AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಚಲಿಸುವ ರೈಲಿನಿಂದ ಬಿದ್ದ ಯುವಕ; ಹೀರೋ ರೀತಿ ಬಂದು ಜೀವ ಉಳಿಸಿದ ರೈಲ್ವೆ ಸಿಬ್ಬಂದಿ

ವೈರಲ್ ಆಗಿರುವ ವಿಡಿಯೋ ತುಣುಕಿನಲ್ಲಿ ರೈಲ್ವೆ ಪ್ರೊಟೆಕ್ಷನ್ ಫೋರ್ಸ್ (ಆರ್‌ಪಿಎಫ್) ಕಾನ್‌ಸ್ಟೆಬಲ್ ನೇತ್ರಪಾಲ್ ಸಿಂಗ್ ತನ್ನ ಸಮಯಪ್ರಜ್ಞೆಯಿಂದ ವ್ಯಕ್ತಿಯ ಜೀವವನ್ನು ಉಳಿಸುವುದನ್ನು ಕಾಣಬಹುದು.

Viral Video: ಚಲಿಸುವ ರೈಲಿನಿಂದ ಬಿದ್ದ ಯುವಕ; ಹೀರೋ ರೀತಿ ಬಂದು ಜೀವ ಉಳಿಸಿದ ರೈಲ್ವೆ ಸಿಬ್ಬಂದಿ
ರೈಲಿನಿಂದ ಕೆಳಗೆ ಬಿದ್ದ ಯುವಕ
TV9 Web
| Updated By: ಸುಷ್ಮಾ ಚಕ್ರೆ|

Updated on: Mar 14, 2022 | 4:48 PM

Share

ನವದೆಹಲಿ: ಭಾರತದಲ್ಲಿ ದಿನವೂ ಲಕ್ಷಾಂತರ ಜನರು ರೈಲುಗಳಲ್ಲಿ ಪ್ರಯಾಣಿಸುತ್ತಾರೆ. ಕೆಳ ಮತ್ತು ಮಧ್ಯಮ ವರ್ಗದವರಿಗೆ ರೈಲು ಪ್ರಯಾಣ ಬಹಳ ಅಗ್ಗದ ಪ್ರಯಾಣವಾದ್ದರಿಂದ ಬಸ್​, ಆಟೋ, ಕಾರುಗಳ ಬದಲು ರೈಲು ಸಂಚಾರಕ್ಕೇ ಹೆಚ್ಚು ಆದ್ಯತೆ ನೀಡುತ್ತಾರೆ. ರೈಲು ಪ್ರಯಾಣ ಸುರಕ್ಷಿತವಾದರೂ ಕೆಲವೊಮ್ಮೆ ರೈಲಿನಲ್ಲೂ ಅಪಘಾತಗಳು ಸಂಭವಿಸುತ್ತವೆ. ಚಲಿಸುವ ರೈಲನ್ನು ಹತ್ತಲು ಹೋಗಿ ಬಿದ್ದವರು, ಚಲಿಸುವ ರೈಲಿನಿಂದ ಕೆಳಗೆ ಇಳಿಯುವಾಗ ಆಯ ತಪ್ಪಿ ಬಿದ್ದವರು, ಅಚಾನಕ್ಕಾಗಿ ರೈಲಿನ ಚಕ್ರದಡಿ ಸಿಲುಕಿದವರು ಹೀಗೆ ಅಪಘಾತಗಳು ಉಂಟಾಗುತ್ತಲೇ ಇರುತ್ತವೆ.

ಇಂತಹ ಒಂದು ಘಟನೆಯ ವಿಡಿಯೋವೊಂದು ವೈರಲ್ ಆಗಿದ್ದು, ವ್ಯಕ್ತಿಯೊಬ್ಬ ಚಲಿಸುತ್ತಿದ್ದ ರೈಲಿನಿಂದ ಆಕಸ್ಮಿಕವಾಗಿ ಜಾರಿ ಬಿದ್ದಿದ್ದಾನೆ. ಅದರಿಂದ ಅವನ ಪ್ರಾಣವೇ ಹೋಗುವ ಸಾಧ್ಯತೆಯಿತ್ತು. ಆದರೆ ಹೀರೋ ರೀತಿ ಪೋಲೀಸ್‌ ಒಬ್ಬರು ಓಡಿ ಬಂದು ಆತನ ಪ್ರಾಣ ಉಳಿಸಿದ್ದಾರೆ. ಈ ವಿಡಿಯೋ ನೋಡಿದವರು ಪೊಲೀಸ್​ ಸಿಬ್ಬಂದಿಯ ಸಮಯಪ್ರಜ್ಞೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ವೈರಲ್ ಆಗಿರುವ ವಿಡಿಯೋ ತುಣುಕಿನಲ್ಲಿ ರೈಲ್ವೆ ಪ್ರೊಟೆಕ್ಷನ್ ಫೋರ್ಸ್ (ಆರ್‌ಪಿಎಫ್) ಕಾನ್‌ಸ್ಟೆಬಲ್ ನೇತ್ರಪಾಲ್ ಸಿಂಗ್ ತನ್ನ ಸಮಯಪ್ರಜ್ಞೆಯಿಂದ ವ್ಯಕ್ತಿಯ ಜೀವವನ್ನು ಉಳಿಸುವುದನ್ನು ಕಾಣಬಹುದು. ಈ ವಿಡಿಯೋವನ್ನು ಸುದ್ದಿ ಸಂಸ್ಥೆ ಎಎನ್‌ಐ ಸಾಮಾಜಿಕ ಮಾಧ್ಯಮದಲ್ಲಿ ಅಪ್‌ಲೋಡ್ ಮಾಡಿದೆ.

ಚಲಿಸುತ್ತಿರುವ ರೈಲಿನ ತೆರೆದ ಬಾಗಿಲಿನಿಂದ ಒಬ್ಬ ವ್ಯಕ್ತಿ ಪ್ಲಾಟ್‌ಫಾರ್ಮ್‌ಗೆ ಬೀಳುತ್ತಿದ್ದಾನೆ. ಆ ವ್ಯಕ್ತಿ ಚಲಿಸುತ್ತಿದ್ದ ರೈಲಿಗೆ ಸಿಲುಕಿದ್ದಾನೆ. ಅಷ್ಟರಲ್ಲಿ ಓಡಿಬಂದ ರೈಲ್ವೆ ಸಿಬ್ಬಂದಿ ಆತನನ್ನು ಎಳೆದುಕೊಂಡು ರೈಲ್ವೆ ಪ್ಲಾಟ್​ಫಾರ್ಮ್ ಮೇಲೆ ಹಾಕಿದ್ದಾರೆ. ರೈಲ್ವೆ ಸಿಬ್ಬಂದಿ ನೇತ್ರಪಾಲ್ ಸಿಂಗ್ ಸಮಯಪ್ರಜ್ಞೆಯಿಂದಾಗಿ ಆತ ಚಲಿಸುವ ರೈಲಿನಡಿ ಸಿಲುಕಿ ಪ್ರಾಣ ಕಳೆದುಕೊಳ್ಳುವುದು ತಪ್ಪಿದಂತಾಗಿದೆ.

ಈ ವಿಡಿಯೋವನ್ನು ಅಪ್‌ಲೋಡ್ ಮಾಡಿದ ನಂತರ ಈ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ 33,000ಕ್ಕೂ ಹೆಚ್ಚು ಜನರು ವೀಕ್ಷಿಸಿದ್ದಾರೆ. ಈ ವಿಡಿಯೋವನ್ನು ಟ್ವಿಟರ್‌ನಲ್ಲಿ ಹಲವಾರು ಬಾರಿ ಹಂಚಿಕೊಳ್ಳಲಾಗಿದೆ. ಒಬ್ಬ ವ್ಯಕ್ತಿಯ ಜೀವವನ್ನು ಉಳಿಸಿದ ಪೋಲೀಸರ ಪ್ರಯತ್ನವನ್ನು ನೆಟ್ಟಿಗರು ಶ್ಲಾಘಿಸಿದ್ದಾರೆ.

ಇದನ್ನೂ ಓದಿ: Viral Video: ಸತ್ತ ಗೆಳೆಯನನ್ನು ಹೂಳಲು ತಾವೇ ಬಾಯಿಯಿಂದ ಮಣ್ಣು ತೋಡಿದ ನಾಯಿಗಳು; ಕಣ್ತುಂಬುವ ವಿಡಿಯೋ ಇಲ್ಲಿದೆ

Shocking Video: ಗರ್ಭಿಣಿಯಾಗಿದ್ದ ಫಾರೆಸ್ಟ್​ ರೇಂಜರ್​ ಕೂದಲು ಹಿಡಿದೆಳೆದು, ಥಳಿಸಿದ ದಂಪತಿ; ಶಾಕಿಂಗ್ ವಿಡಿಯೋ ವೈರಲ್

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?