AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ರೈಲು ಬರುವುದ ನೋಡಿ ಆತ್ಮಹತ್ಯೆ ಮಾಡಿಕೊಳ್ಳಲು ಹಳಿ ಮೇಲೆ ಮಲಗಿದ ವ್ಯಕ್ತಿಯನ್ನು ರಕ್ಷಿಸಿದ ಮಹಿಳಾ ಕಾನ್​ಸ್ಟೆಬಲ್

ರೈಲು ಬರುವುದನ್ನು ನೋಡಿ ಆತ್ಮಹತ್ಯೆ ಮಾಡಿಕೊಳ್ಳಲೆಂದು ರೈಲ್ವೆ ಹಳಿ ಮೇಲೆ ಹೋಗಿ ಮಲಗಿದ ವ್ಯಕ್ತಿಯನ್ನು ಮಹಿಳಾ ಕಾನ್​ಸ್ಟೆಬಲ್​ ರಕ್ಷಿಸಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ.

Viral Video: ರೈಲು ಬರುವುದ ನೋಡಿ ಆತ್ಮಹತ್ಯೆ ಮಾಡಿಕೊಳ್ಳಲು ಹಳಿ ಮೇಲೆ ಮಲಗಿದ ವ್ಯಕ್ತಿಯನ್ನು ರಕ್ಷಿಸಿದ ಮಹಿಳಾ ಕಾನ್​ಸ್ಟೆಬಲ್
ರೈಲುImage Credit source: News 9
ನಯನಾ ರಾಜೀವ್
|

Updated on: Jun 12, 2023 | 2:25 PM

Share

ರೈಲು ಬರುವುದನ್ನು ನೋಡಿ ಆತ್ಮಹತ್ಯೆ ಮಾಡಿಕೊಳ್ಳಲೆಂದು ರೈಲ್ವೆ ಹಳಿ ಮೇಲೆ ಹೋಗಿ ಮಲಗಿದ ವ್ಯಕ್ತಿಯನ್ನು ಮಹಿಳಾ ಕಾನ್​ಸ್ಟೆಬಲ್​ ರಕ್ಷಿಸಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಒಬ್ಬ ವ್ಯಕ್ತಿ ರೈಲ್ವೆ ಪ್ಲಾಟ್‌ಫಾರ್ಮ್‌ನಲ್ಲಿ ಒಬ್ಬಂಟಿಯಾಗಿ ನಿಂತಿರುವುದು ಕಂಡುಬರುತ್ತದೆ. ತನ್ನ ಸುತ್ತಲೂ ಯಾರಾದರೂ ಇದ್ದಾರೆಯೇ ಎಂದು ಸುತ್ತಲೂ ಒಮ್ಮೆ ನೋಡುತ್ತಾನೆ, ರೈಲು ಬರುವ ಸಮಯವಾದ ಕೂಡಲೇ ಹಳಿ ಮೇಲೆ ಹಾರಿ ಹಳಿಯ ಮೇಲೆ ತಲೆ ಇಟ್ಟು ಮಲಗುತ್ತಾನೆ. ರೈಲ್ವೆ ಸಂರಕ್ಷಣಾ ಪಡೆ (ಆರ್‌ಪಿಎಫ್) ಮಹಿಳಾ ಕಾನ್‌ಸ್ಟೆಬಲ್ ಒಬ್ಬರು ತನ್ನ ಪ್ರಾಣವನ್ನು ಲೆಕ್ಕಿಸದೆ ರೈಲ್ವೆ ಹಳಿ ಮೇಲೆ ಹಾರಿ ಆತನ ಪ್ರಾಣವನ್ನು ರಕ್ಷಿಸಿದ್ದಾರೆ.

ರೈಲು ಬರುವ ಮುನ್ನವೇ ಆತನನ್ನು ಬೇರೆ ಹಳಿಯ ಮೇಲೆ ಕರೆತರುವಲ್ಲಿ ಯಶಸ್ವಿಯಾಗಿದ್ದಾರೆ. ಕಾನ್ಸ್‌ಟೇಬಲ್ ವ್ಯಕ್ತಿಗೆ ಸಹಾಯ ಮಾಡುತ್ತಿರುವುದನ್ನು ಕಂಡು, ರೈಲ್ವೇ ನಿಲ್ದಾಣದಲ್ಲಿದ್ದ ಇತರ ಜನರು ಸಹ ಸಹಾಯ ಮಾಡಲು ಓಡಿದರು. ನಂತರ ವ್ಯಕ್ತಿಯನ್ನು ಪ್ಲಾಟ್​ಫಾರಂ ಮೇಲೆ ಎಳೆದುಕೊಂಡು ಹೋಗಿದ್ದಾರೆ. ಮಹಿಳಾ ಪೇದೆಯನ್ನು ಸುಮತಿ ಎಂದು ಗುರುತಿಸಲಾಗಿದೆ.

ಮತ್ತಷ್ಟು ಓದಿ: ಮೆಟ್ರೋಗಾಗಿ ಕಾಯುತ್ತಾ ನಿಲ್ಲುವ ಮಹಿಳೆಯರೇ ಹುಷಾರ್! ಈ ವಿಡಿಯೋ ನೋಡಿ

ಯುವಕ ತನ್ನ ಪ್ರಾಣವನ್ನು ಏಕೆ ಕೊನೆಗಾಣಿಸಲು ಯತ್ನಿಸಿದ್ದಾನೆ ಎಂಬುದು ಇನ್ನೂ ತಿಳಿದುಬಂದಿಲ್ಲ. ಈ ನಡುವೆ ಟ್ವಿಟರ್ ಬಳಕೆದಾರರು ಮಹಿಳಾ ಪೇದೆ ತೋರಿದ ಧೈರ್ಯವನ್ನು ಕೊಂಡಾಡುತ್ತಿದ್ದಾರೆ.

ಬಳಕೆದಾರರು ಆಕೆಯನ್ನು ದೇವತೆಗೆ ಹೋಲಿಸಿದ್ದಾರೆ, ಶ್ಲಾಘನೀಯ ಪ್ರಯತ್ನ. ನೀನು ಪೊಲೀಸ್ ಪೇದೆಯ ರೂಪದಲ್ಲಿರುವ ನಿಜವಾದ ದೇವತೆ ಎಂದಿದ್ದಾರೆ.

ರೈಲಿನಿಂದ ಇಳಿಯುವಾಗ ಸಾಕಷ್ಟು ಮಂದಿ ಜಾರಿ ಬಿದ್ದು ಇನ್ನೇನು ರೈಲಿನ ಕೆಳಗೆ ಸಿಲುಕುತ್ತಾರೆ ಎನ್ನುವ ಸಮಯದಲ್ಲಿ ಅವರನ್ನು ರಕ್ಷಿಸುವ ಸಾಕಷ್ಟು ವಿಡಿಯೋಗಳನ್ನು ನಾವು ನೋಡಿರಬಹುದು.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್