AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ದಾಳಿ ಮಾಡಿದ ಸಿಂಹಿಣಿಗೆ ತಕ್ಕ ಶಾಸ್ತಿ ಮಾಡಿದ ಕೃಷ್ಣಮೃಗ

ಬೇಟೆ ಸಿಕ್ಕಿತು ಅಂದುಕೊಂಡು ಓಡೋಡಿ ಬಂದ ಸಿಂಹಿಣಿಗೆ ತನ್ನ ಬಾಗಿದ ಮತ್ತು ಚೂಪಾದ ಕೊಂಬುಗಳಿಂದ ತಿವಿದು ಸಿಂಹವನ್ನು ಓಡಿಸಿದ ಕೃಷ್ಣಮೃಗದ ವಿಡಿಯೋ ವೈರಲ್ ಆಗುತ್ತಿದೆ.

Viral Video: ದಾಳಿ ಮಾಡಿದ ಸಿಂಹಿಣಿಗೆ ತಕ್ಕ ಶಾಸ್ತಿ ಮಾಡಿದ ಕೃಷ್ಣಮೃಗ
ದಾಳಿ ಮಾಡಿದ ಸಿಂಹಿಣಿಗೆ ತಕ್ಕ ಶಾಸ್ತಿ ಮಾಡಿದ ಕೃಷ್ಣಮೃಗ
TV9 Web
| Edited By: |

Updated on: Oct 17, 2022 | 10:17 AM

Share

ಬಲಿಷ್ಠ ಪ್ರಾಣಿಗಳಾದ ಸಿಂಹ, ಹುಲಿಯಂತಹ ಪ್ರಾಣಿಗಳ ಮುಂದೆ ಯಾವುದೇ ಬೇಟೆ ಹಾದು ಹೋದರೂ ಅವುಗಳ ಸಾವು ನಿಶ್ಚಿತ. ಅದಾಗ್ಯೂ ಕೆಲವೊಮ್ಮೆ ಬೇಟೆಯಾಡಿದ ಪ್ರಾಣಿಗಳ ಪ್ರಬಲ ಪ್ರತಿರೋಧದಿಂದ ಬೇಟೆ ತಪ್ಪಿಹೋಗುವುದುಂಟು. ಸಿಂಹ ಕತ್ತೆಕಿರುಬದ ಮೇಲೆ ದಾಳಿ ನಡೆಸಿ ಬೇಟೆ ಬಲಿ ಪಡೆಯಲು ಸಾಧ್ಯವಾಗದೇ ಕೈಸುಟ್ಟುಕೊಂಡ ವಿಡಿಯೋ ಇತ್ತೀಚೆಗೆ ವೈರಲ್ ಆಗಿತ್ತು. ಇದೀಗ ಮತ್ತೊಂದು ವಿಡಿಯೋ ವೈರಲ್ ಆಗತ್ತಿದ್ದು, ಇದರಲ್ಲಿ ಕೃಷ್ಣಮೃಗ (ಹಲ್ಲೇಕರ)ದ ಮೇಲೆ ದಾಳಿ ನಡೆಸಿದ ಸಿಂಹಿಣಿ ಬೇಟೆ ಮಣಿಸಲಾಗದೆ ಓಡಿಹೋಗುವುದನ್ನು ಕಾಣಬಹುದು.

ವಿಡಿಯೋದಲ್ಲಿ ಕಾಣುವಂತೆ, ಒಂದು ಸಣ್ಣ ಕೊಳದಲ್ಲಿ ಹುಲ್ಲೇಕರ ನೀರು ಕುಡಿಯುತ್ತಿರುತ್ತದೆ. ದೂರದಿಂದಲೇ ನೋಡಿದ ಸಿಂಹಿಣಿ ಭರ್ಜರಿಯಾಗಿ ಮಾಂಸ ಸವಿಯಬಹುದು ಎಂದು ಓಡೋಡಿ ಬಂದು ಹುಲ್ಲೇಕರದ ಮೇಲೆರಗಿದೆ. ಈ ವೇಳೆ ತನ್ನನ್ನು ರಕ್ಷಿಸಿಕೊಳ್ಳಲು ಹುಲ್ಲೇಕರ ಬಾಗಿದ ಕೊಂಬುಗಳಿಂದ ಸಿಂಹಿಣಿಗೆ ಚುಚ್ಚಲು ಆರಂಭಿಸುತ್ತದೆ. ನೋವಿನಿಂದ ಬೇಟೆ ಬಿಟ್ಟ ಸಿಂಹಿಣಿ ಕೊಳದ ಮೂಲಕ ಓಡಿ ಹೋಗುತ್ತದೆ.

ದಿ ಡಾರ್ಕ್ ಸೈಡ್ ಆಫ್ ನೇಚರ್ ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಇದರ ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದು, “ಪ್ರತಿದಾಳಿಯೇ ಅತ್ಯುತ್ತಮ ರಕ್ಷಣಾ ತಂತ್ರ, ಹುಲ್ಲೇಕರ ತನ್ನ ಬಾಗಿದ ಕೊಂಬುಗಳನ್ನು ಸಿಂಹಿಣಿಯನ್ನು ಓಡಿಸಲು ಬಳಸುತ್ತದೆ” ಎಂದು ಶೀರ್ಷಿಕೆ ಬರೆಯಲಾಗಿದೆ. ಇತ್ತೀಚಿಗೆ ಹಂಚಿಕೊಂಡಿರುವ ಈ ವಿಡಿಯೋ 1 ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದಿದ್ದು, 72 ಸಾವಿರಕ್ಕೂ ಹೆಚ್ಚು ನೆಟ್ಟಿಗರು ಲೈಕ್​ಗಳನ್ನು ನೀಡಿದ್ದಾರೆ.

ಮತ್ತಷ್ಟು ವೈರಲ್ ವಿಡಿಯೋಗಳನ್ನು ವಿಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!