AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರುಣೆಗೆ ಜಗತ್ತನ್ನು ಬದಲಾಯಿಸುವ ಶಕ್ತಿ ಇದೆ; ಪಕ್ಷಿಗಳಿಗೆ ಆಹಾರ ಕೊಡುತ್ತಿರುವ ಪುಟ್ಟಣ್ಣನ ಈ ವಿಡಿಯೋ ನೋಡಿ

Bird Love : ಈ ಜಗತ್ತಿನಲ್ಲಿ ತಾನು ಏಕಾಂಗಿ ಎಂದು ಅಂದುಕೊಳ್ಳುವ ಎಲ್ಲರಿಗೂ ‘ಕರುಣೆ’ ಎನ್ನುವುದು ಭರವಸೆಯನ್ನು ನೀಡುತ್ತದೆ. ಮಗು ಮತ್ತು ಮಾಗಿದ ಮನಸಿನಲ್ಲಿ ಮಾತ್ರ ಇದು ಇರಲು ಸಾಧ್ಯ.

ಕರುಣೆಗೆ ಜಗತ್ತನ್ನು ಬದಲಾಯಿಸುವ ಶಕ್ತಿ ಇದೆ; ಪಕ್ಷಿಗಳಿಗೆ ಆಹಾರ ಕೊಡುತ್ತಿರುವ ಪುಟ್ಟಣ್ಣನ ಈ ವಿಡಿಯೋ ನೋಡಿ
ಪಕ್ಷಿಗಳಿಗೆ ಆಹಾರ ತಿನ್ನಿಸುವ ಬಾಲಕ
ಶ್ರೀದೇವಿ ಕಳಸದ
ಶ್ರೀದೇವಿ ಕಳಸದ|

Updated on:Feb 07, 2023 | 4:48 PM

Share

Viral Video : ಜಗತ್ತು ಪ್ರಕ್ಷುಬ್ಧ ಎನ್ನಿಸುವ ಹೊತ್ತಿಗೆ ಹೀಗೆ ಕರುಣೆಯನ್ನೇ ಧ್ಯಾನಿಸಲು ದೇವರು ಅವಕಾಶ ಮಾಡಿಕೊಡುತ್ತಾನೆ. ಭರವಸೆಯನ್ನು ಇಷ್ಟು ಬೇಗ ಕಳೆದುಕೊಂಡರೆ ಹೇಗೆ? ಎಂದು ಹೀಗೆ ಪುಟ್ಟದೇವತೆಗಳೊಳಗೆ ಅವತರಿಸಿ ಕೇಳುತ್ತಾನೆ. ಇದೀಗ ವೈರಲ್ ಆಗಿರುವ ಈ ವಿಡಿಯೋ ನೋಡಿ. ಪುಟ್ಟಣ್ಣನೊಬ್ಬ ಪಕ್ಷಿಗಳಿಗೆ ಆಹಾರ ಕೊಡುತ್ತಿದ್ದಾನೆ. ಅವು ಒಂದಾದ ಮೇಲೊಂದು ಪುಟ್ಟ ಬಾಯಿ ತೆಗೆಯುತ್ತ ಮೆಲ್ಲುತ್ತಿವೆ. ಸ್ವೀಕರಿಸುವುದು ಬಹಳ ಸುಲಭ. ಆದರೆ ಕೊಡುವುದು?

ಮಗು ಅಥವಾ ಮಾಗಿದ ಮನಸಿಗೆ ಮಾತ್ರ ಹೀಗಿರಲು ಸಾಧ್ಯ. ಈ ಜಗತ್ತಿನಲ್ಲಿ ತಾನು ಏಕಾಂಗಿ ಎಂದು ಅಂದುಕೊಳ್ಳುವ ಎಲ್ಲರಿಗೂ ಕರುಣೆ ಎನ್ನುವುದು ಭರವಸೆಯನ್ನು ನೀಡುತ್ತದೆ ಎಂಬ ಶೀರ್ಷಿಕೆ ಇದಕ್ಕಿದೆ.

ಈತನಕ ಈ ವಿಡಿಯೋ ಅನ್ನು 1.5 ಮಿಲಿಯನ್​ ಜನರು ನೋಡಿದ್ದಾರೆ. 81,000 ಜನರು ಇಷ್ಟಪಟ್ಟಿದ್ದಾರೆ. ಸಾವಿರಾರು ಜನರು ರೀಟ್ವೀಟ್ ಮಾಡಿದ್ದಾರೆ. ಪುಟ್ಟ ಕಡ್ಡಿಗಳಿಂದ ಆಹಾರದ ತುಣುಕನ್ನು ಹಕ್ಕಿಗಳ ಬಾಯಿಗೆ ಇಟ್ಟಮೇಲೆ ಆ ಹಕ್ಕಿಗಳು ನಿಂತಲ್ಲೇ ಕುಣಿಯುವುದನ್ನು ಗಮನಿಸಿ. ಈ ವಿಡಿಯೋಗೆ ಅನೇಕರು ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ : ಸೈಬರ್ ಸೇಫ್​ ಟೀ; ಗೂಗಲ್​ ಇಂಡಿಯಾ ಝೊಮ್ಯಾಟೋ ಸೇರಿ ತಯಾರಿಸಿದ ‘ಚಹಾ’ ನಿಮಗಾಗಿ

ಈ ಮಗು ಅಪಾರ ಕರುಣೆಯನ್ನು ಹೊಂದಿದೆ ಎಂದು ಶ್ಲಾಘಿಸುತ್ತಾರೆ ನೆಟ್ಟಿಗರು. ಹೀಗೆ ಜಗತ್ತಿನ ಪವಿತ್ರ ಸಂಗತಿಗಳನ್ನು ಕಾಪಾಡಲು ಇಂಥ ಜೀವಗಳು ಹೆಚ್ಚಲಿ ಎಂದು ಹಾರೈಸಿದ್ದಾರೆ ಅನೇಕರು. ಇದು ನಿಜವಾದ ಸೌಂದರ್ಯ ಎಂದಿದ್ದಾರೆ ಕೆಲವರು.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 4:44 pm, Tue, 7 February 23

Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್