AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ವ್ಯಕ್ತಿಯನ್ನು ಅಟ್ಟಾಡಿಸಿದ ಹಸುಗಳು, ಎದ್ದುಬಿದ್ದು ಓಡಿದಾತ ಬಿದ್ದಿದ್ದು ಎಲ್ಲಿಗೆ ಗೊತ್ತಾ?

ಕೀಟಲೆ ಮಾಡಿದ ವ್ಯಕ್ತಿಯನ್ನು ಎರಡು ಹಸುಗಳು ಅಟ್ಟಿಸಿಕೊಂಡು ಬಂದಿವೆ. ಈ ವೇಳೆ ಅವುಗಳ ಕೊಂಬಿನೇಟಿನಿಂದ ತಪ್ಪಿಸಿಕೊಳ್ಳಲು ವ್ಯಕ್ತಿ ಎದ್ದುಬಿದ್ದು ಓಡಿ ಬಂದು ಹಳ್ಳಕ್ಕೆ ಬಿದ್ದಿದ್ದಾನೆ. ಇದರ ವಿಡಿಯೋ ವೈರಲ್ ಆಗುತ್ತಿದೆ.

Viral Video: ವ್ಯಕ್ತಿಯನ್ನು ಅಟ್ಟಾಡಿಸಿದ ಹಸುಗಳು, ಎದ್ದುಬಿದ್ದು ಓಡಿದಾತ ಬಿದ್ದಿದ್ದು ಎಲ್ಲಿಗೆ ಗೊತ್ತಾ?
ವ್ಯಕ್ತಿಯನ್ನು ಅಟ್ಟಾಡಿಸಿದ ಜಾನುವಾರುಗಳು
TV9 Web
| Edited By: |

Updated on:Aug 05, 2022 | 4:56 PM

Share

ಕೀಟಲೆ ಮಾಡಲು  ಹೋಗಿ ಮೂಕ ಪ್ರಾಣಿಗಳ ಆಕ್ರೋಶಕ್ಕೆ ತುತ್ತಾಗುವ ಘಟನೆಗಳು ಅಲ್ಲಲ್ಲಿ ನಡೆಯುತ್ತಿರುತ್ತವೆ ಮತ್ತು ಇಂತಹ ಘಟನೆಗಳ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುತ್ತವೆ. ಇಂತಹ ವಿಡಿಯೋ ಕೆಲವೊಮ್ಮೆ ನೆಟ್ಟಿಗರನ್ನು ನಗುವಿನ ಲೋಕಕ್ಕೆ ಕೊಂಡೊಯ್ಯುತ್ತವೆ. ಅದರಂತೆ ಇತ್ತೀಚೆಗಷ್ಟೇ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಲಾಗಿರುವ ತಮಾಷೆಯ ವಿಡಿಯೋವೊಂದು ಇದೀಗ ವೈರಲ್ ಆಗುತ್ತಿದೆ. ಮೇಯುತ್ತಿದ್ದಾಗ ಕೀಟಲೆ ಮಾಡಿದ ವ್ಯಕ್ತಿಯನ್ನು ಎರಡು ಹಸುಗಳು ಅಟ್ಟಿಸಿಕೊಂಡು ಬಂದ್ದಿದ್ದು, ಆ ವ್ಯಕ್ತಿ ಎದ್ದುಬಿದ್ದು ಓಡಿ ಬಂದು ಹಳ್ಳಕ್ಕೆ ಬೀಳುವುದನ್ನು ವೈರಲ್ ವಿಡಿಯೋ ತೋರಿಸುತ್ತದೆ.

ಹತ್ತಕ್ಕೂ ಹೆಚ್ಚು ಹಸುಗಳು ವಿಶಾಲವಾದ ಗದ್ದೆಯಲ್ಲಿ ಮೇಯುತ್ತಿರುತ್ತವೆ. ಅಲ್ಲಿಗೆ ಬಂದ ವ್ಯಕ್ತಿಯೊಬ್ಬರು ಅವುಗಳಿಗೆ ಕೀಟಲೆ ಮಾಡಿದ್ದಾರೆ.  ಈ ವೇಳೆ ಕೋಪಗೊಂಡ ಕಪ್ಪು ಬಣ್ಣದಿಂದ ಹಾಗೂ ಉದ್ದಾದ ಚೂಪಿನ ಕೊಂಬುಳ್ಳ ಹಸು ಮತ್ತು ಕೊಂಬು ಇಲ್ಲ ಮತ್ತೊಂದು ಹಸು ಅಟ್ಟಿಸಿಕೊಂಡು ಬಂದಿವೆ. ಈ ವೇಳೆ ಅಲ್ಲಿಂದ ಎದ್ದುಬಿದ್ದು ಓಡಲು ಆರಂಭಿಸಿದ ಕೀಟಲೆ ಮಾಡಿದ ವ್ಯಕ್ತಿ ಹರಿಯುವ ಹಳ್ಳಕ್ಕೆ ಅಡ್ಡಲಾಗಿ ಕಟ್ಟಿದ ಕಾಂಕ್ರೀಟ್ ಮೇಲೆ ಓಡುತ್ತಾನೆ. ಈ ವೇಳೆ ಆತ ಆಯ ತಪ್ಪಿ ಹಳ್ಳಕ್ಕೆ ಬಿದ್ದು ಮೇಲಕ್ಕೆ ಎದ್ದು ಬರುತ್ತಾನೆ. ಈತನೊಂದಿಗೆ ಸಣ್ಣ ನಾಯಿ ಮರಿ ಕೂಡ ವೇಗವಾಗಿ ಓಡುವುದನ್ನು ಕೂಡ ವೈರಲ್ ವಿಡಿಯೋದಲ್ಲಿ ಕಾಣಬಹುದು.

ಈ ತಮಾಷೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ಸಣ್ಣ ಕ್ಲಿಪ್ ಅನ್ನು ವೈರಲ್‌ಹಾಗ್ ಎಂಬ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದ್ದು, ಈವರೆಗೆ 41 ಸಾವಿರಕ್ಕೂ ಹೆಚ್ಚು ವೀಕ್ಷಣಗಳನ್ನು ಕಂಡಿದ್ದು, ಸಾವಿರಾರು ಲೈಕ್​ಗಳು ಬಂದಿವೆ. ಈ ವಿಡಿಯೋವನ್ನು ನೋಡಿದ ಒಂದಷ್ಟು ಮಂದಿ ಕಾಮೆಂಟ್​ಗಳನ್ನು ಕೂಡ ಮಾಡಿದ್ದಾರೆ.

View this post on Instagram

A post shared by ViralHog (@viralhog)

ನೆಟ್ಟಿಗರೊಬ್ಬರು ಕಾಮೆಂಟ್ ಮಾಡಿ, “ಸಣ್ಣ ನಾಯಿಮರಿ ಕೂಡ ತನ್ನ ಪ್ರಾಣಕ್ಕಾಗಿ ಓಡುತ್ತಿತ್ತು” ಎಂದು ಬರೆದುಕೊಂಡಿದ್ದಾರೆ. ಇನ್ನೊಬ್ಬರು ಕಾಮೆಂಟ್ ಮಾಡಿ, “ಅವರು ಯಾಕೆ ಆತ್ಮವಿಶ್ವಾಸದಿಂದ ಓಡುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ” ಎಂದು ಹೇಳಿದ್ದಾರೆ. ಮತ್ತೊಬ್ಬರು ಕಾಮೆಂಟ್ ಮಾಡಿ, “ಆ ನೀರು ಹಸುಗಳಿಗಿಂತಲೂ ಮಾರಕ” ಎಂದು ಹೇಳಿದ್ದಾರೆ.

ಮತ್ತಷ್ಟು ಟ್ರೆಂಡಿಂಗ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:56 pm, Fri, 5 August 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ