AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾಗರಾಜ’ನಿಗೆ ಮುತ್ತು ಕೊಟ್ಟ ಸುರೇಶ, ನೆಟ್ಟಿಗರೆಲ್ಲ ಗಡಗಡಗಡಗಡ

Man Kisses King Cobra : ಒಂದು ಮುತ್ತಿನ ಹಿಂದೆ ಅದೆಂಥ ಸಾಹಸದ ಕಥೆ ಇರುತ್ತದೆ. ಇನ್ನು ನಾಗರಹಾವಿಗೆ ಮುತ್ತು ಕೊಡುವುದೆಂದರೆ! ನೋಡಿ ಕೇರಳದ ಈ ಉರಗ ಪರಿಣತನ ವಿಡಿಯೋ.

‘ನಾಗರಾಜ’ನಿಗೆ ಮುತ್ತು ಕೊಟ್ಟ ಸುರೇಶ, ನೆಟ್ಟಿಗರೆಲ್ಲ ಗಡಗಡಗಡಗಡ
Man Kisses King Cobra on Head
TV9 Web
| Edited By: |

Updated on:Oct 21, 2022 | 1:51 PM

Share

Viral Video : ಈ ನಾಗರಾಜನ ಸುದ್ದಿಯಂತೂ ದಿನವೂ ಕೇಳುತ್ತಿರುತ್ತೀರಿ, ನೋಡುತ್ತಿರುತ್ತೀರಿ. ವೈರಲ್ ಆದ ವಿಡಿಯೋಗಳಿಗಂತೂ ಲೆಕ್ಕವೇ ಇಲ್ಲ. ಮೊನ್ನೆಮೊನ್ನೆಯಷ್ಟೇ ಒಬ್ಬ ವ್ಯಕ್ತಿ ನಾಗರಹಾವಿಗೆ ಮುತ್ತಿಡಲು ಹೋಗಿ ಕಚ್ಚಿಸಿಕೊಂಡ ವಿಡಿಯೋ ನೋಡಿದ್ದೀರಿ. ಆದರೆ ಇದೀಗ ವೈರಲ್ ಆಗಿರುವ ಈ ಉರಗ ಪರಿಣತ ನಾಗರಹಾವಿಗೆ ಮುತ್ತು ಕೊಡುವಲ್ಲಿ ಯಶಸ್ವಿಯಾಗಿದ್ದಾನೆ. ನೆಟ್ಟಿಗರಂತೂ ಈ ದೃಶ್ಯ ನೋಡಿ ಬೆಚ್ಚಿಬೆಚ್ಚಿ ಬೀಳುತ್ತಿದ್ದಾರೆ. ಈತನ ಧೈರ್ಯವನ್ನು ಕೊಂಡಾಡುತ್ತಿದ್ದಾರೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!
View this post on Instagram

A post shared by Saurabh Jadhav Jadhav (@10_viper_21)

ಇಂಥ ವಿಷಕಾರಿಯಾದ ನಾಗರಹಾವಿನ ನೆತ್ತಿಯ ಮೇಲೆ ಈತ ಹೀಗೆ ಮುತ್ತಿಡುವುದನ್ನು ನೋಡುವುದೇ ಭಯಾನಕವಾಗಿದೆ. ಇದನ್ನು ಪ್ರಯತ್ನಿಸಿ ಎಂದು ನಿಮಗೆ ಯಾರಾದರೂ ಹೇಳಿದರೆ? ಸೌರಭ್ ಜಾಧವ್ ಎನ್ನುವವರು ತಮ್ಮ ಇನ್​ಸ್ಟಾಗ್ರಾಂ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಂಡಿದ್ದಾರೆ. ಈ ಉರಗ ಪರಿಣತನ ಹೆಸರು ವಾವಾ ಸುರೇಶ. ಇವರು ಕೇರಳ ಮೂಲದವರು. ಈತನಕ 38,000 ಕ್ಕೂ ಹೆಚ್ಚು ಹಾವುಗಳನ್ನು ಹಿಡಿದಿದ್ದಾರೆ, 190 ಹಾವುಗಳನ್ನು ರಕ್ಷಿಸಿದ್ದಾರೆ ಮತ್ತು 3,000ಕ್ಕೂ ಹೆಚ್ಚು ಹಾವುಗಳಿಂದ ಕಚ್ಚಿಸಿಕೊಂಡಿದ್ದಾರೆ ಕೂಡ! ‘ಕೇರಳದ ಹಾವಿನ ಮನುಷ್ಯ’ ಎಂದೇ ಇವರು ಪ್ರಸಿದ್ಧರಾಗಿದ್ದಾರೆ.

ಈ ವಿಡಿಯೋ ಅನ್ನು 780 ಜನರು ಇಷ್ಟಪಟ್ಟಿದ್ದಾರೆ. ಇವರ ಧೈರ್ಯವನ್ನು ನೆಟ್ಟಿಗರು ಹೊಗಳಿದ್ದಾರೆ. ಕೆಲವರು ಇದು ಅಪಾಯಕಾರಿ ಎಂದಿದ್ದಾರೆ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 1:51 pm, Fri, 21 October 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್