AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ದಾಳಿ ಮಾಡಿದ ಸಿಂಹಿಣಿಗೆ ತಕ್ಕ ಶಾಸ್ತಿ ಮಾಡಿದ ಕೃಷ್ಣಮೃಗ

ಬೇಟೆ ಸಿಕ್ಕಿತು ಅಂದುಕೊಂಡು ಓಡೋಡಿ ಬಂದ ಸಿಂಹಿಣಿಗೆ ತನ್ನ ಬಾಗಿದ ಮತ್ತು ಚೂಪಾದ ಕೊಂಬುಗಳಿಂದ ತಿವಿದು ಸಿಂಹವನ್ನು ಓಡಿಸಿದ ಕೃಷ್ಣಮೃಗದ ವಿಡಿಯೋ ವೈರಲ್ ಆಗುತ್ತಿದೆ.

Viral Video: ದಾಳಿ ಮಾಡಿದ ಸಿಂಹಿಣಿಗೆ ತಕ್ಕ ಶಾಸ್ತಿ ಮಾಡಿದ ಕೃಷ್ಣಮೃಗ
ದಾಳಿ ಮಾಡಿದ ಸಿಂಹಿಣಿಗೆ ತಕ್ಕ ಶಾಸ್ತಿ ಮಾಡಿದ ಕೃಷ್ಣಮೃಗ
TV9 Web
| Edited By: Rakesh Nayak Manchi|

Updated on: Oct 17, 2022 | 10:17 AM

Share

ಬಲಿಷ್ಠ ಪ್ರಾಣಿಗಳಾದ ಸಿಂಹ, ಹುಲಿಯಂತಹ ಪ್ರಾಣಿಗಳ ಮುಂದೆ ಯಾವುದೇ ಬೇಟೆ ಹಾದು ಹೋದರೂ ಅವುಗಳ ಸಾವು ನಿಶ್ಚಿತ. ಅದಾಗ್ಯೂ ಕೆಲವೊಮ್ಮೆ ಬೇಟೆಯಾಡಿದ ಪ್ರಾಣಿಗಳ ಪ್ರಬಲ ಪ್ರತಿರೋಧದಿಂದ ಬೇಟೆ ತಪ್ಪಿಹೋಗುವುದುಂಟು. ಸಿಂಹ ಕತ್ತೆಕಿರುಬದ ಮೇಲೆ ದಾಳಿ ನಡೆಸಿ ಬೇಟೆ ಬಲಿ ಪಡೆಯಲು ಸಾಧ್ಯವಾಗದೇ ಕೈಸುಟ್ಟುಕೊಂಡ ವಿಡಿಯೋ ಇತ್ತೀಚೆಗೆ ವೈರಲ್ ಆಗಿತ್ತು. ಇದೀಗ ಮತ್ತೊಂದು ವಿಡಿಯೋ ವೈರಲ್ ಆಗತ್ತಿದ್ದು, ಇದರಲ್ಲಿ ಕೃಷ್ಣಮೃಗ (ಹಲ್ಲೇಕರ)ದ ಮೇಲೆ ದಾಳಿ ನಡೆಸಿದ ಸಿಂಹಿಣಿ ಬೇಟೆ ಮಣಿಸಲಾಗದೆ ಓಡಿಹೋಗುವುದನ್ನು ಕಾಣಬಹುದು.

ವಿಡಿಯೋದಲ್ಲಿ ಕಾಣುವಂತೆ, ಒಂದು ಸಣ್ಣ ಕೊಳದಲ್ಲಿ ಹುಲ್ಲೇಕರ ನೀರು ಕುಡಿಯುತ್ತಿರುತ್ತದೆ. ದೂರದಿಂದಲೇ ನೋಡಿದ ಸಿಂಹಿಣಿ ಭರ್ಜರಿಯಾಗಿ ಮಾಂಸ ಸವಿಯಬಹುದು ಎಂದು ಓಡೋಡಿ ಬಂದು ಹುಲ್ಲೇಕರದ ಮೇಲೆರಗಿದೆ. ಈ ವೇಳೆ ತನ್ನನ್ನು ರಕ್ಷಿಸಿಕೊಳ್ಳಲು ಹುಲ್ಲೇಕರ ಬಾಗಿದ ಕೊಂಬುಗಳಿಂದ ಸಿಂಹಿಣಿಗೆ ಚುಚ್ಚಲು ಆರಂಭಿಸುತ್ತದೆ. ನೋವಿನಿಂದ ಬೇಟೆ ಬಿಟ್ಟ ಸಿಂಹಿಣಿ ಕೊಳದ ಮೂಲಕ ಓಡಿ ಹೋಗುತ್ತದೆ.

ದಿ ಡಾರ್ಕ್ ಸೈಡ್ ಆಫ್ ನೇಚರ್ ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಇದರ ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದು, “ಪ್ರತಿದಾಳಿಯೇ ಅತ್ಯುತ್ತಮ ರಕ್ಷಣಾ ತಂತ್ರ, ಹುಲ್ಲೇಕರ ತನ್ನ ಬಾಗಿದ ಕೊಂಬುಗಳನ್ನು ಸಿಂಹಿಣಿಯನ್ನು ಓಡಿಸಲು ಬಳಸುತ್ತದೆ” ಎಂದು ಶೀರ್ಷಿಕೆ ಬರೆಯಲಾಗಿದೆ. ಇತ್ತೀಚಿಗೆ ಹಂಚಿಕೊಂಡಿರುವ ಈ ವಿಡಿಯೋ 1 ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದಿದ್ದು, 72 ಸಾವಿರಕ್ಕೂ ಹೆಚ್ಚು ನೆಟ್ಟಿಗರು ಲೈಕ್​ಗಳನ್ನು ನೀಡಿದ್ದಾರೆ.

ಮತ್ತಷ್ಟು ವೈರಲ್ ವಿಡಿಯೋಗಳನ್ನು ವಿಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Follow Us
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!