Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ರೈಲು ಬರುವುದ ನೋಡಿ ಆತ್ಮಹತ್ಯೆ ಮಾಡಿಕೊಳ್ಳಲು ಹಳಿ ಮೇಲೆ ಮಲಗಿದ ವ್ಯಕ್ತಿಯನ್ನು ರಕ್ಷಿಸಿದ ಮಹಿಳಾ ಕಾನ್​ಸ್ಟೆಬಲ್

ರೈಲು ಬರುವುದನ್ನು ನೋಡಿ ಆತ್ಮಹತ್ಯೆ ಮಾಡಿಕೊಳ್ಳಲೆಂದು ರೈಲ್ವೆ ಹಳಿ ಮೇಲೆ ಹೋಗಿ ಮಲಗಿದ ವ್ಯಕ್ತಿಯನ್ನು ಮಹಿಳಾ ಕಾನ್​ಸ್ಟೆಬಲ್​ ರಕ್ಷಿಸಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ.

Viral Video: ರೈಲು ಬರುವುದ ನೋಡಿ ಆತ್ಮಹತ್ಯೆ ಮಾಡಿಕೊಳ್ಳಲು ಹಳಿ ಮೇಲೆ ಮಲಗಿದ ವ್ಯಕ್ತಿಯನ್ನು ರಕ್ಷಿಸಿದ ಮಹಿಳಾ ಕಾನ್​ಸ್ಟೆಬಲ್
ರೈಲುImage Credit source: News 9
Follow us
ನಯನಾ ರಾಜೀವ್
|

Updated on: Jun 12, 2023 | 2:25 PM

ರೈಲು ಬರುವುದನ್ನು ನೋಡಿ ಆತ್ಮಹತ್ಯೆ ಮಾಡಿಕೊಳ್ಳಲೆಂದು ರೈಲ್ವೆ ಹಳಿ ಮೇಲೆ ಹೋಗಿ ಮಲಗಿದ ವ್ಯಕ್ತಿಯನ್ನು ಮಹಿಳಾ ಕಾನ್​ಸ್ಟೆಬಲ್​ ರಕ್ಷಿಸಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಒಬ್ಬ ವ್ಯಕ್ತಿ ರೈಲ್ವೆ ಪ್ಲಾಟ್‌ಫಾರ್ಮ್‌ನಲ್ಲಿ ಒಬ್ಬಂಟಿಯಾಗಿ ನಿಂತಿರುವುದು ಕಂಡುಬರುತ್ತದೆ. ತನ್ನ ಸುತ್ತಲೂ ಯಾರಾದರೂ ಇದ್ದಾರೆಯೇ ಎಂದು ಸುತ್ತಲೂ ಒಮ್ಮೆ ನೋಡುತ್ತಾನೆ, ರೈಲು ಬರುವ ಸಮಯವಾದ ಕೂಡಲೇ ಹಳಿ ಮೇಲೆ ಹಾರಿ ಹಳಿಯ ಮೇಲೆ ತಲೆ ಇಟ್ಟು ಮಲಗುತ್ತಾನೆ. ರೈಲ್ವೆ ಸಂರಕ್ಷಣಾ ಪಡೆ (ಆರ್‌ಪಿಎಫ್) ಮಹಿಳಾ ಕಾನ್‌ಸ್ಟೆಬಲ್ ಒಬ್ಬರು ತನ್ನ ಪ್ರಾಣವನ್ನು ಲೆಕ್ಕಿಸದೆ ರೈಲ್ವೆ ಹಳಿ ಮೇಲೆ ಹಾರಿ ಆತನ ಪ್ರಾಣವನ್ನು ರಕ್ಷಿಸಿದ್ದಾರೆ.

ರೈಲು ಬರುವ ಮುನ್ನವೇ ಆತನನ್ನು ಬೇರೆ ಹಳಿಯ ಮೇಲೆ ಕರೆತರುವಲ್ಲಿ ಯಶಸ್ವಿಯಾಗಿದ್ದಾರೆ. ಕಾನ್ಸ್‌ಟೇಬಲ್ ವ್ಯಕ್ತಿಗೆ ಸಹಾಯ ಮಾಡುತ್ತಿರುವುದನ್ನು ಕಂಡು, ರೈಲ್ವೇ ನಿಲ್ದಾಣದಲ್ಲಿದ್ದ ಇತರ ಜನರು ಸಹ ಸಹಾಯ ಮಾಡಲು ಓಡಿದರು. ನಂತರ ವ್ಯಕ್ತಿಯನ್ನು ಪ್ಲಾಟ್​ಫಾರಂ ಮೇಲೆ ಎಳೆದುಕೊಂಡು ಹೋಗಿದ್ದಾರೆ. ಮಹಿಳಾ ಪೇದೆಯನ್ನು ಸುಮತಿ ಎಂದು ಗುರುತಿಸಲಾಗಿದೆ.

ಮತ್ತಷ್ಟು ಓದಿ: ಮೆಟ್ರೋಗಾಗಿ ಕಾಯುತ್ತಾ ನಿಲ್ಲುವ ಮಹಿಳೆಯರೇ ಹುಷಾರ್! ಈ ವಿಡಿಯೋ ನೋಡಿ

ಯುವಕ ತನ್ನ ಪ್ರಾಣವನ್ನು ಏಕೆ ಕೊನೆಗಾಣಿಸಲು ಯತ್ನಿಸಿದ್ದಾನೆ ಎಂಬುದು ಇನ್ನೂ ತಿಳಿದುಬಂದಿಲ್ಲ. ಈ ನಡುವೆ ಟ್ವಿಟರ್ ಬಳಕೆದಾರರು ಮಹಿಳಾ ಪೇದೆ ತೋರಿದ ಧೈರ್ಯವನ್ನು ಕೊಂಡಾಡುತ್ತಿದ್ದಾರೆ.

ಬಳಕೆದಾರರು ಆಕೆಯನ್ನು ದೇವತೆಗೆ ಹೋಲಿಸಿದ್ದಾರೆ, ಶ್ಲಾಘನೀಯ ಪ್ರಯತ್ನ. ನೀನು ಪೊಲೀಸ್ ಪೇದೆಯ ರೂಪದಲ್ಲಿರುವ ನಿಜವಾದ ದೇವತೆ ಎಂದಿದ್ದಾರೆ.

ರೈಲಿನಿಂದ ಇಳಿಯುವಾಗ ಸಾಕಷ್ಟು ಮಂದಿ ಜಾರಿ ಬಿದ್ದು ಇನ್ನೇನು ರೈಲಿನ ಕೆಳಗೆ ಸಿಲುಕುತ್ತಾರೆ ಎನ್ನುವ ಸಮಯದಲ್ಲಿ ಅವರನ್ನು ರಕ್ಷಿಸುವ ಸಾಕಷ್ಟು ವಿಡಿಯೋಗಳನ್ನು ನಾವು ನೋಡಿರಬಹುದು.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..