AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬಿಯರ್ ದುಬಾರಿ ಆಯ್ತು,ಮನೆ ಬಾಡಿಗೆ ಕಟ್ಟೋಕೆ ಆಗ್ತಿಲ್ಲ, ಸತ್ತೋಗ್ತೀನಿ ಅಂತ ಮರವೇರಿ ಕೂತ ಭೂಪ

ವೀಡಿಯೊದಲ್ಲಿ,ಬ್ರಿಜ್‌ಮೋಹನ್ "ನನಗೆ ಕೆಲಸವಿಲ್ಲ ಮತ್ತು ಬಾಡಿಗೆ ಪಾವತಿಸಲು ಹಣದ ಕೊರತೆಯಿದೆ ಎಂದು ಹೇಳಿದ್ದಾರೆ. ಆದರೂ ಮದ್ಯಕ್ಕೆ ಹೆಚ್ಚುವರಿ ಶುಲ್ಕ ವಿಧಿಸಲಾಗಿದೆ. ಪೊಲೀಸರಿಗೆ ದೂರು ನೀಡಿದರೂ ಏನು ಪ್ರಯೋಜನವಾಗಿಲ್ಲ. ಅದರಿಂದಲೇ ಆತ್ಮಹತ್ಯೆಗೆ ನಿರ್ಧರಿಸಿದೆ ಎಂದು ಹೇಳಿಕೊಂಡಿದ್ದಾರೆ.

Viral Video: ಬಿಯರ್ ದುಬಾರಿ ಆಯ್ತು,ಮನೆ ಬಾಡಿಗೆ ಕಟ್ಟೋಕೆ ಆಗ್ತಿಲ್ಲ, ಸತ್ತೋಗ್ತೀನಿ ಅಂತ ಮರವೇರಿ ಕೂತ ಭೂಪ
ಆತ್ಮಹತ್ಯೆಗೆ ಯತ್ನಿಸಿದ ಬ್ರಿಜ್‌ಮೋಹನ್ ಶಿವಹರೆ
ಅಕ್ಷತಾ ವರ್ಕಾಡಿ
|

Updated on: Mar 20, 2024 | 11:05 AM

Share

ಮಧ್ಯಪ್ರದೇಶ :  ರಾಜ್‌ಗಢ್ ಜಿಲ್ಲೆಯ ಸಿಎಂ ಸಹಾಯವಾಣಿ ಮತ್ತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ “ಪ್ರತೀ ಬಿಯರ್​​ ಬಾಟಲಿಗೆ ಹೆಚ್ಚುವರಿ 50 ರೂ. ಶುಲ್ಕ ವಿಧಿಸಲಾಗಿದೆ” ಎಂದು ದೂರು ನೀಡಿದರೂ ಗಮನ ಹರಿಸಿಲ್ಲ ಎಂದು ಆರೋಪಿಸಿ ವ್ಯಕ್ತಿಯೊಬ್ಬ ಮರಕ್ಕೆ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ವಿಲಕ್ಷಣ ಘಟನೆ ನಡೆದಿದೆ.

ಮದ್ಯದ ಬಾಟಲಿಗಳಿಗೆ 50 ರೂಪಾಯಿ ಹೆಚ್ಚುವರಿ ನೀಡಬೇಕಾಗಿದ್ದು,ಇದರಿಂದ ಮನನೊಂದ ರಾಜ್‌ಗಢ್ ಜಿಲ್ಲೆಯ ನಿವಾಸಿ ಬ್ರಿಜ್‌ಮೋಹನ್ ಶಿವಹರೆ ಮಂಗಳವಾರ ಆತ್ಮಹತ್ಯೆಗೆ ಮುಂದಾಗಿದ್ದಾರೆ. ಘಟನೆಯ ದೃಶ್ಯಗಳು ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದ್ದು, ವಿಡಿಯೋದಲ್ಲಿ ಬ್ರಿಜ್‌ಮೋಹನ್ ಮರಕ್ಕೆ ಹತ್ತಿ ಆತ್ಮಹತ್ಯೆಗೆ ಯತ್ನಿಸಿರುವುದನ್ನು ಕಾಣಬಹುದು. ಬಳಿಕ ಆದರೆ, ಸ್ಥಳೀಯ ಪೊಲೀಸರು ಮಧ್ಯಪ್ರವೇಶಿಸಿ ಅವರನ್ನು ಸುರಕ್ಷಿತವಾಗಿ ಮರದಿಂದ ಕೆಳಗಿಳಿಸಿದ್ದಾರೆ.

ಮತ್ತೊಂದು ವೀಡಿಯೊದಲ್ಲಿ,ಬ್ರಿಜ್‌ಮೋಹನ್ “ನನಗೆ ಕೆಲಸವಿಲ್ಲ ಮತ್ತು ಬಾಡಿಗೆ ಪಾವತಿಸಲು ಹಣದ ಕೊರತೆಯಿದೆ ಎಂದು ಹೇಳಿದ್ದಾರೆ. ಆದರೂ ಮದ್ಯಕ್ಕೆ ಹೆಚ್ಚುವರಿ ಶುಲ್ಕ ವಿಧಿಸಲಾಗಿದೆ. ಪೊಲೀಸರಿಗೆ ದೂರು ನೀಡಿದರೂ ಏನು ಪ್ರಯೋಜನವಾಗಿಲ್ಲ. ಅದರಿಂದಲೇ ಆತ್ಮಹತ್ಯೆಗೆ ನಿರ್ಧರಿಸಿದೆ ಎಂದು ಸ್ಥಳೀಯ ಮಾಧ್ಯಮಗಳ ಮುಂದೆ ನೋವನ್ನು ಹಂಚಿಕೊಂಡಿದ್ದಾನೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಸಣ್ಣ ಜಗಳಕ್ಕೆ ವಿಚ್ಛೇದನ ಪಡೆದು, 3ವರ್ಷಗಳ ಬಳಿಕ ಮಾಜಿ ಪತಿಯೊಂದಿಗೆ ಮರು ಮದುವೆ

ವಿಶೇಷವೆಂದರೆ, ಫೆಬ್ರವರಿಯಲ್ಲಿ,ಬ್ರಿಜ್‌ಮೋಹನ್ ಮುಖ್ಯಮಂತ್ರಿಗಳ ಸಹಾಯವಾಣಿ, ಸ್ಥಳೀಯ ಪೊಲೀಸ್ ಠಾಣೆ, ಉಪವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ), ಮತ್ತು ಜಿಲ್ಲಾ ಮ್ಯಾಜಿಸ್ಟ್ರೇಟ್ (ಡಿಎಂ) ಅವರಿಗೆ ಬಿಯರ್​​ ಬಾಟಲಿಯ ದರ ಹೆಚ್ಚಳದ ಕುರಿತು ಹಲವು ಅಧಿಕಾರಿಗಳಿಗೆ ದೂರು ನೀಡಿದರೂ ಮದ್ಯದಂಗಡಿ ನಡೆಸುವವರ ಅವ್ಯವಹಾರದ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಹೇಳಿಕೊಂಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!