AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ರೈಲು ಬರುವುದ ನೋಡಿ ಆತ್ಮಹತ್ಯೆ ಮಾಡಿಕೊಳ್ಳಲು ಹಳಿ ಮೇಲೆ ಮಲಗಿದ ವ್ಯಕ್ತಿಯನ್ನು ರಕ್ಷಿಸಿದ ಮಹಿಳಾ ಕಾನ್​ಸ್ಟೆಬಲ್

ರೈಲು ಬರುವುದನ್ನು ನೋಡಿ ಆತ್ಮಹತ್ಯೆ ಮಾಡಿಕೊಳ್ಳಲೆಂದು ರೈಲ್ವೆ ಹಳಿ ಮೇಲೆ ಹೋಗಿ ಮಲಗಿದ ವ್ಯಕ್ತಿಯನ್ನು ಮಹಿಳಾ ಕಾನ್​ಸ್ಟೆಬಲ್​ ರಕ್ಷಿಸಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ.

Viral Video: ರೈಲು ಬರುವುದ ನೋಡಿ ಆತ್ಮಹತ್ಯೆ ಮಾಡಿಕೊಳ್ಳಲು ಹಳಿ ಮೇಲೆ ಮಲಗಿದ ವ್ಯಕ್ತಿಯನ್ನು ರಕ್ಷಿಸಿದ ಮಹಿಳಾ ಕಾನ್​ಸ್ಟೆಬಲ್
ರೈಲುImage Credit source: News 9
ನಯನಾ ರಾಜೀವ್
|

Updated on: Jun 12, 2023 | 2:25 PM

Share

ರೈಲು ಬರುವುದನ್ನು ನೋಡಿ ಆತ್ಮಹತ್ಯೆ ಮಾಡಿಕೊಳ್ಳಲೆಂದು ರೈಲ್ವೆ ಹಳಿ ಮೇಲೆ ಹೋಗಿ ಮಲಗಿದ ವ್ಯಕ್ತಿಯನ್ನು ಮಹಿಳಾ ಕಾನ್​ಸ್ಟೆಬಲ್​ ರಕ್ಷಿಸಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಒಬ್ಬ ವ್ಯಕ್ತಿ ರೈಲ್ವೆ ಪ್ಲಾಟ್‌ಫಾರ್ಮ್‌ನಲ್ಲಿ ಒಬ್ಬಂಟಿಯಾಗಿ ನಿಂತಿರುವುದು ಕಂಡುಬರುತ್ತದೆ. ತನ್ನ ಸುತ್ತಲೂ ಯಾರಾದರೂ ಇದ್ದಾರೆಯೇ ಎಂದು ಸುತ್ತಲೂ ಒಮ್ಮೆ ನೋಡುತ್ತಾನೆ, ರೈಲು ಬರುವ ಸಮಯವಾದ ಕೂಡಲೇ ಹಳಿ ಮೇಲೆ ಹಾರಿ ಹಳಿಯ ಮೇಲೆ ತಲೆ ಇಟ್ಟು ಮಲಗುತ್ತಾನೆ. ರೈಲ್ವೆ ಸಂರಕ್ಷಣಾ ಪಡೆ (ಆರ್‌ಪಿಎಫ್) ಮಹಿಳಾ ಕಾನ್‌ಸ್ಟೆಬಲ್ ಒಬ್ಬರು ತನ್ನ ಪ್ರಾಣವನ್ನು ಲೆಕ್ಕಿಸದೆ ರೈಲ್ವೆ ಹಳಿ ಮೇಲೆ ಹಾರಿ ಆತನ ಪ್ರಾಣವನ್ನು ರಕ್ಷಿಸಿದ್ದಾರೆ.

ರೈಲು ಬರುವ ಮುನ್ನವೇ ಆತನನ್ನು ಬೇರೆ ಹಳಿಯ ಮೇಲೆ ಕರೆತರುವಲ್ಲಿ ಯಶಸ್ವಿಯಾಗಿದ್ದಾರೆ. ಕಾನ್ಸ್‌ಟೇಬಲ್ ವ್ಯಕ್ತಿಗೆ ಸಹಾಯ ಮಾಡುತ್ತಿರುವುದನ್ನು ಕಂಡು, ರೈಲ್ವೇ ನಿಲ್ದಾಣದಲ್ಲಿದ್ದ ಇತರ ಜನರು ಸಹ ಸಹಾಯ ಮಾಡಲು ಓಡಿದರು. ನಂತರ ವ್ಯಕ್ತಿಯನ್ನು ಪ್ಲಾಟ್​ಫಾರಂ ಮೇಲೆ ಎಳೆದುಕೊಂಡು ಹೋಗಿದ್ದಾರೆ. ಮಹಿಳಾ ಪೇದೆಯನ್ನು ಸುಮತಿ ಎಂದು ಗುರುತಿಸಲಾಗಿದೆ.

ಮತ್ತಷ್ಟು ಓದಿ: ಮೆಟ್ರೋಗಾಗಿ ಕಾಯುತ್ತಾ ನಿಲ್ಲುವ ಮಹಿಳೆಯರೇ ಹುಷಾರ್! ಈ ವಿಡಿಯೋ ನೋಡಿ

ಯುವಕ ತನ್ನ ಪ್ರಾಣವನ್ನು ಏಕೆ ಕೊನೆಗಾಣಿಸಲು ಯತ್ನಿಸಿದ್ದಾನೆ ಎಂಬುದು ಇನ್ನೂ ತಿಳಿದುಬಂದಿಲ್ಲ. ಈ ನಡುವೆ ಟ್ವಿಟರ್ ಬಳಕೆದಾರರು ಮಹಿಳಾ ಪೇದೆ ತೋರಿದ ಧೈರ್ಯವನ್ನು ಕೊಂಡಾಡುತ್ತಿದ್ದಾರೆ.

ಬಳಕೆದಾರರು ಆಕೆಯನ್ನು ದೇವತೆಗೆ ಹೋಲಿಸಿದ್ದಾರೆ, ಶ್ಲಾಘನೀಯ ಪ್ರಯತ್ನ. ನೀನು ಪೊಲೀಸ್ ಪೇದೆಯ ರೂಪದಲ್ಲಿರುವ ನಿಜವಾದ ದೇವತೆ ಎಂದಿದ್ದಾರೆ.

ರೈಲಿನಿಂದ ಇಳಿಯುವಾಗ ಸಾಕಷ್ಟು ಮಂದಿ ಜಾರಿ ಬಿದ್ದು ಇನ್ನೇನು ರೈಲಿನ ಕೆಳಗೆ ಸಿಲುಕುತ್ತಾರೆ ಎನ್ನುವ ಸಮಯದಲ್ಲಿ ಅವರನ್ನು ರಕ್ಷಿಸುವ ಸಾಕಷ್ಟು ವಿಡಿಯೋಗಳನ್ನು ನಾವು ನೋಡಿರಬಹುದು.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ