AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ದಾಳಿ ಮಾಡಿದ ಸಿಂಹಿಣಿಗೆ ತಕ್ಕ ಶಾಸ್ತಿ ಮಾಡಿದ ಕೃಷ್ಣಮೃಗ

ಬೇಟೆ ಸಿಕ್ಕಿತು ಅಂದುಕೊಂಡು ಓಡೋಡಿ ಬಂದ ಸಿಂಹಿಣಿಗೆ ತನ್ನ ಬಾಗಿದ ಮತ್ತು ಚೂಪಾದ ಕೊಂಬುಗಳಿಂದ ತಿವಿದು ಸಿಂಹವನ್ನು ಓಡಿಸಿದ ಕೃಷ್ಣಮೃಗದ ವಿಡಿಯೋ ವೈರಲ್ ಆಗುತ್ತಿದೆ.

Viral Video: ದಾಳಿ ಮಾಡಿದ ಸಿಂಹಿಣಿಗೆ ತಕ್ಕ ಶಾಸ್ತಿ ಮಾಡಿದ ಕೃಷ್ಣಮೃಗ
ದಾಳಿ ಮಾಡಿದ ಸಿಂಹಿಣಿಗೆ ತಕ್ಕ ಶಾಸ್ತಿ ಮಾಡಿದ ಕೃಷ್ಣಮೃಗ
TV9 Web
| Edited By: Rakesh Nayak Manchi|

Updated on: Oct 17, 2022 | 10:17 AM

Share

ಬಲಿಷ್ಠ ಪ್ರಾಣಿಗಳಾದ ಸಿಂಹ, ಹುಲಿಯಂತಹ ಪ್ರಾಣಿಗಳ ಮುಂದೆ ಯಾವುದೇ ಬೇಟೆ ಹಾದು ಹೋದರೂ ಅವುಗಳ ಸಾವು ನಿಶ್ಚಿತ. ಅದಾಗ್ಯೂ ಕೆಲವೊಮ್ಮೆ ಬೇಟೆಯಾಡಿದ ಪ್ರಾಣಿಗಳ ಪ್ರಬಲ ಪ್ರತಿರೋಧದಿಂದ ಬೇಟೆ ತಪ್ಪಿಹೋಗುವುದುಂಟು. ಸಿಂಹ ಕತ್ತೆಕಿರುಬದ ಮೇಲೆ ದಾಳಿ ನಡೆಸಿ ಬೇಟೆ ಬಲಿ ಪಡೆಯಲು ಸಾಧ್ಯವಾಗದೇ ಕೈಸುಟ್ಟುಕೊಂಡ ವಿಡಿಯೋ ಇತ್ತೀಚೆಗೆ ವೈರಲ್ ಆಗಿತ್ತು. ಇದೀಗ ಮತ್ತೊಂದು ವಿಡಿಯೋ ವೈರಲ್ ಆಗತ್ತಿದ್ದು, ಇದರಲ್ಲಿ ಕೃಷ್ಣಮೃಗ (ಹಲ್ಲೇಕರ)ದ ಮೇಲೆ ದಾಳಿ ನಡೆಸಿದ ಸಿಂಹಿಣಿ ಬೇಟೆ ಮಣಿಸಲಾಗದೆ ಓಡಿಹೋಗುವುದನ್ನು ಕಾಣಬಹುದು.

ವಿಡಿಯೋದಲ್ಲಿ ಕಾಣುವಂತೆ, ಒಂದು ಸಣ್ಣ ಕೊಳದಲ್ಲಿ ಹುಲ್ಲೇಕರ ನೀರು ಕುಡಿಯುತ್ತಿರುತ್ತದೆ. ದೂರದಿಂದಲೇ ನೋಡಿದ ಸಿಂಹಿಣಿ ಭರ್ಜರಿಯಾಗಿ ಮಾಂಸ ಸವಿಯಬಹುದು ಎಂದು ಓಡೋಡಿ ಬಂದು ಹುಲ್ಲೇಕರದ ಮೇಲೆರಗಿದೆ. ಈ ವೇಳೆ ತನ್ನನ್ನು ರಕ್ಷಿಸಿಕೊಳ್ಳಲು ಹುಲ್ಲೇಕರ ಬಾಗಿದ ಕೊಂಬುಗಳಿಂದ ಸಿಂಹಿಣಿಗೆ ಚುಚ್ಚಲು ಆರಂಭಿಸುತ್ತದೆ. ನೋವಿನಿಂದ ಬೇಟೆ ಬಿಟ್ಟ ಸಿಂಹಿಣಿ ಕೊಳದ ಮೂಲಕ ಓಡಿ ಹೋಗುತ್ತದೆ.

ದಿ ಡಾರ್ಕ್ ಸೈಡ್ ಆಫ್ ನೇಚರ್ ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಇದರ ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದು, “ಪ್ರತಿದಾಳಿಯೇ ಅತ್ಯುತ್ತಮ ರಕ್ಷಣಾ ತಂತ್ರ, ಹುಲ್ಲೇಕರ ತನ್ನ ಬಾಗಿದ ಕೊಂಬುಗಳನ್ನು ಸಿಂಹಿಣಿಯನ್ನು ಓಡಿಸಲು ಬಳಸುತ್ತದೆ” ಎಂದು ಶೀರ್ಷಿಕೆ ಬರೆಯಲಾಗಿದೆ. ಇತ್ತೀಚಿಗೆ ಹಂಚಿಕೊಂಡಿರುವ ಈ ವಿಡಿಯೋ 1 ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದಿದ್ದು, 72 ಸಾವಿರಕ್ಕೂ ಹೆಚ್ಚು ನೆಟ್ಟಿಗರು ಲೈಕ್​ಗಳನ್ನು ನೀಡಿದ್ದಾರೆ.

ಮತ್ತಷ್ಟು ವೈರಲ್ ವಿಡಿಯೋಗಳನ್ನು ವಿಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್