AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ರೈಲು ಬರುವುದ ನೋಡಿ ಆತ್ಮಹತ್ಯೆ ಮಾಡಿಕೊಳ್ಳಲು ಹಳಿ ಮೇಲೆ ಮಲಗಿದ ವ್ಯಕ್ತಿಯನ್ನು ರಕ್ಷಿಸಿದ ಮಹಿಳಾ ಕಾನ್​ಸ್ಟೆಬಲ್

ರೈಲು ಬರುವುದನ್ನು ನೋಡಿ ಆತ್ಮಹತ್ಯೆ ಮಾಡಿಕೊಳ್ಳಲೆಂದು ರೈಲ್ವೆ ಹಳಿ ಮೇಲೆ ಹೋಗಿ ಮಲಗಿದ ವ್ಯಕ್ತಿಯನ್ನು ಮಹಿಳಾ ಕಾನ್​ಸ್ಟೆಬಲ್​ ರಕ್ಷಿಸಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ.

Viral Video: ರೈಲು ಬರುವುದ ನೋಡಿ ಆತ್ಮಹತ್ಯೆ ಮಾಡಿಕೊಳ್ಳಲು ಹಳಿ ಮೇಲೆ ಮಲಗಿದ ವ್ಯಕ್ತಿಯನ್ನು ರಕ್ಷಿಸಿದ ಮಹಿಳಾ ಕಾನ್​ಸ್ಟೆಬಲ್
ರೈಲುImage Credit source: News 9
ನಯನಾ ರಾಜೀವ್
|

Updated on: Jun 12, 2023 | 2:25 PM

Share

ರೈಲು ಬರುವುದನ್ನು ನೋಡಿ ಆತ್ಮಹತ್ಯೆ ಮಾಡಿಕೊಳ್ಳಲೆಂದು ರೈಲ್ವೆ ಹಳಿ ಮೇಲೆ ಹೋಗಿ ಮಲಗಿದ ವ್ಯಕ್ತಿಯನ್ನು ಮಹಿಳಾ ಕಾನ್​ಸ್ಟೆಬಲ್​ ರಕ್ಷಿಸಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಒಬ್ಬ ವ್ಯಕ್ತಿ ರೈಲ್ವೆ ಪ್ಲಾಟ್‌ಫಾರ್ಮ್‌ನಲ್ಲಿ ಒಬ್ಬಂಟಿಯಾಗಿ ನಿಂತಿರುವುದು ಕಂಡುಬರುತ್ತದೆ. ತನ್ನ ಸುತ್ತಲೂ ಯಾರಾದರೂ ಇದ್ದಾರೆಯೇ ಎಂದು ಸುತ್ತಲೂ ಒಮ್ಮೆ ನೋಡುತ್ತಾನೆ, ರೈಲು ಬರುವ ಸಮಯವಾದ ಕೂಡಲೇ ಹಳಿ ಮೇಲೆ ಹಾರಿ ಹಳಿಯ ಮೇಲೆ ತಲೆ ಇಟ್ಟು ಮಲಗುತ್ತಾನೆ. ರೈಲ್ವೆ ಸಂರಕ್ಷಣಾ ಪಡೆ (ಆರ್‌ಪಿಎಫ್) ಮಹಿಳಾ ಕಾನ್‌ಸ್ಟೆಬಲ್ ಒಬ್ಬರು ತನ್ನ ಪ್ರಾಣವನ್ನು ಲೆಕ್ಕಿಸದೆ ರೈಲ್ವೆ ಹಳಿ ಮೇಲೆ ಹಾರಿ ಆತನ ಪ್ರಾಣವನ್ನು ರಕ್ಷಿಸಿದ್ದಾರೆ.

ರೈಲು ಬರುವ ಮುನ್ನವೇ ಆತನನ್ನು ಬೇರೆ ಹಳಿಯ ಮೇಲೆ ಕರೆತರುವಲ್ಲಿ ಯಶಸ್ವಿಯಾಗಿದ್ದಾರೆ. ಕಾನ್ಸ್‌ಟೇಬಲ್ ವ್ಯಕ್ತಿಗೆ ಸಹಾಯ ಮಾಡುತ್ತಿರುವುದನ್ನು ಕಂಡು, ರೈಲ್ವೇ ನಿಲ್ದಾಣದಲ್ಲಿದ್ದ ಇತರ ಜನರು ಸಹ ಸಹಾಯ ಮಾಡಲು ಓಡಿದರು. ನಂತರ ವ್ಯಕ್ತಿಯನ್ನು ಪ್ಲಾಟ್​ಫಾರಂ ಮೇಲೆ ಎಳೆದುಕೊಂಡು ಹೋಗಿದ್ದಾರೆ. ಮಹಿಳಾ ಪೇದೆಯನ್ನು ಸುಮತಿ ಎಂದು ಗುರುತಿಸಲಾಗಿದೆ.

ಮತ್ತಷ್ಟು ಓದಿ: ಮೆಟ್ರೋಗಾಗಿ ಕಾಯುತ್ತಾ ನಿಲ್ಲುವ ಮಹಿಳೆಯರೇ ಹುಷಾರ್! ಈ ವಿಡಿಯೋ ನೋಡಿ

ಯುವಕ ತನ್ನ ಪ್ರಾಣವನ್ನು ಏಕೆ ಕೊನೆಗಾಣಿಸಲು ಯತ್ನಿಸಿದ್ದಾನೆ ಎಂಬುದು ಇನ್ನೂ ತಿಳಿದುಬಂದಿಲ್ಲ. ಈ ನಡುವೆ ಟ್ವಿಟರ್ ಬಳಕೆದಾರರು ಮಹಿಳಾ ಪೇದೆ ತೋರಿದ ಧೈರ್ಯವನ್ನು ಕೊಂಡಾಡುತ್ತಿದ್ದಾರೆ.

ಬಳಕೆದಾರರು ಆಕೆಯನ್ನು ದೇವತೆಗೆ ಹೋಲಿಸಿದ್ದಾರೆ, ಶ್ಲಾಘನೀಯ ಪ್ರಯತ್ನ. ನೀನು ಪೊಲೀಸ್ ಪೇದೆಯ ರೂಪದಲ್ಲಿರುವ ನಿಜವಾದ ದೇವತೆ ಎಂದಿದ್ದಾರೆ.

ರೈಲಿನಿಂದ ಇಳಿಯುವಾಗ ಸಾಕಷ್ಟು ಮಂದಿ ಜಾರಿ ಬಿದ್ದು ಇನ್ನೇನು ರೈಲಿನ ಕೆಳಗೆ ಸಿಲುಕುತ್ತಾರೆ ಎನ್ನುವ ಸಮಯದಲ್ಲಿ ಅವರನ್ನು ರಕ್ಷಿಸುವ ಸಾಕಷ್ಟು ವಿಡಿಯೋಗಳನ್ನು ನಾವು ನೋಡಿರಬಹುದು.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು