AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರುಣೆಗೆ ಜಗತ್ತನ್ನು ಬದಲಾಯಿಸುವ ಶಕ್ತಿ ಇದೆ; ಪಕ್ಷಿಗಳಿಗೆ ಆಹಾರ ಕೊಡುತ್ತಿರುವ ಪುಟ್ಟಣ್ಣನ ಈ ವಿಡಿಯೋ ನೋಡಿ

Bird Love : ಈ ಜಗತ್ತಿನಲ್ಲಿ ತಾನು ಏಕಾಂಗಿ ಎಂದು ಅಂದುಕೊಳ್ಳುವ ಎಲ್ಲರಿಗೂ ‘ಕರುಣೆ’ ಎನ್ನುವುದು ಭರವಸೆಯನ್ನು ನೀಡುತ್ತದೆ. ಮಗು ಮತ್ತು ಮಾಗಿದ ಮನಸಿನಲ್ಲಿ ಮಾತ್ರ ಇದು ಇರಲು ಸಾಧ್ಯ.

ಕರುಣೆಗೆ ಜಗತ್ತನ್ನು ಬದಲಾಯಿಸುವ ಶಕ್ತಿ ಇದೆ; ಪಕ್ಷಿಗಳಿಗೆ ಆಹಾರ ಕೊಡುತ್ತಿರುವ ಪುಟ್ಟಣ್ಣನ ಈ ವಿಡಿಯೋ ನೋಡಿ
ಪಕ್ಷಿಗಳಿಗೆ ಆಹಾರ ತಿನ್ನಿಸುವ ಬಾಲಕ
ಶ್ರೀದೇವಿ ಕಳಸದ
|

Updated on:Feb 07, 2023 | 4:48 PM

Share

Viral Video : ಜಗತ್ತು ಪ್ರಕ್ಷುಬ್ಧ ಎನ್ನಿಸುವ ಹೊತ್ತಿಗೆ ಹೀಗೆ ಕರುಣೆಯನ್ನೇ ಧ್ಯಾನಿಸಲು ದೇವರು ಅವಕಾಶ ಮಾಡಿಕೊಡುತ್ತಾನೆ. ಭರವಸೆಯನ್ನು ಇಷ್ಟು ಬೇಗ ಕಳೆದುಕೊಂಡರೆ ಹೇಗೆ? ಎಂದು ಹೀಗೆ ಪುಟ್ಟದೇವತೆಗಳೊಳಗೆ ಅವತರಿಸಿ ಕೇಳುತ್ತಾನೆ. ಇದೀಗ ವೈರಲ್ ಆಗಿರುವ ಈ ವಿಡಿಯೋ ನೋಡಿ. ಪುಟ್ಟಣ್ಣನೊಬ್ಬ ಪಕ್ಷಿಗಳಿಗೆ ಆಹಾರ ಕೊಡುತ್ತಿದ್ದಾನೆ. ಅವು ಒಂದಾದ ಮೇಲೊಂದು ಪುಟ್ಟ ಬಾಯಿ ತೆಗೆಯುತ್ತ ಮೆಲ್ಲುತ್ತಿವೆ. ಸ್ವೀಕರಿಸುವುದು ಬಹಳ ಸುಲಭ. ಆದರೆ ಕೊಡುವುದು?

ಮಗು ಅಥವಾ ಮಾಗಿದ ಮನಸಿಗೆ ಮಾತ್ರ ಹೀಗಿರಲು ಸಾಧ್ಯ. ಈ ಜಗತ್ತಿನಲ್ಲಿ ತಾನು ಏಕಾಂಗಿ ಎಂದು ಅಂದುಕೊಳ್ಳುವ ಎಲ್ಲರಿಗೂ ಕರುಣೆ ಎನ್ನುವುದು ಭರವಸೆಯನ್ನು ನೀಡುತ್ತದೆ ಎಂಬ ಶೀರ್ಷಿಕೆ ಇದಕ್ಕಿದೆ.

ಈತನಕ ಈ ವಿಡಿಯೋ ಅನ್ನು 1.5 ಮಿಲಿಯನ್​ ಜನರು ನೋಡಿದ್ದಾರೆ. 81,000 ಜನರು ಇಷ್ಟಪಟ್ಟಿದ್ದಾರೆ. ಸಾವಿರಾರು ಜನರು ರೀಟ್ವೀಟ್ ಮಾಡಿದ್ದಾರೆ. ಪುಟ್ಟ ಕಡ್ಡಿಗಳಿಂದ ಆಹಾರದ ತುಣುಕನ್ನು ಹಕ್ಕಿಗಳ ಬಾಯಿಗೆ ಇಟ್ಟಮೇಲೆ ಆ ಹಕ್ಕಿಗಳು ನಿಂತಲ್ಲೇ ಕುಣಿಯುವುದನ್ನು ಗಮನಿಸಿ. ಈ ವಿಡಿಯೋಗೆ ಅನೇಕರು ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ : ಸೈಬರ್ ಸೇಫ್​ ಟೀ; ಗೂಗಲ್​ ಇಂಡಿಯಾ ಝೊಮ್ಯಾಟೋ ಸೇರಿ ತಯಾರಿಸಿದ ‘ಚಹಾ’ ನಿಮಗಾಗಿ

ಈ ಮಗು ಅಪಾರ ಕರುಣೆಯನ್ನು ಹೊಂದಿದೆ ಎಂದು ಶ್ಲಾಘಿಸುತ್ತಾರೆ ನೆಟ್ಟಿಗರು. ಹೀಗೆ ಜಗತ್ತಿನ ಪವಿತ್ರ ಸಂಗತಿಗಳನ್ನು ಕಾಪಾಡಲು ಇಂಥ ಜೀವಗಳು ಹೆಚ್ಚಲಿ ಎಂದು ಹಾರೈಸಿದ್ದಾರೆ ಅನೇಕರು. ಇದು ನಿಜವಾದ ಸೌಂದರ್ಯ ಎಂದಿದ್ದಾರೆ ಕೆಲವರು.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 4:44 pm, Tue, 7 February 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ