AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬಿಯರ್ ದುಬಾರಿ ಆಯ್ತು,ಮನೆ ಬಾಡಿಗೆ ಕಟ್ಟೋಕೆ ಆಗ್ತಿಲ್ಲ, ಸತ್ತೋಗ್ತೀನಿ ಅಂತ ಮರವೇರಿ ಕೂತ ಭೂಪ

ವೀಡಿಯೊದಲ್ಲಿ,ಬ್ರಿಜ್‌ಮೋಹನ್ "ನನಗೆ ಕೆಲಸವಿಲ್ಲ ಮತ್ತು ಬಾಡಿಗೆ ಪಾವತಿಸಲು ಹಣದ ಕೊರತೆಯಿದೆ ಎಂದು ಹೇಳಿದ್ದಾರೆ. ಆದರೂ ಮದ್ಯಕ್ಕೆ ಹೆಚ್ಚುವರಿ ಶುಲ್ಕ ವಿಧಿಸಲಾಗಿದೆ. ಪೊಲೀಸರಿಗೆ ದೂರು ನೀಡಿದರೂ ಏನು ಪ್ರಯೋಜನವಾಗಿಲ್ಲ. ಅದರಿಂದಲೇ ಆತ್ಮಹತ್ಯೆಗೆ ನಿರ್ಧರಿಸಿದೆ ಎಂದು ಹೇಳಿಕೊಂಡಿದ್ದಾರೆ.

Viral Video: ಬಿಯರ್ ದುಬಾರಿ ಆಯ್ತು,ಮನೆ ಬಾಡಿಗೆ ಕಟ್ಟೋಕೆ ಆಗ್ತಿಲ್ಲ, ಸತ್ತೋಗ್ತೀನಿ ಅಂತ ಮರವೇರಿ ಕೂತ ಭೂಪ
ಆತ್ಮಹತ್ಯೆಗೆ ಯತ್ನಿಸಿದ ಬ್ರಿಜ್‌ಮೋಹನ್ ಶಿವಹರೆ
ಅಕ್ಷತಾ ವರ್ಕಾಡಿ
|

Updated on: Mar 20, 2024 | 11:05 AM

Share

ಮಧ್ಯಪ್ರದೇಶ :  ರಾಜ್‌ಗಢ್ ಜಿಲ್ಲೆಯ ಸಿಎಂ ಸಹಾಯವಾಣಿ ಮತ್ತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ “ಪ್ರತೀ ಬಿಯರ್​​ ಬಾಟಲಿಗೆ ಹೆಚ್ಚುವರಿ 50 ರೂ. ಶುಲ್ಕ ವಿಧಿಸಲಾಗಿದೆ” ಎಂದು ದೂರು ನೀಡಿದರೂ ಗಮನ ಹರಿಸಿಲ್ಲ ಎಂದು ಆರೋಪಿಸಿ ವ್ಯಕ್ತಿಯೊಬ್ಬ ಮರಕ್ಕೆ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ವಿಲಕ್ಷಣ ಘಟನೆ ನಡೆದಿದೆ.

ಮದ್ಯದ ಬಾಟಲಿಗಳಿಗೆ 50 ರೂಪಾಯಿ ಹೆಚ್ಚುವರಿ ನೀಡಬೇಕಾಗಿದ್ದು,ಇದರಿಂದ ಮನನೊಂದ ರಾಜ್‌ಗಢ್ ಜಿಲ್ಲೆಯ ನಿವಾಸಿ ಬ್ರಿಜ್‌ಮೋಹನ್ ಶಿವಹರೆ ಮಂಗಳವಾರ ಆತ್ಮಹತ್ಯೆಗೆ ಮುಂದಾಗಿದ್ದಾರೆ. ಘಟನೆಯ ದೃಶ್ಯಗಳು ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದ್ದು, ವಿಡಿಯೋದಲ್ಲಿ ಬ್ರಿಜ್‌ಮೋಹನ್ ಮರಕ್ಕೆ ಹತ್ತಿ ಆತ್ಮಹತ್ಯೆಗೆ ಯತ್ನಿಸಿರುವುದನ್ನು ಕಾಣಬಹುದು. ಬಳಿಕ ಆದರೆ, ಸ್ಥಳೀಯ ಪೊಲೀಸರು ಮಧ್ಯಪ್ರವೇಶಿಸಿ ಅವರನ್ನು ಸುರಕ್ಷಿತವಾಗಿ ಮರದಿಂದ ಕೆಳಗಿಳಿಸಿದ್ದಾರೆ.

ಮತ್ತೊಂದು ವೀಡಿಯೊದಲ್ಲಿ,ಬ್ರಿಜ್‌ಮೋಹನ್ “ನನಗೆ ಕೆಲಸವಿಲ್ಲ ಮತ್ತು ಬಾಡಿಗೆ ಪಾವತಿಸಲು ಹಣದ ಕೊರತೆಯಿದೆ ಎಂದು ಹೇಳಿದ್ದಾರೆ. ಆದರೂ ಮದ್ಯಕ್ಕೆ ಹೆಚ್ಚುವರಿ ಶುಲ್ಕ ವಿಧಿಸಲಾಗಿದೆ. ಪೊಲೀಸರಿಗೆ ದೂರು ನೀಡಿದರೂ ಏನು ಪ್ರಯೋಜನವಾಗಿಲ್ಲ. ಅದರಿಂದಲೇ ಆತ್ಮಹತ್ಯೆಗೆ ನಿರ್ಧರಿಸಿದೆ ಎಂದು ಸ್ಥಳೀಯ ಮಾಧ್ಯಮಗಳ ಮುಂದೆ ನೋವನ್ನು ಹಂಚಿಕೊಂಡಿದ್ದಾನೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಸಣ್ಣ ಜಗಳಕ್ಕೆ ವಿಚ್ಛೇದನ ಪಡೆದು, 3ವರ್ಷಗಳ ಬಳಿಕ ಮಾಜಿ ಪತಿಯೊಂದಿಗೆ ಮರು ಮದುವೆ

ವಿಶೇಷವೆಂದರೆ, ಫೆಬ್ರವರಿಯಲ್ಲಿ,ಬ್ರಿಜ್‌ಮೋಹನ್ ಮುಖ್ಯಮಂತ್ರಿಗಳ ಸಹಾಯವಾಣಿ, ಸ್ಥಳೀಯ ಪೊಲೀಸ್ ಠಾಣೆ, ಉಪವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ), ಮತ್ತು ಜಿಲ್ಲಾ ಮ್ಯಾಜಿಸ್ಟ್ರೇಟ್ (ಡಿಎಂ) ಅವರಿಗೆ ಬಿಯರ್​​ ಬಾಟಲಿಯ ದರ ಹೆಚ್ಚಳದ ಕುರಿತು ಹಲವು ಅಧಿಕಾರಿಗಳಿಗೆ ದೂರು ನೀಡಿದರೂ ಮದ್ಯದಂಗಡಿ ನಡೆಸುವವರ ಅವ್ಯವಹಾರದ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಹೇಳಿಕೊಂಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
NEET-PG Exam: ನೀಟ್-ಪಿಜಿ 2026 ಪರೀಕ್ಷೆಗೆ ಸಂಪೂರ್ಣ ಸಿದ್ಧತೆ
NEET-PG Exam: ನೀಟ್-ಪಿಜಿ 2026 ಪರೀಕ್ಷೆಗೆ ಸಂಪೂರ್ಣ ಸಿದ್ಧತೆ
ಇಂದು ಅರಮನೆ ಪ್ರವೇಶಿಸಲಿರುವ ಗಜಪಡೆ, ಅರಣ್ಯ ಭವನದಲ್ಲಿ ವಿಶೇಷ ಪೂಜೆ
ಇಂದು ಅರಮನೆ ಪ್ರವೇಶಿಸಲಿರುವ ಗಜಪಡೆ, ಅರಣ್ಯ ಭವನದಲ್ಲಿ ವಿಶೇಷ ಪೂಜೆ
ಜಾತ್ರೆ ಸಮಯದಲ್ಲಿ ಮನೆಯಲ್ಲಿ ಒಲೆ ಹಚ್ಚುವಂತಿಲ್ಲ!
ಜಾತ್ರೆ ಸಮಯದಲ್ಲಿ ಮನೆಯಲ್ಲಿ ಒಲೆ ಹಚ್ಚುವಂತಿಲ್ಲ!
ಬೆಂಗಳೂರಿನಲ್ಲಿ ದಕ್ಷಿಣ ಕೊರಿಯಾ ಕಂಪನಿ ಕಾರ್ಯಾರಂಭ: 350 ಜನರಿಗೆ ಉದ್ಯೋಗ
ಬೆಂಗಳೂರಿನಲ್ಲಿ ದಕ್ಷಿಣ ಕೊರಿಯಾ ಕಂಪನಿ ಕಾರ್ಯಾರಂಭ: 350 ಜನರಿಗೆ ಉದ್ಯೋಗ
ಇಂದು ಯಜುರುಪಾಕರ್ಮ, ರಕ್ಷಾ ಬಂಧನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯಜುರುಪಾಕರ್ಮ, ರಕ್ಷಾ ಬಂಧನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ನೀರಿನಲ್ಲಿ ಕೊಚ್ಚಿಬಂದ ಸಿಲಿಂಡರ್​​ಗಾಗಿ ಪ್ರವಾಹದ ನೀರಿಗೆ ಹಾರಿದ ನೇಪಾಳದ ಜನ
ನೀರಿನಲ್ಲಿ ಕೊಚ್ಚಿಬಂದ ಸಿಲಿಂಡರ್​​ಗಾಗಿ ಪ್ರವಾಹದ ನೀರಿಗೆ ಹಾರಿದ ನೇಪಾಳದ ಜನ
ಚಿಕ್ಕಣ್ಣ ಮದುವೆ ಸಂಭ್ರಮ ಶುರು; ಅರಿಶಿಣ ಶಾಸ್ತ್ರದ ಖುಷಿಯಲ್ಲಿ ಪಾವನಾ
ಚಿಕ್ಕಣ್ಣ ಮದುವೆ ಸಂಭ್ರಮ ಶುರು; ಅರಿಶಿಣ ಶಾಸ್ತ್ರದ ಖುಷಿಯಲ್ಲಿ ಪಾವನಾ
ಕರ್ನಾಟಕದಲ್ಲಿ ಲೂಸ್ ಅಡುಗೆ ಎಣ್ಣೆ ಮಾರಾಟ ನಿಷೇಧಕ್ಕೆ ಚಿಂತನೆ
ಕರ್ನಾಟಕದಲ್ಲಿ ಲೂಸ್ ಅಡುಗೆ ಎಣ್ಣೆ ಮಾರಾಟ ನಿಷೇಧಕ್ಕೆ ಚಿಂತನೆ
ನೇಪಾಳದ ಪ್ರವಾಹಕ್ಕೆ 332 ಜನ ಸಾವು; ಡ್ರೋನ್ ವಿಡಿಯೋದಲ್ಲಿ ದುರಂತ ಸೆರೆ
ನೇಪಾಳದ ಪ್ರವಾಹಕ್ಕೆ 332 ಜನ ಸಾವು; ಡ್ರೋನ್ ವಿಡಿಯೋದಲ್ಲಿ ದುರಂತ ಸೆರೆ
ಮೊದಲ ವಿಕೆಟ್ ಪತನ ಫಿಕ್ಸ್? ರಾಹುಲ್ ಭೇಟಿ ಬಳಿಕ ಡಿಕೆಶಿ ಸ್ಫೋಟಕ ಹೇಳಿಕೆ
ಮೊದಲ ವಿಕೆಟ್ ಪತನ ಫಿಕ್ಸ್? ರಾಹುಲ್ ಭೇಟಿ ಬಳಿಕ ಡಿಕೆಶಿ ಸ್ಫೋಟಕ ಹೇಳಿಕೆ