AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಮನನ್ನೇ ಕೈಯಲ್ಲಿ ಹಿಡಿದುಕೊಂಡ ವ್ಯಕ್ತಿ, ನೀವು ತುಂಬಾ ಲಕ್ಕಿ ಎಂದ ನೆಟ್ಟಿಗರು

ಫಿಲಿಪೈನ್ಸ್ ಕಡಲತೀರದಲ್ಲಿ ವ್ಯಕ್ತಿಯೊಬ್ಬ ಮಾರಕ ನೀಲಿ ರಿಂಗ್ ಆಕ್ಟೋಪಸ್‌ನೊಂದಿಗೆ ಆಟವಾಡಿದ ವಿಡಿಯೋ ವೈರಲ್ ಆಗಿದೆ. ತಾನು ಆಟವಾಡುತ್ತಿರುವುದು ವಿಶ್ವದ ಅತಿ ವಿಷಕಾರಿ ಜೀವಿಗಳಲ್ಲಿ ಒಂದೆಂದು ತಿಳಿಯದೆ, ಆ ವ್ಯಕ್ತಿ ಅಪಾಯಕ್ಕೆ ಆಹ್ವಾನ ನೀಡಿದ್ದಾರೆ. ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ನೆಟ್ಟಿಗರು ಆತನ ಅದೃಷ್ಟವನ್ನು ಹೊಗಳಿದ್ದಾರೆ.

ಯಮನನ್ನೇ ಕೈಯಲ್ಲಿ ಹಿಡಿದುಕೊಂಡ ವ್ಯಕ್ತಿ, ನೀವು ತುಂಬಾ ಲಕ್ಕಿ ಎಂದ ನೆಟ್ಟಿಗರು
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Dec 17, 2025 | 5:18 PM

Share

ಫಿಲಿಪೈನ್ಸ್‌ನ ಕಡಲತೀರದಲ್ಲಿ ವ್ಯಕ್ತಿಯೊಬ್ಬರು ಮರಿ ಆಕ್ಟೋಪಸ್ (Octopus) ಜತೆಗೆ ಆಟವಾಡುತ್ತಿರುವ ವಿಡಿಯೋ ವೈರಲ್​​ ಆಗಿದೆ. ಮಾರಕ ಆಕ್ಟೋಪಸ್​​ ಜತೆಗೆ ಆಟವಾಡುವುದು ಅಪಾಯಕ್ಕೆ ಆಹ್ವಾನ ಕೊಟ್ಟಂತೆ, ಆದರೆ ಈ ಬ್ರಿಟಿಷ್​​ ವ್ಯಕ್ತಿ ಆಕ್ಟೋಪಸ್ ಜತೆಗೆ ಖುಷಿಯಿಂದ ಆಟವಾಡಿದ್ದಾರೆ. ಇದೀಗ ಈ ಬಗ್ಗೆ ವಿಡಿಯೋವೊಂದು ವೈರಲ್​​ ಆಗಿದೆ. ಈ ವಿಡಿಯೋಗೆ ಮನೆಯಿಂದ 11,000 ಕಿಮೀ ದೂರದಲ್ಲಿರುವ ಕಡಲ ತೀರಕ್ಕೆ ಒಬ್ಬಂಟಿಯಾಗಿ ಹೋಗಿ, ಜಗತ್ತನ್ನು ಅನ್ವೇಷಿಸುತ್ತೇನೆ ಎಂದು ಅಪಾಯಗಳನ್ನು ಮೈಮೇಲೆ ಎಳೆದುಕೊಳ್ಳುವುದು ಎಂದರೆ ಇದೆ ಇರಬೇಕು ಎಂದು ಶೀರ್ಷಿಕೆಯೊಂದನ್ನು ಬರೆದುಕೊಂಡಿದ್ದಾರೆ. ಈ ಪೋಸ್ಟ್​​ನಲ್ಲಿ ಆ ವ್ಯಕ್ತಿ ನನಗೆ ಅದು ಆಕ್ಟೋಪಸ್ ಎಂಬುದು ಸಂಪೂರ್ಣವಾಗಿ ತಿಳಿದಿರಲಿಲ್ಲ ಎಂದು ಹೇಳಿದ್ದಾರೆ.

ಡೆಕಾಂಟರ್‌ಮ್ಯಾನ್ ಎಂಬ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲಿ ಹೀಗೆ ಹೇಳಲಾಗಿದೆ. ನೀರಿನಲ್ಲಿ ಕೈಯಿಟ್ಟು ಸಣ್ಣ ಆಕ್ಟೋಪಸ್ ಅನ್ನು ಹಿಡಿದಿರುವುದನ್ನು ವೀಡಿಯೊ ತೋರಿಸುತ್ತದೆ. ಇದು ನೀಲಿ ಬಣ್ಣದ ಆಕ್ಟೋಪಸ್ ಎಂದು ಹೇಳಲಾಗಿದೆ. ಇದು ಆಸ್ಟ್ರೇಲಿಯಾ ಮತ್ತು ಇತರರಿಗೆ ವಿಶ್ವದ ಮೊದಲ ,  ಎರಡನೇ,  ಮೂರನೇ ಅತ್ಯಂತ ವಿಷಕಾರಿ ಪ್ರಾಣಿ ಎಂದು ಹೇಳಲಾಗಿದೆ.

ಇದನ್ನೂ ಓದಿ: ಹೆಲ್ಮೆಟ್ ಧರಿಸದ ಬೈಕ್ ಸವಾರನನ್ನು ತಡೆದು ನಿಲ್ಲಿಸಿದ ಪೊಲೀಸರು, ಈ ವ್ಯಕ್ತಿ ನೀಡಿದ ಉತ್ತರಕ್ಕೆ ಪೊಲೀಸರೇ ಶಾಕ್

ಇಲ್ಲಿದೆ ನೋಡಿ ಸ್ಟೋರಿ:

ಈ ವಿಡಿಯೋವನ್ನು ಸೋಶಿಯಲ್​​ ಮೀಡಿಯಾದಲ್ಲಿ ಹಂಚಿಕೊಂಡ ನಂತರ ನೆಟ್ಟಿಗರು ಪ್ರತಿಕ್ರಿಯೆ ನೀಡಿದ್ದಾರೆ. ಒಂದು ವೇಳೆ, ಆ ಜೀವಿ ಕೋಪಗೊಂಡಿದ್ದರೆ ಆ ವ್ಯಕ್ತಿ ಜೀವಂತ ಇರುತ್ತಿರಲಿಲ್ಲ ಎಂದು ಒಬ್ಬರು ಹೇಳಿದ್ದಾರೆ. ನೀವು ತುಂಬಾ ಅದೃಷ್ಟವಂತರು. ಒಂದು ವೇಳೆ ಅದರಿಂದ ಸತ್ತಿದ್ದರೆ ಖಂಡಿತ ಯಾರಿಗೂ ಗೊತ್ತಾಗುತ್ತಿರಲಲ್ಲ ಎಂದು ಮತ್ತೊಬ್ಬರು ಹೇಳಿದ್ದಾರೆ. ಇನ್ನು ಕೇಲವು ನೆಟ್ಟಿಗರು ಯಮ ರಜೆ ಹಾಕಿರಬೇಕು ಎಂದು ಹೇಳಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​​ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ