AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಮನನ್ನೇ ಕೈಯಲ್ಲಿ ಹಿಡಿದುಕೊಂಡ ವ್ಯಕ್ತಿ, ನೀವು ತುಂಬಾ ಲಕ್ಕಿ ಎಂದ ನೆಟ್ಟಿಗರು

ಫಿಲಿಪೈನ್ಸ್ ಕಡಲತೀರದಲ್ಲಿ ವ್ಯಕ್ತಿಯೊಬ್ಬ ಮಾರಕ ನೀಲಿ ರಿಂಗ್ ಆಕ್ಟೋಪಸ್‌ನೊಂದಿಗೆ ಆಟವಾಡಿದ ವಿಡಿಯೋ ವೈರಲ್ ಆಗಿದೆ. ತಾನು ಆಟವಾಡುತ್ತಿರುವುದು ವಿಶ್ವದ ಅತಿ ವಿಷಕಾರಿ ಜೀವಿಗಳಲ್ಲಿ ಒಂದೆಂದು ತಿಳಿಯದೆ, ಆ ವ್ಯಕ್ತಿ ಅಪಾಯಕ್ಕೆ ಆಹ್ವಾನ ನೀಡಿದ್ದಾರೆ. ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ನೆಟ್ಟಿಗರು ಆತನ ಅದೃಷ್ಟವನ್ನು ಹೊಗಳಿದ್ದಾರೆ.

ಯಮನನ್ನೇ ಕೈಯಲ್ಲಿ ಹಿಡಿದುಕೊಂಡ ವ್ಯಕ್ತಿ, ನೀವು ತುಂಬಾ ಲಕ್ಕಿ ಎಂದ ನೆಟ್ಟಿಗರು
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Dec 17, 2025 | 5:18 PM

Share

ಫಿಲಿಪೈನ್ಸ್‌ನ ಕಡಲತೀರದಲ್ಲಿ ವ್ಯಕ್ತಿಯೊಬ್ಬರು ಮರಿ ಆಕ್ಟೋಪಸ್ (Octopus) ಜತೆಗೆ ಆಟವಾಡುತ್ತಿರುವ ವಿಡಿಯೋ ವೈರಲ್​​ ಆಗಿದೆ. ಮಾರಕ ಆಕ್ಟೋಪಸ್​​ ಜತೆಗೆ ಆಟವಾಡುವುದು ಅಪಾಯಕ್ಕೆ ಆಹ್ವಾನ ಕೊಟ್ಟಂತೆ, ಆದರೆ ಈ ಬ್ರಿಟಿಷ್​​ ವ್ಯಕ್ತಿ ಆಕ್ಟೋಪಸ್ ಜತೆಗೆ ಖುಷಿಯಿಂದ ಆಟವಾಡಿದ್ದಾರೆ. ಇದೀಗ ಈ ಬಗ್ಗೆ ವಿಡಿಯೋವೊಂದು ವೈರಲ್​​ ಆಗಿದೆ. ಈ ವಿಡಿಯೋಗೆ ಮನೆಯಿಂದ 11,000 ಕಿಮೀ ದೂರದಲ್ಲಿರುವ ಕಡಲ ತೀರಕ್ಕೆ ಒಬ್ಬಂಟಿಯಾಗಿ ಹೋಗಿ, ಜಗತ್ತನ್ನು ಅನ್ವೇಷಿಸುತ್ತೇನೆ ಎಂದು ಅಪಾಯಗಳನ್ನು ಮೈಮೇಲೆ ಎಳೆದುಕೊಳ್ಳುವುದು ಎಂದರೆ ಇದೆ ಇರಬೇಕು ಎಂದು ಶೀರ್ಷಿಕೆಯೊಂದನ್ನು ಬರೆದುಕೊಂಡಿದ್ದಾರೆ. ಈ ಪೋಸ್ಟ್​​ನಲ್ಲಿ ಆ ವ್ಯಕ್ತಿ ನನಗೆ ಅದು ಆಕ್ಟೋಪಸ್ ಎಂಬುದು ಸಂಪೂರ್ಣವಾಗಿ ತಿಳಿದಿರಲಿಲ್ಲ ಎಂದು ಹೇಳಿದ್ದಾರೆ.

ಡೆಕಾಂಟರ್‌ಮ್ಯಾನ್ ಎಂಬ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲಿ ಹೀಗೆ ಹೇಳಲಾಗಿದೆ. ನೀರಿನಲ್ಲಿ ಕೈಯಿಟ್ಟು ಸಣ್ಣ ಆಕ್ಟೋಪಸ್ ಅನ್ನು ಹಿಡಿದಿರುವುದನ್ನು ವೀಡಿಯೊ ತೋರಿಸುತ್ತದೆ. ಇದು ನೀಲಿ ಬಣ್ಣದ ಆಕ್ಟೋಪಸ್ ಎಂದು ಹೇಳಲಾಗಿದೆ. ಇದು ಆಸ್ಟ್ರೇಲಿಯಾ ಮತ್ತು ಇತರರಿಗೆ ವಿಶ್ವದ ಮೊದಲ ,  ಎರಡನೇ,  ಮೂರನೇ ಅತ್ಯಂತ ವಿಷಕಾರಿ ಪ್ರಾಣಿ ಎಂದು ಹೇಳಲಾಗಿದೆ.

ಇದನ್ನೂ ಓದಿ: ಹೆಲ್ಮೆಟ್ ಧರಿಸದ ಬೈಕ್ ಸವಾರನನ್ನು ತಡೆದು ನಿಲ್ಲಿಸಿದ ಪೊಲೀಸರು, ಈ ವ್ಯಕ್ತಿ ನೀಡಿದ ಉತ್ತರಕ್ಕೆ ಪೊಲೀಸರೇ ಶಾಕ್

ಇಲ್ಲಿದೆ ನೋಡಿ ಸ್ಟೋರಿ:

ಈ ವಿಡಿಯೋವನ್ನು ಸೋಶಿಯಲ್​​ ಮೀಡಿಯಾದಲ್ಲಿ ಹಂಚಿಕೊಂಡ ನಂತರ ನೆಟ್ಟಿಗರು ಪ್ರತಿಕ್ರಿಯೆ ನೀಡಿದ್ದಾರೆ. ಒಂದು ವೇಳೆ, ಆ ಜೀವಿ ಕೋಪಗೊಂಡಿದ್ದರೆ ಆ ವ್ಯಕ್ತಿ ಜೀವಂತ ಇರುತ್ತಿರಲಿಲ್ಲ ಎಂದು ಒಬ್ಬರು ಹೇಳಿದ್ದಾರೆ. ನೀವು ತುಂಬಾ ಅದೃಷ್ಟವಂತರು. ಒಂದು ವೇಳೆ ಅದರಿಂದ ಸತ್ತಿದ್ದರೆ ಖಂಡಿತ ಯಾರಿಗೂ ಗೊತ್ತಾಗುತ್ತಿರಲಲ್ಲ ಎಂದು ಮತ್ತೊಬ್ಬರು ಹೇಳಿದ್ದಾರೆ. ಇನ್ನು ಕೇಲವು ನೆಟ್ಟಿಗರು ಯಮ ರಜೆ ಹಾಕಿರಬೇಕು ಎಂದು ಹೇಳಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​​ ಮಾಡಿದ್ದಾರೆ.

Follow Us
ಬಿಡದಿ ಟೌನ್‌ಶಿಪ್ ಯೋಜನೆ ಪರ ರೈತರಿಂದ ಭೂ ಪರಿಹಾರಕ್ಕೆ ಅರ್ಜಿ ಸಲ್ಲಿಕೆ
ಬಿಡದಿ ಟೌನ್‌ಶಿಪ್ ಯೋಜನೆ ಪರ ರೈತರಿಂದ ಭೂ ಪರಿಹಾರಕ್ಕೆ ಅರ್ಜಿ ಸಲ್ಲಿಕೆ
ಉಳ್ಳಾಲ ಕಡಲತೀರಕ್ಕೆ ಅಪ್ಪಳಿಸಿದ ಲಕ್ಷಾಂತರ ಬೂತಾಯಿ ಮೀನಿನ ರಾಶಿ
ಉಳ್ಳಾಲ ಕಡಲತೀರಕ್ಕೆ ಅಪ್ಪಳಿಸಿದ ಲಕ್ಷಾಂತರ ಬೂತಾಯಿ ಮೀನಿನ ರಾಶಿ
ಬೀದಿಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವುದು ಸರ್ಕಾರದ ಕರ್ತವ್ಯ
ಬೀದಿಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವುದು ಸರ್ಕಾರದ ಕರ್ತವ್ಯ
ದೇವೇಗೌಡರ ಪತ್ನಿ ಚೆನ್ನಮ್ಮ ಸ್ಥಿತಿ ಗಂಭೀರ: ಆಸ್ಪತ್ರೆಗೆ ಧಾವಿಸಿದ HDK
ದೇವೇಗೌಡರ ಪತ್ನಿ ಚೆನ್ನಮ್ಮ ಸ್ಥಿತಿ ಗಂಭೀರ: ಆಸ್ಪತ್ರೆಗೆ ಧಾವಿಸಿದ HDK
SIR ಮುಗಿದ ತಕ್ಷಣ ಜಿಬಿಎ ಎಲೆಕ್ಷನ್ ಎಂದ ಕೃಷ್ಣಬೈರೇಗೌಡ
SIR ಮುಗಿದ ತಕ್ಷಣ ಜಿಬಿಎ ಎಲೆಕ್ಷನ್ ಎಂದ ಕೃಷ್ಣಬೈರೇಗೌಡ
ಡಿಕೆಶಿ ಸಚಿವ ಸಂಪುಟ ವಿಸ್ತರಣೆ: ಹೊಸ ಮುಖಗಳಿಗೆ ಹೈಕಮಾಂಡ್​​ ಮಣೆ?
ಡಿಕೆಶಿ ಸಚಿವ ಸಂಪುಟ ವಿಸ್ತರಣೆ: ಹೊಸ ಮುಖಗಳಿಗೆ ಹೈಕಮಾಂಡ್​​ ಮಣೆ?
ಮುಗಿಲು ಮುಟ್ಟಿದ ಲಾವಣ್ಯ ತಾಯಿಯ ಆಕ್ರಂದನ
ಮುಗಿಲು ಮುಟ್ಟಿದ ಲಾವಣ್ಯ ತಾಯಿಯ ಆಕ್ರಂದನ
ಚಿತ್ರೀಕರಣದಲ್ಲಿ ಆದ ಕಷ್ಟಗಳನ್ನು ವಿವರಿಸಿದ ನಟ ತಬಲಾ ನಾಣಿ: ವಿಡಿಯೋ
ಚಿತ್ರೀಕರಣದಲ್ಲಿ ಆದ ಕಷ್ಟಗಳನ್ನು ವಿವರಿಸಿದ ನಟ ತಬಲಾ ನಾಣಿ: ವಿಡಿಯೋ
ಅರಬ್ಬಿ ಸಮುದ್ರದಲ್ಲಿ ಮಗುಚಿದ ನಾಡದೋಣಿ: ನಾಲ್ವರು ಮೀನುಗಾರರು ಪಾರು
ಅರಬ್ಬಿ ಸಮುದ್ರದಲ್ಲಿ ಮಗುಚಿದ ನಾಡದೋಣಿ: ನಾಲ್ವರು ಮೀನುಗಾರರು ಪಾರು
ಸದ್ಯಕ್ಕಿಲ್ಲ ಜಿಬಿಎ ಚುನಾವಣೆ: ಡಿ. 31ರ ಡೆಡ್​ಲೈನ್ ನಿಗದಿಪಡಿಸಿದ ಸುಪ್ರೀಂ
ಸದ್ಯಕ್ಕಿಲ್ಲ ಜಿಬಿಎ ಚುನಾವಣೆ: ಡಿ. 31ರ ಡೆಡ್​ಲೈನ್ ನಿಗದಿಪಡಿಸಿದ ಸುಪ್ರೀಂ