ್ತಿವೆ. ಅತಿಯಾದ ಮಳೆ, ಗುಡುಗು, ಸಿಡಿಲು ಜನಜೀವನವನ್ನು ಅಸ್ತವ್ಯಸ್ತಗೊಳಿಸುತ್ತಿದೆ. ಆಗಸ್ಟ್ 5ರಂದು ಮೆಕ್ಕಾದಲ್ಲಿ ಮಧ್ಯರಾತ್ರಿ ದೊಡ್ಡ ಸಿಡಿಲೊಂದು ಗಡಿಯಾರ ಗೋಪುರಕ್ಕೆ ಬಡಿದು ಅದು ಆಕಾಶದಲ್ಲಿ ಮರದ ಟಿಸಿಲುಗಳು ಮೂಡಿದಂತೆ ಮೂಡಿ ಮರೆಯಾದ ರೀತಿ ನೆಟ್ಟಿಗರನ್ನು ಚಕಿತರನ್ನಾಗಿಸಿದೆ. ಈತನಕ 61 ಸಾವಿರ ವೀಕ್ಷಣೆಗೆ ಈ ವಿಡಿಯೊಓ ಒಳಪಟ್ಟಿದೆ. ಇತ್ತೀಚಿನ ದಿನಗಳಲ್ಲಿ ಸೌದಿ ಅರೇಬಿಯಾದಲ್ಲಿ ಗುಡುಗು, ಮಿಂಚಿನಿಂದ ಕೂಡಿದ ಭಾರೀ ಮಳೆ ಬೀಳುತ್ತಿದೆ. ದಶಕದಿಂದ ಇಲ್ಲಿಯ ವಾತಾವರಣ ತೇವಾಂಶದಿಂದ ಕೂಡಿದೆ ಎಂದು ಅಲ್​ ಅರೇಬಿಯಾ ವರದಿ ಮಾಡಿದೆ. ಯುನೈಟೆಡ್ ಅರಬ್ ಎಮಿರೇಟ್ಸ್‌ನ ರಾಷ್ಟ್ರೀಯ ಹವಾಮಾನ ಕೇಂದ್ರ (NCM)ವು ಪ್ರಕಾರ 30 ವರ್ಷಗಳಲ್ಲಿ ಪ್ರಸಕ್ತ ಸಾಲಿನ ಜುಲೈ ಅತ್ಯಂತ ತೇವಾಂಶದಿಂದ ಕೂಡಿದ ತಿಂಗಳಾಗಿದೆ ಎಂದು ದಾಖಲಿಸಿದೆ. ಒಟ್ಟಾರೆಯಾಗಿ ಇಲ್ಲಿ ಇನ್ನೂ ಹೆಚ್ಚನ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.

ಹೀಗೆ ಮಳೆ ಬೀಳುತ್ತಿದ್ದರೆ ಇನ್ನೇನು ಮಾಡುವುದು? ಹಗಲೆಲ್ಲಾ ಕೆಲಸ ಮಾಡಿ, ರಾತ್ರಿಯಲ್ಲಿ ಹೀಗೆ ಆಕಾಶದಲ್ಲಿ ಮಿಂಚಿ ಮರೆಯಾಗುವ ಬಳ್ಳಿಗಳನ್ನು ನೋಡುತ್ತ ಕುಳಿತುಕೊಳ್ಳುವುದು. ಇದನ್ನು ನೆಟ್ಟಿಗರು ಹಂಚಿಕೊಳ್ಳುವುದು… ಇದು ಎಲ್ಲಿಗೆ ಬಂದು ನಿಲ್ಲುತ್ತದೆಯೋ ಆ ಆಕಾಶರಾಯನೇ ಹೇಳಬೇಕು.

Published On - 4:48 pm, Sun, 7 August 22

ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಅಗ್ನಿ ಅವಘಡ
ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಅಗ್ನಿ ಅವಘಡ
ಬೆಂಗಳೂರು ಏರ್​ಪೋರ್ಟ್ ಚೆಕಿಂಗ್ ಪಾಯಿಂಟ್ ಬಳಿಯೇ ರೋಡ್​ರೇಜ್!
ಬೆಂಗಳೂರು ಏರ್​ಪೋರ್ಟ್ ಚೆಕಿಂಗ್ ಪಾಯಿಂಟ್ ಬಳಿಯೇ ರೋಡ್​ರೇಜ್!
56 ಕೆಜಿ ತೂಕದ ಗೋಧಿ ಮೂಟೆ ಹೊತ್ತು ಅಯೋಧ್ಯೆಗೆ ಪಾದಯಾತ್ರೆ ಹೊರಟ ರಾಮ ಭಕ್ತ!
56 ಕೆಜಿ ತೂಕದ ಗೋಧಿ ಮೂಟೆ ಹೊತ್ತು ಅಯೋಧ್ಯೆಗೆ ಪಾದಯಾತ್ರೆ ಹೊರಟ ರಾಮ ಭಕ್ತ!
Daily Devotional: ಕುಂಕುಮಾರ್ಚನೆ ಹೆಣ್ಣು ಅಥವಾ ಗಂಡು ಯಾರು ಮಾಡಬೇಕು?
Daily Devotional: ಕುಂಕುಮಾರ್ಚನೆ ಹೆಣ್ಣು ಅಥವಾ ಗಂಡು ಯಾರು ಮಾಡಬೇಕು?