AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬೃಹತ್ ಮರಕ್ಕೆ ಬಡಿದ ಸಿಡಿಲು! ಮೈ ಝುಂ ಎನಿಸುವ ವಿಡಿಯೋ ವೈರಲ್

ಬೃಹತ್ ಮರವೊಂದಕ್ಕೆ ಭಾರಿ ಶಬ್ಧದ ಮೂಲಕ ಹೊಡೆದ ಮಿಂಚಿನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಮಳೆಗಾಲದಲ್ಲಿ ಮರದಡಿ ನಿಲ್ಲುವುದನ್ನು ತಪ್ಪಿಸಬೇಕು. ಇಲ್ಲವಾದಲ್ಲಿ ಜೀವ ಹಾನಿ ಕಟ್ಟಿಕಟ್ಟ ಬುತ್ತಿ.

Viral Video: ಬೃಹತ್ ಮರಕ್ಕೆ ಬಡಿದ ಸಿಡಿಲು! ಮೈ ಝುಂ ಎನಿಸುವ ವಿಡಿಯೋ ವೈರಲ್
ಮರಕ್ಕೆ ಬಡಿದ ಮಿಂಚು
TV9 Web
| Edited By: Rakesh Nayak Manchi|

Updated on:Jun 14, 2022 | 8:50 AM

Share

ಮಳೆಗಾಲದಲ್ಲಿ ಮರದಡಿ ನಿಲ್ಲುವುದು ಡೇಂಜರ್, ಒಂದೊಮ್ಮೆ ಸಿಡಿಲು (lightning) ಬಡಿಯಿತು ಎಂದರೆ ಸಾಕು ಜೀವ ಉಳಿಯುವುದೇ ಡೌಟ್. ಸಿಡಿಲ ಬಡಿತದ ಶಬ್ದಕ್ಕೆ ಶೇ 10ರಷ್ಟು ಜನರು ಸಾಮಾನ್ಯವಾಗಿ ಹೃದಯಾಘಾತದಿಂದ ಸಾವನ್ನಪ್ಪುತ್ತಾರೆ ಎಂದು ತಜ್ಞರು ಹೇಳುತ್ತಾರೆ. ಹೀಗಾಗಿ ಗುಡುಗು-ಸಿಡಿಲು ಸಹಿತ ಮಳೆಯ ಸಮಯದಲ್ಲಿ ಮರಗಳ ಕೆಳಗೆ ನಿಲ್ಲುವುದನ್ನು ತಪ್ಪಿಸಬೇಕು. ಇಲ್ಲವಾದಲ್ಲಿ ಸಿಡಿಲಿನ ಬಡಿತಕ್ಕೆ ಜೀವ ಕಳೆದುಕೊಳ್ಳಬೇಕಾದಿತು. ಈ ವಿಚಾರ ಯಾಕೆ ಹೇಳುತ್ತೇವೆ ಎಂದರೆ ಬೃಹತ್ ಮರವೊಂದಕ್ಕೆ ಭಾರಿ ಶಬ್ಧದ ಮೂಲಕ ಮಿಂಚು ಬಂದು ಹೊಡೆದಿರುವ ವಿಡಿಯೊ ಒಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral) ಆಗುತ್ತಿದೆ. ಈ ವಿಡಿಯೊ ವೀಕ್ಷಿಸುವಾಗ ಮೈ ಝುಂ ಎನಿಸುತ್ತದೆ.

ವಂಡರ್ ಆಫ್ ಸೈನ್ಸ್‌ ಎಂಬ ಟ್ವಿಟರ್ ಖಾತೆಯಲ್ಲಿ ಹಂಚಿಕೊಳ್ಳಲಾದ ಕ್ಲಿಪ್​ನಲ್ಲಿ, ಮರಕ್ಕೆ ಸಿಡಲು ಹೊಡೆಯುವುದನ್ನು ಕಾಣಬಹುದು. ‘ಚಂಡಮಾರುತದ ಸಮಯದಲ್ಲಿ ನೀವು ಎಂದಿಗೂ ಮರದ ಕೆಳಗೆ ನಿಲ್ಲಬಾರದು’ ಎಂದು ಶೀರ್ಷಿಕೆ ನೀಡಲಾಗಿದೆ. ಈ ವಿಡಿಯೊಗೆ ಸುಮಾರು 30,000 ವೀವ್ಸ್ ಮತ್ತು ಸಾವಿರಾರು ಲೈಕ್ಸ್ ಸಿಕ್ಕಿದೆ.

ಇದನ್ನೂ ಓದಿ: Viral Photo: ಈ ಜಿಲ್ಲಾಧಿಕಾರಿಯ 10ನೇ ತರಗತಿ ಅಂಕಪಟ್ಟಿ ನೋಡಿದರೆ ನೀವು ಆಶ್ಚರ್ಯ ಪಡುತ್ತೀರಿ

ವಿಡಿಯೋ ವೀಕ್ಷಣೆ ಮಾಡಿದ ನೆಟ್ಟಿಗರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ. ಬಳಕೆದಾರರೊಬ್ಬರು, “ಆ ಮರದಲ್ಲಿ ಮತ್ತೆ ಎಲೆಗಳು ಬೆಳೆಯುವುದಿಲ್ಲ” ಎಂದು ಹೇಳಿದ್ದಾರೆ. ಮತ್ತೊಬ್ಬರು, “ಚಂಡಮಾರುತದ ಸಮಯದಲ್ಲಿ ಇರುವ ಅತ್ಯಂತ ಅಪಾಯಕಾರಿಯಾದ ಸ್ಥಳ ಮರ” ಎಂದು ಹೇಳಿದ್ದಾರೆ.

ಇದನ್ನೂ ಓದಿ: Viral Video : ಪಸೂರಿ; ಹಾಡನ್ನು ಅಡುಗೆ ಮನೆಯಲ್ಲಿ ಅದ್ಭುತವಾಗಿ ಹಾಡಿದ ಯುವತಿ!

ಸಿಡಿಲಿನ ಅಪಾಯ ಎಷ್ಟರಮಟ್ಟಿಗೆ ಇದೆ ಎಂದು ಎಲ್ಲರಿಗೂ ತಿಳಿದಿರುವ ವಿಚಾರ. ಮತ್ತೊಂದು ಆಘಾತಕಾರಿ ಘಟನೆಯೆಂದರೆ, ಯುನೈಟೆಡ್ ಸ್ಟೇಟ್ಸ್​ನಲ್ಲಿ 15 ವರ್ಷದ ಬಾಲಕಿಯೊಬ್ಬಳ ಮನೆಗೆ ಮೇ ತಿಂಗಳಲ್ಲಿ ಸಿಡಿಲು ಅಪ್ಪಳಿಸಿದೆ. ಸಿಡಿಲಿನ ಹೊಡೆತಕ್ಕೆ ತತ್ತರಿಸಿದ್ದ  ಬಾಲಕಿ ಗಿಯಾನಾ ಸ್ಕಾರಮುಝೊ  ಬದುಕುಳಿದಿದ್ದೇ ದೊಡ್ಡ ಪವಾಡ ಎನಿಸಿದೆ. ಅದೇ ತಿಂಗಳಿನಲ್ಲಿ ಒಕ್ಲಹೋಮಾದ ಅಪಾರ್ಟ್‌ಮೆಂಟ್ ಕಟ್ಟಡಕ್ಕೆ ಸಿಡಿಲು ಬಡಿದಿತ್ತು. ಘಟನೆಯಲ್ಲಿ ಶೌಚಾಲಯವು ನಾಶಗೊಂಡಿತ್ತು.

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:39 am, Tue, 14 June 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ