Viral Video: ಸ್ಕೂಟಿಯಲ್ಲಿ ಕೂರಲೂ ಜಾಗವಿಲ್ಲದಷ್ಟು ಸಾಮಾನು ತುಂಬಿಕೊಂಡು ಹೊರಟ ಯುವಕ; ವಿಡಿಯೋ ನೋಡಿದ ಪೊಲೀಸರು ಮಾಡಿದ್ದೇನು?

ಈ ವಿಡಿಯೋವನ್ನು ರೀಟ್ವೀಟ್ ಮಾಡಿರುವ ತೆಲಂಗಾಣ ಪೊಲೀಸರು ನಿಮ್ಮ ಪ್ರಾಣ ಮಾತ್ರವಲ್ಲದೆ ಬೇರೆಯವರ ಜೀವದ ಜೊತೆಗೂ ಆಟವಾಡಬೇಡಿ ಎಂದು ಟ್ವೀಟ್ ಮಾಡಿದ್ದಾರೆ.

Viral Video: ಸ್ಕೂಟಿಯಲ್ಲಿ ಕೂರಲೂ ಜಾಗವಿಲ್ಲದಷ್ಟು ಸಾಮಾನು ತುಂಬಿಕೊಂಡು ಹೊರಟ ಯುವಕ; ವಿಡಿಯೋ ನೋಡಿದ ಪೊಲೀಸರು ಮಾಡಿದ್ದೇನು?
ಓವರ್​ ಲೋಡ್ ಆಗಿರುವ ಸ್ಕೂಟಿ ಚಲಾಯಿಸುತ್ತಿರುವ ಯುವಕImage Credit source: NDTV
Follow us
| Updated By: ಸುಷ್ಮಾ ಚಕ್ರೆ

Updated on: Jun 22, 2022 | 4:08 PM

ಬೈಕ್ ಚಲಾಯಿಸುವಾಗ ಇನ್ನಿಲ್ಲದ ರೀತಿಯ ಸ್ಟಂಟ್​​ಗಳು, ಸಾಹಸಗಳನ್ನು ಮಾಡುವುದನ್ನು ನಾವು ನೋಡುತ್ತಿರುತ್ತೇವೆ. ವೀಲಿಂಗ್ (Wheeling) ಮಾಡಲು ಹೋಗಿ ಪ್ರಾಣ ಕಳೆದುಕೊಂಡ ಉದಾಹರಣೆಗಳೂ ಇವೆ. ಇಲ್ಲೊಬ್ಬ ಯುವಕ ತನ್ನ ಸ್ಕೂಟಿಯಲ್ಲಿ ಒಂದು ಆಟೋದಲ್ಲಿ ತುಂಬುವಷ್ಟು ಸಾಮಾನುಗಳನ್ನು ಸ್ಕೂಟಿಯಲ್ಲಿ ತುಂಬಿಕೊಂಡು, ತನಗೇ ಕೂರಲು ಜಾಗವಿಲ್ಲದಿದ್ದರೂ ಸೀಟಿನ ತುದಿಯಲ್ಲಿ ಕುಳಿತುಕೊಂಡ ಹೈವೇಯಲ್ಲಿ ಸಾಗುತ್ತಿರುವ ವಿಡಿಯೋವೊಂದು ಭಾರೀ ವೈರಲ್ (Video Viral) ಆಗಿದೆ. ಈ ಸ್ಕೂಟಿ ಚಾಲಕನ ಸಾಹಸಕ್ಕೆ ಹಲವರು ತಮಾಷೆ, ಟ್ರೋಲ್ ಮೂಲಕ ಪ್ರತಿಕ್ರಿಯಿಸಿದ್ದಾರೆ. ಆದರೆ, ಈ ವಿಡಿಯೋವನ್ನು ಗಂಭೀರವಾಗಿ ಪರಿಗಣಿಸಿರುವ ತೆಲಂಗಾಣ ಪೊಲೀಸರು (Telangana Police) ಟ್ವಿಟ್ಟರ್​​ನಲ್ಲಿ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.

ಅಪಾಯಕಾರಿಯಾಗಿ ಸ್ಕೂಟಿಯಲ್ಲಿ ಸಾಮಾನುಗಳನ್ನು ತುಂಬಿಕೊಂಡು ಹಿಂದಿನ ಸೀಟಿನ ತುದಿಯಲ್ಲಿ ಕುಳಿತು ಸ್ಕೂಟಿ ಚಲಾಯಿಸುತ್ತಿದ್ದ ಯುವಕನೊಬ್ಬನ ವಿಡಿಯೋ ಸಾಮಾಜಿಕ ಮಾಧ್ಯಮ ಬಳಕೆದಾರರು ಮತ್ತು ತೆಲಂಗಾಣ ಪೊಲೀಸರ ಗಮನ ಸೆಳೆದಿದೆ.

ಈ ವಿಡಿಯೋ ಕ್ಲಿಪ್ ಅನ್ನು ಟ್ವಿಟರ್ ಬಳಕೆದಾರ ಸಾಗರ್ ಎಂಬುವವರು ಹಂಚಿಕೊಂಡಿದ್ದರು. “ನನ್ನ 32GB ಇನ್​ಬಿಲ್ಟ್ ಮೆಮೊರಿ ಇರುವ ಫೋನ್​ನಲ್ಲಿ 31.9 GB ಡೇಟಾ ಫುಲ್ ಆದಾಗ ಇದೇ ರೀತಿ ಆಗುತ್ತದೆ” ಎಂಬ ವ್ಯಂಗ್ಯದ ಕ್ಯಾಪ್ಷನ್ ನೀಡಿ ಅವರು ಈ ವಿಡಿಯೋ ಶೇರ್ ಮಾಡಿಕೊಂಡಿದ್ದರು. ಈ ವಿಡಿಯೋವನ್ನು ರೀಟ್ವೀಟ್ ಮಾಡಿರುವ ತೆಲಂಗಾಣ ಪೊಲೀಸರು ಟ್ವಿಟ್ಟರ್​​ನಲ್ಲೇ ಆ ಸ್ಕೂಟಿ ಚಾಲಕನಿಗೆ ಎಚ್ಚರಿಕೆ ನೀಡುವ ಮೂಲಕ ಬೈಕ್ ಸವಾರರಿಗೆ ಕೂಡ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.

ಒಂದುವೇಳೆ ನಿಮ್ಮ ಮೊಬೈಲ್ ಫೋನ್ ಹಾನಿಗೊಳಗಾದರೂ ಅದರ ಡೇಟಾವನ್ನು ಹಿಂಪಡೆಯಬಹುದು. ಆದರೆ ಜೀವವು ಹಾಗಲ್ಲ. ಒಮ್ಮೆ ನಿಮ್ಮ ಪ್ರಾಣ ಹೋದರೆ ಮತ್ತೆ ವಾಪಾಸ್ ತರಲು ಸಾಧ್ಯವಿಲ್ಲ. ನಿಮ್ಮ ಪ್ರಾಣ ಮಾತ್ರವಲ್ಲದೆ ಬೇರೆಯವರ ಜೀವದ ಜೊತೆಗೂ ಆಟವಾಡಬೇಡಿ ಎಂದು ತೆಲಂಗಾಣ ಪೊಲೀಸರು ಟ್ವೀಟ್ ಮಾಡಿದ್ದಾರೆ.

ಈ ವಿಡಿಯೋ ಈಗಾಗಲೇ ಕ್ಲಿಪ್ 7,18,000ಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದಿದೆ. 24,000ಕ್ಕೂ ಹೆಚ್ಚು ಲೈಕ್​ಗಳನ್ನು ಗಳಿಸಿದೆ.

ಇನ್ನಷ್ಟು ಟ್ರೆಂಡಿಂಗ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ