AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಆನೆ ಮರಿಯ ಬಾಬ್ ಕಟ್ ಕೂದಲನ್ನು ಬಾಚಿದ ಮಾವುತನ ವಿಡಿಯೋ ವೈರಲ್

Elephant Hair Style: ತಮಿಳುನಾಡಿನ ಆನೆಮರಿಯೊಂದು ತನ್ನ ಹೇರ್​ ಸ್ಟೈಲ್​ನಿಂದಲೇ ಗಮನ ಸೆಳೆಯುತ್ತಿದೆ. ಈ ಆನೆಗೆ ಬಾಬ್​ಕಟ್ ಸೆಂಗಮಲಂ ಎಂದು ಪ್ರೀತಿಯಿಂದ ಕರೆಯಲಾಗುತ್ತದೆ. ಬಾಬ್ ಕಟ್ ಕೇಶ ವಿನ್ಯಾಸ ಮಾಡಿಕೊಂಡಿರುವ ಈ ಆನೆಯ ಸ್ಟೈಲ್​ಗೆ ಫಿದಾ ಅಗದವರೇ ಇಲ್ಲ.

Viral Video: ಆನೆ ಮರಿಯ ಬಾಬ್ ಕಟ್ ಕೂದಲನ್ನು ಬಾಚಿದ ಮಾವುತನ ವಿಡಿಯೋ ವೈರಲ್
ಬಾಬ್ ಕಟ್ ಕೇಶ ವಿನ್ಯಾಸ ಮಾಡಿಕೊಂಡಿರುವ ಆನೆ
TV9 Web
| Edited By: |

Updated on: Nov 20, 2021 | 2:56 PM

Share

ಯುವಕರಿರಲಿ, ಯುವತಿಯರೇ ಇರಲಿ ಹೇರ್​ಸ್ಟೈಲ್​ಗೆ ಹೆಚ್ಚಿನ ಪ್ರಾಮುಖ್ಯತೆ ಕೊಡುತ್ತಾರೆ. ಹೊಸ ಹೊಸ ಹೇರ್​ಸ್ಟೈಲ್ ಮಾಡಿಸಿಕೊಳ್ಳಲು ಪ್ರಯೋಗಗಳನ್ನು ಮಾಡುತ್ತಿರುತ್ತಾರೆ. ಆದರೆ, ಆನೆಯೂ ಹೇರ್​ಸ್ಟೈಲ್ ಮಾಡುತ್ತದೆ ಎಂದರೆ ನೀವು ನಂಬುತ್ತೀರಾ? ತಮಿಳುನಾಡಿನ ಆನೆಮರಿಯೊಂದು ತನ್ನ ಹೇರ್​ ಸ್ಟೈಲ್​ನಿಂದಲೇ ಗಮನ ಸೆಳೆಯುತ್ತಿದೆ. ಈ ಆನೆಗೆ ಬಾಬ್​ಕಟ್ ಸೆಂಗಮಲಂ ಎಂದು ಪ್ರೀತಿಯಿಂದ ಕರೆಯಲಾಗುತ್ತದೆ. ಬಾಬ್ ಕಟ್ ಕೇಶ ವಿನ್ಯಾಸ ಮಾಡಿಕೊಂಡಿರುವ ಈ ಆನೆಯ ಸ್ಟೈಲ್​ಗೆ ಫಿದಾ ಅಗದವರೇ ಇಲ್ಲ.

ಭೂಮಿಯ ಮೇಲಿನ ಅತ್ಯಂತ ಮುದ್ದಾದ ಪ್ರಾಣಿಗಳ ಪೈಕಿ ಆನೆಯೂ ಒಂದು. ಸೌಮ್ಯ ಮತ್ತು ಅತ್ಯಂತ ಬುದ್ಧಿವಂತ ಪ್ರಾಣಿಯಾಗಿರುವ ಆನೆಗಳಲ್ಲಿ ಬಾಬ್ ಕಟ್ ಹೇರ್ ಸ್ಟೈಲ್ ಹೊಂದಿರುವ ಆನೆಯ ಫೋಟೋ, ವಿಡಿಯೋಗಳು ಆನ್‌ಲೈನ್‌ನಲ್ಲಿ ವೈರಲ್ ಆಗಿದೆ. ಈ ತಮಿಳುನಾಡಿನ ಆನೆಮರಿ ಮನ್ನಾರ್​ಗುಡಿಯ ರಾಜಗೋಪಾಲಸ್ವಾಮಿ ದೇವಸ್ಥಾನಕ್ಕೆ ಸೇರಿದ್ದಾಗಿದೆ. ಈ ಆನೆಮರಿಗೆ ಬಾಬ್ ಕಟ್ ಮಾಡಿಸಲಾಗಿದ್ದು, ಇದನ್ನು ಬಾಬ್ ಕಟ್ ಸೆಂಗಮಲಂ ಎಂದು ಕರೆಯಲಾಗುತ್ತದೆ.

ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಮಾವುತನು ಆನೆಯ ಬಾಬ್ ಕಟ್ ಕೂದಲು ಬಾಚುತ್ತಿದ್ದಾನೆ. ಈ ಆನೆಯ ಹಣೆಯ ಮೇಲೆ ದೊಡ್ಡ ತಿಲಕ ಕೂಡ ಇದೆ. ಮಾವುತ ಆನೆಯ ಕೂದಲನ್ನು ಬಾಚುವಾಗ ಆತನಿಗೆ ಸುಲಭವಾಗಲೆಂದು ಆನೆ ಕಾಲುಗಳನ್ನು ನೆಲಕ್ಕೆ ಬಗ್ಗಿಸಿ, ಬಾಗುತ್ತದೆ. ಈ ವಿಡಿಯೋ ಕೊಯಮತ್ತೂರಿನ ತೆಕ್ಕಂಪಟ್ಟಿ ಗ್ರಾಮದ್ದಾಗಿದೆ.

ಆನೆಯೊಂದು ತನ್ನ ಬಾಬ್ ಕಟ್ ಕೂದಲನ್ನು ಮಾವುತನ ಕೈಯಲ್ಲಿ ಬಾಚಿಸಿಕೊಳ್ಳುತ್ತಿರುವ ಕ್ಯೂಟ್ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಆನೆ ಮರಿಯನ್ನು ತನ್ನ ಮಗುವಿನಂತೆ ನೋಡಿಕೊಳ್ಳುತ್ತಿರುವ ಮಾವುತನ ವಿಡಿಯೋ ನೋಡಿದ ಅಭಿಮಾನಿಗಳು ಖುಷಿಯಾಗಿದ್ದಾರೆ.

ಇದನ್ನೂ ಓದಿ: Smriti Irani: ತೂಕ ಇಳಿಸಿಕೊಂಡ ಸ್ಮೃತಿ ಇರಾನಿ ಫೋಟೋ ವೈರಲ್; ಬಾಲಿವುಡ್ ನಟಿಯರಿಂದಲೂ ಮೆಚ್ಚುಗೆ

Shocking Video: ದೆಹಲಿ ನಡುರಸ್ತೆಯಲ್ಲೇ ಕ್ಯಾಬ್ ಚಾಲಕನಿಗೆ ಥಳಿಸಿದ ಮಹಿಳೆ; ವಿಡಿಯೋ ವೈರಲ್

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ