AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮೊದಲ ಬಾರಿ ವಿಮಾನ ಹತ್ತಿದ ಮಗಳಿಗೆ ಸರ್​ಪ್ರೈಸ್ ಕೊಟ್ಟ ಅಪ್ಪ; ಈ ವಿಡಿಯೋವನ್ನು ಮಿಸ್ ಮಾಡಲೇಬೇಡಿ!

Trending Video: ಮೊದಲ ಬಾರಿಗೆ ವಿಮಾನ ಹತ್ತಿದ ಪುಟ್ಟ ಹುಡುಗಿಯೊಬ್ಬಳು ಆ ವಿಮಾನದಲ್ಲಿ ತನ್ನ ಅಪ್ಪನೇ ಪೈಲಟ್ ಎಂದು ಗೊತ್ತಾಗುತ್ತಿದ್ದಂತೆ ಖುಷಿಯಿಂದ ಸಂಭ್ರಮಿಸಿದ್ದಾಳೆ.

Viral Video: ಮೊದಲ ಬಾರಿ ವಿಮಾನ ಹತ್ತಿದ ಮಗಳಿಗೆ ಸರ್​ಪ್ರೈಸ್ ಕೊಟ್ಟ ಅಪ್ಪ; ಈ ವಿಡಿಯೋವನ್ನು ಮಿಸ್ ಮಾಡಲೇಬೇಡಿ!
ಅಪ್ಪನನ್ನು ಪೈಲಟ್ ಡ್ರೆಸ್​ನಲ್ಲಿ ನೋಡಿ ಖುಷಿಯಾದ ಬಾಲಕಿ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Oct 12, 2021 | 8:38 PM

ಮಕ್ಕಳಿಗೆ ಅದರಲ್ಲೂ ಹೆಣ್ಣುಮಕ್ಕಳಿಗೆ ಅಮ್ಮನಿಗಿಂತಲೂ ಅಪ್ಪನೆಂದರೆ ಅಚ್ಚುಮೆಚ್ಚು. ಅಪ್ಪಂದಿರಿಗೂ ಅಷ್ಟೆ ಮಗನಿಗಿಂತ ಮಗಳೆಂದರೆ ಒಂದು ಮುಷ್ಠಿ ಜಾಸ್ತಿಯೇ ಪ್ರೀತಿ. ಮೊದಲ ಬಾರಿಗೆ ವಿಮಾನ ಹತ್ತಿದ ಪುಟ್ಟ ಹುಡುಗಿಯೊಬ್ಬಳು ಆ ವಿಮಾನದಲ್ಲಿ ತನ್ನ ಅಪ್ಪನೇ ಪೈಲಟ್ ಎಂದು ಗೊತ್ತಾಗುತ್ತಿದ್ದಂತೆ ಖುಷಿಯಿಂದ ಸಂಭ್ರಮಿಸಿದ್ದಾಳೆ. ಕೈಯಲ್ಲಿ ವಿಮಾನದ ಟಿಕೆಟ್ ಹಿಡಿದು, ಸೀಟ್ ಮೇಲೆ ಹತ್ತಿ ನಿಂತು ಪೈಲಟ್ ಡ್ರೆಸ್​ನಲ್ಲಿದ್ದ ಅಪ್ಪನನ್ನು ಕರೆಯುತ್ತಿರುವ ವಿಡಿಯೋ ವೈರಲ್ ಆಗಿದೆ.

ಮೊದಲ ಬಾರಿಗೆ ವಿಮಾನ ಹತ್ತಿದ್ದ ಆ ಹುಡುಗಿಗೆ ಅದರ ಖುಷಿ ಒಂದೆಡೆಯಾದರೆ ವಿಮಾನದೊಳಗೆ ಬಂದ ಕೂಡಲೆ ಪೈಲಟ್ ಸೀಟಿನಿಂದ ಎದ್ದು ಹೊರಗೆ ಬಂದ ಅಪ್ಪನನ್ನು ನೋಡಿ ಆದ ಖುಷಿ ಇನ್ನೊಂದೆಡೆ. ದೆಹಲಿಯ ಗೋ ಏರ್ ವಿಮಾನದಲ್ಲಿ ಅಪ್ಪ-ಮಗಳ ಈ ಸಂಭ್ರಮದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ನೆಟ್ಟಿಗರ ಮನ ಗೆದ್ದಿದೆ. ಮುದ್ದಾದ ಈ ವಿಡಿಯೋ ನೋಡಿದವರು ಆ ಪುಟ್ಟ ಹುಡುಗಿಯ ಖುಷಿ ಕಂಡು ತಾವೂ ಖುಷಿಯಾಗಿದ್ದಾರೆ.

ಶನಾಯ ಎಂಬ ಪುಟ್ಟ ಹುಡುಗಿ ‘ಪಪ್ಪಾ’ ಎಂದು ಜೋರಾಗಿ ಅಪ್ಪನನ್ನು ಕರೆಯುತ್ತಿರುವ ವಿಡಿಯೋ ಇಲ್ಲಿದೆ. ಮಗಳಿಗೆ ಸರ್​ಪ್ರೈಸ್ ಕೊಡಲೆಂದೇ ಅಪ್ಪ ಪೈಲಟ್ ಸೀಟಿನಿಂದ ಹೊರಗೆ ಬಂದು ನಿಂತಿದ್ದರು. ಬೇರೆ ಪ್ರಯಾಣಿಕರು ತಮ್ಮ ಸೀಟಿನತ್ತ ಹೋಗುತ್ತಿರುವಾಗ ಆ ಹುಡುಗಿಯ ಅಪ್ಪ ತನ್ನ ಮಗಳತ್ತ ದೂರದಿಂದಲೇ ಕೈ ಬೀಸಿ, ಸ್ಮೈಲ್ ಮಾಡಿದ್ದಾರೆ.

ಈ ವಿಡಿಯೋಗೆ ಇನ್​ಸ್ಟಾಗ್ರಾಂನಲ್ಲಿ 1.4 ಲಕ್ಷಕ್ಕೂ ಹೆಚ್ಚು ಲೈಕ್​ಗಳು ಬಂದಿವೆ. 12 ಲಕ್ಷಕ್ಕೂ ಹೆಚ್ಚು ಜನರು ಈ ವಿಡಿಯೋ ವೀಕ್ಷಿಸಿದ್ದಾರೆ. ನೀವಿನ್ನೂ ಈ ವಿಡಿಯೋ ನೋಡದಿದ್ದರೆ ನೋಡಿಬಿಡಿ.

ಇದನ್ನೂ ಓದಿ: Viral Video: ನವರಾತ್ರಿ ದಿನವೇ 2 ತಲೆ, 3 ಕಣ್ಣುಗಳಿರುವ ಕರು ಜನನ; ದುರ್ಗೆಯ ಅವತಾರವೆಂದು ಪೂಜಿಸಿದ ಜನರು!

Viral Video: ಮನುಷ್ಯರಂತೇ ಕುಳಿತು ಬಟ್ಟೆ ಒಗೆಯುವ ಈ ಚಿಂಪಾಜಿಯ ವಿಡಿಯೋವನ್ನೊಮ್ಮೆ ನೀವು ನೋಡಲೇಬೇಕು!

ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ
ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ
ಬಸ್​ನಲ್ಲಿ ಕಂಡಕ್ಟರ್ ಮೊಬೈಲ್​​ನ್ನೇ ಕದ್ದ ಚಾಲಾಕಿ ಕಳ್ಳ
ಬಸ್​ನಲ್ಲಿ ಕಂಡಕ್ಟರ್ ಮೊಬೈಲ್​​ನ್ನೇ ಕದ್ದ ಚಾಲಾಕಿ ಕಳ್ಳ