AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ವ್ಯಕ್ತಿಯನ್ನು ಅಟ್ಟಾಡಿಸಿದ ಹಸುಗಳು, ಎದ್ದುಬಿದ್ದು ಓಡಿದಾತ ಬಿದ್ದಿದ್ದು ಎಲ್ಲಿಗೆ ಗೊತ್ತಾ?

ಕೀಟಲೆ ಮಾಡಿದ ವ್ಯಕ್ತಿಯನ್ನು ಎರಡು ಹಸುಗಳು ಅಟ್ಟಿಸಿಕೊಂಡು ಬಂದಿವೆ. ಈ ವೇಳೆ ಅವುಗಳ ಕೊಂಬಿನೇಟಿನಿಂದ ತಪ್ಪಿಸಿಕೊಳ್ಳಲು ವ್ಯಕ್ತಿ ಎದ್ದುಬಿದ್ದು ಓಡಿ ಬಂದು ಹಳ್ಳಕ್ಕೆ ಬಿದ್ದಿದ್ದಾನೆ. ಇದರ ವಿಡಿಯೋ ವೈರಲ್ ಆಗುತ್ತಿದೆ.

Viral Video: ವ್ಯಕ್ತಿಯನ್ನು ಅಟ್ಟಾಡಿಸಿದ ಹಸುಗಳು, ಎದ್ದುಬಿದ್ದು ಓಡಿದಾತ ಬಿದ್ದಿದ್ದು ಎಲ್ಲಿಗೆ ಗೊತ್ತಾ?
ವ್ಯಕ್ತಿಯನ್ನು ಅಟ್ಟಾಡಿಸಿದ ಜಾನುವಾರುಗಳು
TV9 Web
| Edited By: |

Updated on:Aug 05, 2022 | 4:56 PM

Share

ಕೀಟಲೆ ಮಾಡಲು  ಹೋಗಿ ಮೂಕ ಪ್ರಾಣಿಗಳ ಆಕ್ರೋಶಕ್ಕೆ ತುತ್ತಾಗುವ ಘಟನೆಗಳು ಅಲ್ಲಲ್ಲಿ ನಡೆಯುತ್ತಿರುತ್ತವೆ ಮತ್ತು ಇಂತಹ ಘಟನೆಗಳ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುತ್ತವೆ. ಇಂತಹ ವಿಡಿಯೋ ಕೆಲವೊಮ್ಮೆ ನೆಟ್ಟಿಗರನ್ನು ನಗುವಿನ ಲೋಕಕ್ಕೆ ಕೊಂಡೊಯ್ಯುತ್ತವೆ. ಅದರಂತೆ ಇತ್ತೀಚೆಗಷ್ಟೇ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಲಾಗಿರುವ ತಮಾಷೆಯ ವಿಡಿಯೋವೊಂದು ಇದೀಗ ವೈರಲ್ ಆಗುತ್ತಿದೆ. ಮೇಯುತ್ತಿದ್ದಾಗ ಕೀಟಲೆ ಮಾಡಿದ ವ್ಯಕ್ತಿಯನ್ನು ಎರಡು ಹಸುಗಳು ಅಟ್ಟಿಸಿಕೊಂಡು ಬಂದ್ದಿದ್ದು, ಆ ವ್ಯಕ್ತಿ ಎದ್ದುಬಿದ್ದು ಓಡಿ ಬಂದು ಹಳ್ಳಕ್ಕೆ ಬೀಳುವುದನ್ನು ವೈರಲ್ ವಿಡಿಯೋ ತೋರಿಸುತ್ತದೆ.

ಹತ್ತಕ್ಕೂ ಹೆಚ್ಚು ಹಸುಗಳು ವಿಶಾಲವಾದ ಗದ್ದೆಯಲ್ಲಿ ಮೇಯುತ್ತಿರುತ್ತವೆ. ಅಲ್ಲಿಗೆ ಬಂದ ವ್ಯಕ್ತಿಯೊಬ್ಬರು ಅವುಗಳಿಗೆ ಕೀಟಲೆ ಮಾಡಿದ್ದಾರೆ.  ಈ ವೇಳೆ ಕೋಪಗೊಂಡ ಕಪ್ಪು ಬಣ್ಣದಿಂದ ಹಾಗೂ ಉದ್ದಾದ ಚೂಪಿನ ಕೊಂಬುಳ್ಳ ಹಸು ಮತ್ತು ಕೊಂಬು ಇಲ್ಲ ಮತ್ತೊಂದು ಹಸು ಅಟ್ಟಿಸಿಕೊಂಡು ಬಂದಿವೆ. ಈ ವೇಳೆ ಅಲ್ಲಿಂದ ಎದ್ದುಬಿದ್ದು ಓಡಲು ಆರಂಭಿಸಿದ ಕೀಟಲೆ ಮಾಡಿದ ವ್ಯಕ್ತಿ ಹರಿಯುವ ಹಳ್ಳಕ್ಕೆ ಅಡ್ಡಲಾಗಿ ಕಟ್ಟಿದ ಕಾಂಕ್ರೀಟ್ ಮೇಲೆ ಓಡುತ್ತಾನೆ. ಈ ವೇಳೆ ಆತ ಆಯ ತಪ್ಪಿ ಹಳ್ಳಕ್ಕೆ ಬಿದ್ದು ಮೇಲಕ್ಕೆ ಎದ್ದು ಬರುತ್ತಾನೆ. ಈತನೊಂದಿಗೆ ಸಣ್ಣ ನಾಯಿ ಮರಿ ಕೂಡ ವೇಗವಾಗಿ ಓಡುವುದನ್ನು ಕೂಡ ವೈರಲ್ ವಿಡಿಯೋದಲ್ಲಿ ಕಾಣಬಹುದು.

ಈ ತಮಾಷೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ಸಣ್ಣ ಕ್ಲಿಪ್ ಅನ್ನು ವೈರಲ್‌ಹಾಗ್ ಎಂಬ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದ್ದು, ಈವರೆಗೆ 41 ಸಾವಿರಕ್ಕೂ ಹೆಚ್ಚು ವೀಕ್ಷಣಗಳನ್ನು ಕಂಡಿದ್ದು, ಸಾವಿರಾರು ಲೈಕ್​ಗಳು ಬಂದಿವೆ. ಈ ವಿಡಿಯೋವನ್ನು ನೋಡಿದ ಒಂದಷ್ಟು ಮಂದಿ ಕಾಮೆಂಟ್​ಗಳನ್ನು ಕೂಡ ಮಾಡಿದ್ದಾರೆ.

View this post on Instagram

A post shared by ViralHog (@viralhog)

ನೆಟ್ಟಿಗರೊಬ್ಬರು ಕಾಮೆಂಟ್ ಮಾಡಿ, “ಸಣ್ಣ ನಾಯಿಮರಿ ಕೂಡ ತನ್ನ ಪ್ರಾಣಕ್ಕಾಗಿ ಓಡುತ್ತಿತ್ತು” ಎಂದು ಬರೆದುಕೊಂಡಿದ್ದಾರೆ. ಇನ್ನೊಬ್ಬರು ಕಾಮೆಂಟ್ ಮಾಡಿ, “ಅವರು ಯಾಕೆ ಆತ್ಮವಿಶ್ವಾಸದಿಂದ ಓಡುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ” ಎಂದು ಹೇಳಿದ್ದಾರೆ. ಮತ್ತೊಬ್ಬರು ಕಾಮೆಂಟ್ ಮಾಡಿ, “ಆ ನೀರು ಹಸುಗಳಿಗಿಂತಲೂ ಮಾರಕ” ಎಂದು ಹೇಳಿದ್ದಾರೆ.

ಮತ್ತಷ್ಟು ಟ್ರೆಂಡಿಂಗ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:56 pm, Fri, 5 August 22

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ