Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ರಸ್ತೆ ಬದಿ ನಿಂತಿದ್ದ ಬೀದಿ ನಾಯಿಗೆ ಒದೆಯಲು ಹೋದವನಿಗೆ ಏನಾಯ್ತು ಗೊತ್ತಾ?; ವಿಡಿಯೋ ವೈರಲ್

Shocking Video: ತನ್ನಷ್ಟಕ್ಕೆ ತಾನು ರಸ್ತೆಯಲ್ಲಿ ಹೋಗುತ್ತಿದ್ದ ನಾಯಿಗೆ ತನ್ನ ಎಡ ಕಾಲಿನಿಂದ ಜಾಡಿಸಿ ಒದೆಯಲು ಹೋದ ಆ ವ್ಯಕ್ತಿ ಇದ್ದಕ್ಕಿದ್ದಂತೆ ಆಯತಪ್ಪಿ ಕೆಳಗೆ ಬೀಳುತ್ತಾನೆ. ಈ ವಿಡಿಯೋ ವೈರಲ್ ಆಗಿದೆ.

Viral Video: ರಸ್ತೆ ಬದಿ ನಿಂತಿದ್ದ ಬೀದಿ ನಾಯಿಗೆ ಒದೆಯಲು ಹೋದವನಿಗೆ ಏನಾಯ್ತು ಗೊತ್ತಾ?; ವಿಡಿಯೋ ವೈರಲ್
ನಾಯಿಯ ವಿಡಿಯೋ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Feb 22, 2022 | 8:31 PM

ಕರ್ಮ ಎನ್ನುವುದು ಯಾರನ್ನೂ ಬಿಡುವುದಿಲ್ಲ. ಕೆಲವರಿಗೆ ಆ ಕರ್ಮದ (Karma) ಫಲ ತಕ್ಷಣ ಸಿಕ್ಕಿದರೆ ಇನ್ನು ಕೆಲವರಿಗೆ ನಿಧಾನವಾಗಿ ಅದರ ಫಲ ಸಿಗುತ್ತದೆ. ಆದರೆ, ಇಲ್ಲೊಬ್ಬ ವ್ಯಕ್ತಿಗೆ ಅಲ್ಲೇ ಡ್ರಾ ಅಲ್ಲೇ ಬಹುಮಾನ ಎಂಬಂತೆ ವ್ಯಕ್ತಿಯೊಬ್ಬನಿಗೆ ಕರ್ಮದ ಫಲ ಸಿಕ್ಕ ವಿಡಿಯೋ ಭಾರೀ ವೈರಲ್ (Video Viral) ಆಗಿದೆ. ರಸ್ತೆ ಬದಿಯಲ್ಲಿದ್ದ ಅಮಾಯಕ ನಾಯಿಗೆ ತೊಂದರೆ ಕೊಡುವ ಉದ್ದೇಶದಿಂದ ಅದಕ್ಕೆ ಒದೆಯಲು ಹೋದ ವ್ಯಕ್ತಿಗೆ ಏನಾಯಿತು? ಎಂಬುದನ್ನು ನೀವೇ ನೋಡಿ.

ನೇಚರ್‌ಹೋಲಿಕ್ ಎಂಬ ಟ್ವಿಟ್ಟರ್ ಖಾತೆಯು ಈ ಘಟನೆಯ ಸಿಸಿಟಿವಿ ದೃಶ್ಯವನ್ನು ಪೋಸ್ಟ್ ಮಾಡಿದೆ. ವ್ಯಕ್ತಿಯೊಬ್ಬ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ. ಆಗ ಅಲ್ಲಿದ್ದ ಬೀದಿ ನಾಯಿಯ ಬಳಿ ಹೋಗಿ ಅದಕ್ಕೆ ಒದೆಯುವ ಪ್ರಯತ್ನ ಮಾಡುತ್ತಾನೆ. ತನ್ನಷ್ಟಕ್ಕೆ ತಾನು ರಸ್ತೆಯಲ್ಲಿ ಹೋಗುತ್ತಿದ್ದ ನಾಯಿಗೆ ತನ್ನ ಎಡ ಕಾಲಿನಿಂದ ಜಾಡಿಸಿ ಒದೆಯಲು ಹೋದ ಆ ವ್ಯಕ್ತಿ ಇದ್ದಕ್ಕಿದ್ದಂತೆ ಆಯತಪ್ಪಿ ಕೆಳಗೆ ಬೀಳುತ್ತಾನೆ. ಹಿಮ್ಮುಖವಾಗಿ ಬಿದ್ದ ಆ ವ್ಯಕ್ತಿ ಸಾವರಿಸಿಕೊಂಡು ಮೇಲಕ್ಕೇಳುವಷ್ಟರಲ್ಲಿ ಆ ಬೀದಿ ನಾಯಿ ಓಡಿ ಹೋಗಿರುತ್ತದೆ. ಆದರೂ ಸುಮ್ಮನಾಗದ ಆತ ಆ ನಾಯಿಯ ಹಿಂದೆ ಓಡಲು ಯತ್ನಿಸುತ್ತಾನೆ. ಅಷ್ಟರಲ್ಲಿ ಆ ನಾಯಿ ದೂರ ಓಡಿ ಹೋಗಿರುತ್ತದೆ.

ಈ ವಿಡಿಯೋ ನೋಡಿದರೆ ಇನ್​ಸ್ಟಂಟ್ ಕರ್ಮ ಎಂದು ಲೇವಡಿ ಮಾಡಿದ್ದಾರೆ.

ಫೆಬ್ರವರಿ 19ರಂದು ಹಂಚಿಕೊಳ್ಳಲಾದ ಈ ವೀಡಿಯೊ 3.70 ಲಕ್ಷ ಜನರಿಂದ ವೀಕ್ಷಿಸಲ್ಪಟ್ಟಿದೆ. ಅಮಾಯಕ ಪ್ರಾಣಿಗೆ ತೊಂದರೆ ಕೊಡಲು ಹೋದವನು ತತ್‌ಕ್ಷಣದ ಕರ್ಮವನ್ನು ಪಡೆದಿದ್ದಾನೆ, ಅವನಿಗೆ ತಕ್ಕ ಶಿಕ್ಷೆಯಾಗಿದೆ ಎಂದು ನೆಟ್ಟಿಗರು ಟೀಕಿಸಿದ್ದಾರೆ.

ಇದನ್ನೂ ಓದಿ: Viral Video: ಪಾದ ಮುಟ್ಟಿ ನಮಸ್ಕರಿಸಿದ ಬಿಜೆಪಿ ನಾಯಕನಿಗೆ ಸನ್ನೆಯಲ್ಲೇ ಪಾಠ ಮಾಡಿದ ಪ್ರಧಾನಿ ನರೇಂದ್ರ ಮೋದಿ

Shocking Video: ಕೆಳಗೆ ಬಿದ್ದ ಬಟ್ಟೆ ತರಲು ಮಗನನ್ನು ಸೀರೆಗೆ ಕಟ್ಟಿ 10ನೇ ಮಹಡಿಯಿಂದ ನೇತಾಡಿಸಿದ ತಾಯಿ!

ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ
ಲಲಿತ್ ಮಹಲ್​ನಲ್ಲಿ ‘ಡೆವಿಲ್’ ಶೂಟಿಂಗ್, ದರ್ಶನ್ ಭಾಗಿ: ವಿಡಿಯೋ
ಲಲಿತ್ ಮಹಲ್​ನಲ್ಲಿ ‘ಡೆವಿಲ್’ ಶೂಟಿಂಗ್, ದರ್ಶನ್ ಭಾಗಿ: ವಿಡಿಯೋ
ಸಮರಾಭ್ಯಾಸ ಶುರು ಮಾಡಿದ ಆರ್​ಸಿಬಿ; ವಿಡಿಯೋ ನೋಡಿ
ಸಮರಾಭ್ಯಾಸ ಶುರು ಮಾಡಿದ ಆರ್​ಸಿಬಿ; ವಿಡಿಯೋ ನೋಡಿ
ಮಂತ್ರಿಗಳಿದ್ದಾರೆ, ಅವರಿಗೆ ಪ್ರಶ್ನೆ ಕೇಳಿ ಎಂದ ಡೆಪ್ಯುಟಿ ಸ್ಪೀಕರ್ ಲಮಾಣಿ
ಮಂತ್ರಿಗಳಿದ್ದಾರೆ, ಅವರಿಗೆ ಪ್ರಶ್ನೆ ಕೇಳಿ ಎಂದ ಡೆಪ್ಯುಟಿ ಸ್ಪೀಕರ್ ಲಮಾಣಿ
ಶಾಸಕ ಈಗ ಬಂದು ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆಂದ ಸ್ಪೀಕರ್
ಶಾಸಕ ಈಗ ಬಂದು ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆಂದ ಸ್ಪೀಕರ್
ಭಾಷಾಂತರಕ್ಕೆ ಭಾಷಾ ಮತ್ತು ವಿಷಯ ತಜ್ಞ ಜೊತೆಯಲ್ಲಿ ಕೂರಬೇಕು: ಈಶ್ವರ್
ಭಾಷಾಂತರಕ್ಕೆ ಭಾಷಾ ಮತ್ತು ವಿಷಯ ತಜ್ಞ ಜೊತೆಯಲ್ಲಿ ಕೂರಬೇಕು: ಈಶ್ವರ್