AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ನಿರತಂರ ಮಳೆ ಹಿನ್ನೆಲೆ ಅಂತಿಮವಾಗಿ ಬಟ್ಟೆ ಒಣಗಿಸಲು ಪರಿಹಾರ ಕಂಡುಕೊಂಡ ಮುಂಬೈ ಜನರು

ಒಗೆದ ಬಟ್ಟೆಗಳನ್ನು ಕೂಡ ಸರಿಯಾಗಿ ಒಣಗಿಸಲಾಗದೆ ಪರದಾಡುತ್ತಿದ್ದ ಮುಂಬೈನ ಒಂದಷ್ಟು ಜನರು ರೈಲಿನಲ್ಲಿ ಸಂಚರಿಸುವಾಗ ಅದರಲ್ಲಿರುವ ಫ್ಯಾನ್ ಅಡಿಯಲ್ಲಿ ಬಟ್ಟೆಗಳನ್ನು ಒಣಗಲು ಹಾಕುತ್ತಿದ್ದಾರೆ. ಇದರ ವಿಡಿಯೋ ವೈರಲ್ ಆಗುತ್ತಿದೆ.

Viral Video: ನಿರತಂರ ಮಳೆ ಹಿನ್ನೆಲೆ ಅಂತಿಮವಾಗಿ ಬಟ್ಟೆ ಒಣಗಿಸಲು ಪರಿಹಾರ ಕಂಡುಕೊಂಡ ಮುಂಬೈ ಜನರು
ರೈಲಿನಲ್ಲಿ ಬಟ್ಟೆ ಒಣಗಿಸಲು ಹಾಕಿರುವುದು
TV9 Web
| Edited By: Rakesh Nayak Manchi|

Updated on:Jul 17, 2022 | 1:39 PM

Share

ಮುಂಬೈಯಲ್ಲಿ ಆಗುತ್ತಿರುವ ಮಳೆಯಿಂದ ವಾಹನ ಸಂಚಾರಕ್ಕೆ ಅಡಣೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ಥವಾಗುತ್ತಿದೆ. ಅಷ್ಟೇ ಅಲ್ಲದೆ, ಒಗೆದ ಬಟ್ಟೆಗಳನ್ನು ಕೂಡ ಸರಿಯಾಗಿ ಒಣಗಿಸಲಾಗದೆ ಜನರು ಪರದಾಡುತ್ತಿದ್ದಾರೆ. ಅಂತಿಮವಾಗಿ ಮುಂಬೈನ ಜನರು ಬಟ್ಟೆ ಒಣಗಿಸಲು ಪರಿಹಾರವನ್ನು ಕೊಂಡುಕೊಂಡಿರುವ ವಿಡಿಯೋ ವೈರಲ್ ಆಗುತ್ತಿದೆ. ಸ್ಥಳೀಯ ರೈಲಿನಲ್ಲಿ ಜನರು ತಮ್ಮ ಒಗೆದ ಬಟ್ಟೆಗಳನ್ನು ಒಣಹಾಕಿರುವುದನ್ನು ವಿಡಿಯೋ ತೋರಿಸುತ್ತದೆ.

ಮುಂಬೈನಲ್ಲಿ ಭಾರೀ ಮಳೆಯಾಗುತ್ತಿದ್ದು, ಬಟ್ಟೆಗಳು ಸರಿಯಾಗಿ ಒಣಗುತ್ತಿಲ್ಲ. ಈ ಅನಾನುಕೂಲತೆಗಳನ್ನು ಎದುರಿಸುತ್ತಿರುವ ಜನರು ರೈಲಿನಲ್ಲಿ ಓಡಾಡುವಾಗ ರೈಲಿನ ಫ್ಯಾನ್ ಅಡಿ ಒಣಹಾಕುತ್ತಿದ್ದಾರೆ. ದಾದರ್ಮುಂಬೈಕರ್ ಹ್ಯಾಂಡಲ್ ಅವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದು, ‘ಇದು ನಮ್ಮ ಮುಂಬೈನಲ್ಲಿ ಮಾತ್ರ ಸಾಧ್ಯ’ ಎಂಬ ಶೀರ್ಷಿಕೆಯನ್ನು ನೀಡಿದ್ದಾರೆ. ಎರಡು ದಿನಗಳ ಹಿಂದೆ ಹಂಚಿಕೊಂಡಿರುವ ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ವಿಡಿಯೋ ನೋಡಿದ ನೆಟ್ಟಿಗರು ಹಾಸ್ಯವಾಗಿಯೂ ಕಾಂಮೆಂಟ್ ಮಾಡುತ್ತಿದ್ದಾರೆ.

ಮುಂಬೈನಲ್ಲಿ ಭಾರೀ ಮಾನ್ಸೂನ್ ಮಳೆಯಾಗುತ್ತಿರುವ ಪರಿಣಾಮ ಜನರು ಪ್ರತಿ ವರ್ಷ ಇಂತಹ ಸವಾಲುಗಳನ್ನು ಎದುರಿಸುತ್ತಿರುತ್ತಾರೆ. ರೈಲಿನೊಳಗೆ ಬಟ್ಟೆಗಳನ್ನು ಒಣಗಿಸಲು ಹಾಕವುದು ಇದೇನು ಹೊಸತ್ತಲ್ಲ. ಮುಂಬೈನ ಸ್ಥಳೀಯ ರೈಲಿನಲ್ಲಿ ಬಟ್ಟೆಗಳನ್ನು ಒಣಹಾಕಿರುವ ಹಳೇಯ ಟ್ವೀಟ್ ಕೂಡ ಇದೆ.

ಈ ವಾರದ ಆರಂಭದಲ್ಲಿ ಮುಂಬೈನಲ್ಲಿ ನಿರಂತರ ಮಳೆಯಾಗಿ ಅನೇಕ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಮಳೆಯ ಸಮಯದಲ್ಲಿ ಬಂದರು ಮಾರ್ಗಗಳಲ್ಲಿನ ಉಪನಗರ ಸೇವೆಗಳು ನಿಧಾನವಾಗಿದ್ದರೂ ಮಧ್ಯ ರೈಲ್ವೆ ಮತ್ತು ಪಶ್ಚಿಮ ರೈಲ್ವೆಗಳಲ್ಲಿನ ಸ್ಥಳೀಯ ರೈಲು ಸೇವೆಗಳು ಪರಿಣಾಮ ಬೀರಲಿಲ್ಲ.

ಮಹಾರಾಷ್ಟ್ರದಾದ್ಯಂತ ಮಳೆ ಸಂಬಂಧಿತ ಘಟನೆಗಳು ಇಲ್ಲಿಯವರೆಗೆ 102 ಜನರನ್ನು ಬಲಿ ತೆಗೆದುಕೊಂಡಿವೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಶುಕ್ರವಾರ ವರದಿಯಲ್ಲಿ ತಿಳಿಸಿದೆ. ಈ ಅಂಕಿಅಂಶಗಳು ಜೂನ್ 1 ಮತ್ತು ಜುಲೈ 14 ರ ನಡುವೆ ಇವೆ ಎಂದು ಅದು ಹೇಳಿದೆ.

Published On - 1:39 pm, Sun, 17 July 22

Follow Us
Web contact
Web contact

TV9 Kannada

Read More
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?