AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಆನೆ ಮರಿಯ ಬಾಬ್ ಕಟ್ ಕೂದಲನ್ನು ಬಾಚಿದ ಮಾವುತನ ವಿಡಿಯೋ ವೈರಲ್

Elephant Hair Style: ತಮಿಳುನಾಡಿನ ಆನೆಮರಿಯೊಂದು ತನ್ನ ಹೇರ್​ ಸ್ಟೈಲ್​ನಿಂದಲೇ ಗಮನ ಸೆಳೆಯುತ್ತಿದೆ. ಈ ಆನೆಗೆ ಬಾಬ್​ಕಟ್ ಸೆಂಗಮಲಂ ಎಂದು ಪ್ರೀತಿಯಿಂದ ಕರೆಯಲಾಗುತ್ತದೆ. ಬಾಬ್ ಕಟ್ ಕೇಶ ವಿನ್ಯಾಸ ಮಾಡಿಕೊಂಡಿರುವ ಈ ಆನೆಯ ಸ್ಟೈಲ್​ಗೆ ಫಿದಾ ಅಗದವರೇ ಇಲ್ಲ.

Viral Video: ಆನೆ ಮರಿಯ ಬಾಬ್ ಕಟ್ ಕೂದಲನ್ನು ಬಾಚಿದ ಮಾವುತನ ವಿಡಿಯೋ ವೈರಲ್
ಬಾಬ್ ಕಟ್ ಕೇಶ ವಿನ್ಯಾಸ ಮಾಡಿಕೊಂಡಿರುವ ಆನೆ
TV9 Web
| Edited By: |

Updated on: Nov 20, 2021 | 2:56 PM

Share

ಯುವಕರಿರಲಿ, ಯುವತಿಯರೇ ಇರಲಿ ಹೇರ್​ಸ್ಟೈಲ್​ಗೆ ಹೆಚ್ಚಿನ ಪ್ರಾಮುಖ್ಯತೆ ಕೊಡುತ್ತಾರೆ. ಹೊಸ ಹೊಸ ಹೇರ್​ಸ್ಟೈಲ್ ಮಾಡಿಸಿಕೊಳ್ಳಲು ಪ್ರಯೋಗಗಳನ್ನು ಮಾಡುತ್ತಿರುತ್ತಾರೆ. ಆದರೆ, ಆನೆಯೂ ಹೇರ್​ಸ್ಟೈಲ್ ಮಾಡುತ್ತದೆ ಎಂದರೆ ನೀವು ನಂಬುತ್ತೀರಾ? ತಮಿಳುನಾಡಿನ ಆನೆಮರಿಯೊಂದು ತನ್ನ ಹೇರ್​ ಸ್ಟೈಲ್​ನಿಂದಲೇ ಗಮನ ಸೆಳೆಯುತ್ತಿದೆ. ಈ ಆನೆಗೆ ಬಾಬ್​ಕಟ್ ಸೆಂಗಮಲಂ ಎಂದು ಪ್ರೀತಿಯಿಂದ ಕರೆಯಲಾಗುತ್ತದೆ. ಬಾಬ್ ಕಟ್ ಕೇಶ ವಿನ್ಯಾಸ ಮಾಡಿಕೊಂಡಿರುವ ಈ ಆನೆಯ ಸ್ಟೈಲ್​ಗೆ ಫಿದಾ ಅಗದವರೇ ಇಲ್ಲ.

ಭೂಮಿಯ ಮೇಲಿನ ಅತ್ಯಂತ ಮುದ್ದಾದ ಪ್ರಾಣಿಗಳ ಪೈಕಿ ಆನೆಯೂ ಒಂದು. ಸೌಮ್ಯ ಮತ್ತು ಅತ್ಯಂತ ಬುದ್ಧಿವಂತ ಪ್ರಾಣಿಯಾಗಿರುವ ಆನೆಗಳಲ್ಲಿ ಬಾಬ್ ಕಟ್ ಹೇರ್ ಸ್ಟೈಲ್ ಹೊಂದಿರುವ ಆನೆಯ ಫೋಟೋ, ವಿಡಿಯೋಗಳು ಆನ್‌ಲೈನ್‌ನಲ್ಲಿ ವೈರಲ್ ಆಗಿದೆ. ಈ ತಮಿಳುನಾಡಿನ ಆನೆಮರಿ ಮನ್ನಾರ್​ಗುಡಿಯ ರಾಜಗೋಪಾಲಸ್ವಾಮಿ ದೇವಸ್ಥಾನಕ್ಕೆ ಸೇರಿದ್ದಾಗಿದೆ. ಈ ಆನೆಮರಿಗೆ ಬಾಬ್ ಕಟ್ ಮಾಡಿಸಲಾಗಿದ್ದು, ಇದನ್ನು ಬಾಬ್ ಕಟ್ ಸೆಂಗಮಲಂ ಎಂದು ಕರೆಯಲಾಗುತ್ತದೆ.

ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಮಾವುತನು ಆನೆಯ ಬಾಬ್ ಕಟ್ ಕೂದಲು ಬಾಚುತ್ತಿದ್ದಾನೆ. ಈ ಆನೆಯ ಹಣೆಯ ಮೇಲೆ ದೊಡ್ಡ ತಿಲಕ ಕೂಡ ಇದೆ. ಮಾವುತ ಆನೆಯ ಕೂದಲನ್ನು ಬಾಚುವಾಗ ಆತನಿಗೆ ಸುಲಭವಾಗಲೆಂದು ಆನೆ ಕಾಲುಗಳನ್ನು ನೆಲಕ್ಕೆ ಬಗ್ಗಿಸಿ, ಬಾಗುತ್ತದೆ. ಈ ವಿಡಿಯೋ ಕೊಯಮತ್ತೂರಿನ ತೆಕ್ಕಂಪಟ್ಟಿ ಗ್ರಾಮದ್ದಾಗಿದೆ.

ಆನೆಯೊಂದು ತನ್ನ ಬಾಬ್ ಕಟ್ ಕೂದಲನ್ನು ಮಾವುತನ ಕೈಯಲ್ಲಿ ಬಾಚಿಸಿಕೊಳ್ಳುತ್ತಿರುವ ಕ್ಯೂಟ್ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಆನೆ ಮರಿಯನ್ನು ತನ್ನ ಮಗುವಿನಂತೆ ನೋಡಿಕೊಳ್ಳುತ್ತಿರುವ ಮಾವುತನ ವಿಡಿಯೋ ನೋಡಿದ ಅಭಿಮಾನಿಗಳು ಖುಷಿಯಾಗಿದ್ದಾರೆ.

ಇದನ್ನೂ ಓದಿ: Smriti Irani: ತೂಕ ಇಳಿಸಿಕೊಂಡ ಸ್ಮೃತಿ ಇರಾನಿ ಫೋಟೋ ವೈರಲ್; ಬಾಲಿವುಡ್ ನಟಿಯರಿಂದಲೂ ಮೆಚ್ಚುಗೆ

Shocking Video: ದೆಹಲಿ ನಡುರಸ್ತೆಯಲ್ಲೇ ಕ್ಯಾಬ್ ಚಾಲಕನಿಗೆ ಥಳಿಸಿದ ಮಹಿಳೆ; ವಿಡಿಯೋ ವೈರಲ್

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!