AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬಿಯರ್ ದುಬಾರಿ ಆಯ್ತು,ಮನೆ ಬಾಡಿಗೆ ಕಟ್ಟೋಕೆ ಆಗ್ತಿಲ್ಲ, ಸತ್ತೋಗ್ತೀನಿ ಅಂತ ಮರವೇರಿ ಕೂತ ಭೂಪ

ವೀಡಿಯೊದಲ್ಲಿ,ಬ್ರಿಜ್‌ಮೋಹನ್ "ನನಗೆ ಕೆಲಸವಿಲ್ಲ ಮತ್ತು ಬಾಡಿಗೆ ಪಾವತಿಸಲು ಹಣದ ಕೊರತೆಯಿದೆ ಎಂದು ಹೇಳಿದ್ದಾರೆ. ಆದರೂ ಮದ್ಯಕ್ಕೆ ಹೆಚ್ಚುವರಿ ಶುಲ್ಕ ವಿಧಿಸಲಾಗಿದೆ. ಪೊಲೀಸರಿಗೆ ದೂರು ನೀಡಿದರೂ ಏನು ಪ್ರಯೋಜನವಾಗಿಲ್ಲ. ಅದರಿಂದಲೇ ಆತ್ಮಹತ್ಯೆಗೆ ನಿರ್ಧರಿಸಿದೆ ಎಂದು ಹೇಳಿಕೊಂಡಿದ್ದಾರೆ.

Viral Video: ಬಿಯರ್ ದುಬಾರಿ ಆಯ್ತು,ಮನೆ ಬಾಡಿಗೆ ಕಟ್ಟೋಕೆ ಆಗ್ತಿಲ್ಲ, ಸತ್ತೋಗ್ತೀನಿ ಅಂತ ಮರವೇರಿ ಕೂತ ಭೂಪ
ಆತ್ಮಹತ್ಯೆಗೆ ಯತ್ನಿಸಿದ ಬ್ರಿಜ್‌ಮೋಹನ್ ಶಿವಹರೆ
ಅಕ್ಷತಾ ವರ್ಕಾಡಿ
|

Updated on: Mar 20, 2024 | 11:05 AM

Share

ಮಧ್ಯಪ್ರದೇಶ :  ರಾಜ್‌ಗಢ್ ಜಿಲ್ಲೆಯ ಸಿಎಂ ಸಹಾಯವಾಣಿ ಮತ್ತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ “ಪ್ರತೀ ಬಿಯರ್​​ ಬಾಟಲಿಗೆ ಹೆಚ್ಚುವರಿ 50 ರೂ. ಶುಲ್ಕ ವಿಧಿಸಲಾಗಿದೆ” ಎಂದು ದೂರು ನೀಡಿದರೂ ಗಮನ ಹರಿಸಿಲ್ಲ ಎಂದು ಆರೋಪಿಸಿ ವ್ಯಕ್ತಿಯೊಬ್ಬ ಮರಕ್ಕೆ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ವಿಲಕ್ಷಣ ಘಟನೆ ನಡೆದಿದೆ.

ಮದ್ಯದ ಬಾಟಲಿಗಳಿಗೆ 50 ರೂಪಾಯಿ ಹೆಚ್ಚುವರಿ ನೀಡಬೇಕಾಗಿದ್ದು,ಇದರಿಂದ ಮನನೊಂದ ರಾಜ್‌ಗಢ್ ಜಿಲ್ಲೆಯ ನಿವಾಸಿ ಬ್ರಿಜ್‌ಮೋಹನ್ ಶಿವಹರೆ ಮಂಗಳವಾರ ಆತ್ಮಹತ್ಯೆಗೆ ಮುಂದಾಗಿದ್ದಾರೆ. ಘಟನೆಯ ದೃಶ್ಯಗಳು ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದ್ದು, ವಿಡಿಯೋದಲ್ಲಿ ಬ್ರಿಜ್‌ಮೋಹನ್ ಮರಕ್ಕೆ ಹತ್ತಿ ಆತ್ಮಹತ್ಯೆಗೆ ಯತ್ನಿಸಿರುವುದನ್ನು ಕಾಣಬಹುದು. ಬಳಿಕ ಆದರೆ, ಸ್ಥಳೀಯ ಪೊಲೀಸರು ಮಧ್ಯಪ್ರವೇಶಿಸಿ ಅವರನ್ನು ಸುರಕ್ಷಿತವಾಗಿ ಮರದಿಂದ ಕೆಳಗಿಳಿಸಿದ್ದಾರೆ.

ಮತ್ತೊಂದು ವೀಡಿಯೊದಲ್ಲಿ,ಬ್ರಿಜ್‌ಮೋಹನ್ “ನನಗೆ ಕೆಲಸವಿಲ್ಲ ಮತ್ತು ಬಾಡಿಗೆ ಪಾವತಿಸಲು ಹಣದ ಕೊರತೆಯಿದೆ ಎಂದು ಹೇಳಿದ್ದಾರೆ. ಆದರೂ ಮದ್ಯಕ್ಕೆ ಹೆಚ್ಚುವರಿ ಶುಲ್ಕ ವಿಧಿಸಲಾಗಿದೆ. ಪೊಲೀಸರಿಗೆ ದೂರು ನೀಡಿದರೂ ಏನು ಪ್ರಯೋಜನವಾಗಿಲ್ಲ. ಅದರಿಂದಲೇ ಆತ್ಮಹತ್ಯೆಗೆ ನಿರ್ಧರಿಸಿದೆ ಎಂದು ಸ್ಥಳೀಯ ಮಾಧ್ಯಮಗಳ ಮುಂದೆ ನೋವನ್ನು ಹಂಚಿಕೊಂಡಿದ್ದಾನೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಸಣ್ಣ ಜಗಳಕ್ಕೆ ವಿಚ್ಛೇದನ ಪಡೆದು, 3ವರ್ಷಗಳ ಬಳಿಕ ಮಾಜಿ ಪತಿಯೊಂದಿಗೆ ಮರು ಮದುವೆ

ವಿಶೇಷವೆಂದರೆ, ಫೆಬ್ರವರಿಯಲ್ಲಿ,ಬ್ರಿಜ್‌ಮೋಹನ್ ಮುಖ್ಯಮಂತ್ರಿಗಳ ಸಹಾಯವಾಣಿ, ಸ್ಥಳೀಯ ಪೊಲೀಸ್ ಠಾಣೆ, ಉಪವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ), ಮತ್ತು ಜಿಲ್ಲಾ ಮ್ಯಾಜಿಸ್ಟ್ರೇಟ್ (ಡಿಎಂ) ಅವರಿಗೆ ಬಿಯರ್​​ ಬಾಟಲಿಯ ದರ ಹೆಚ್ಚಳದ ಕುರಿತು ಹಲವು ಅಧಿಕಾರಿಗಳಿಗೆ ದೂರು ನೀಡಿದರೂ ಮದ್ಯದಂಗಡಿ ನಡೆಸುವವರ ಅವ್ಯವಹಾರದ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಹೇಳಿಕೊಂಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ