AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: 300 ಹಾವುಗಳನ್ನು ಗೋಣಿಚೀಲದಲ್ಲಿ ತುಂಬಿ ಕಾಡಲ್ಲಿ ಸುರಿದ ವ್ಯಕ್ತಿ; ಈ ವಿಡಿಯೋ ನೋಡಿ ಶಾಕ್ ಆಗಬೇಡಿ!

Trending Video: ಆ ವ್ಯಕ್ತಿ ತನ್ನ ಕಾಲುಗಳ ಬಳಿಯೇ ಆ ಗೋಣಿ ಚೀಲವನ್ನು ಬಿಚ್ಚಿ, ಅದರೊಳಗಿದ್ದ 300ಕ್ಕೂ ಹೆಚ್ಚು ಹಾವುಗಳನ್ನು ಕೆಳಗೆ ಸುರಿದ ರೀತಿ ನೆಟ್ಟಿಗರನ್ನು ಬಿಚ್ಚಿ ಬೀಳಿಸಿದೆ.

Viral Video: 300 ಹಾವುಗಳನ್ನು ಗೋಣಿಚೀಲದಲ್ಲಿ ತುಂಬಿ ಕಾಡಲ್ಲಿ ಸುರಿದ ವ್ಯಕ್ತಿ; ಈ ವಿಡಿಯೋ ನೋಡಿ ಶಾಕ್ ಆಗಬೇಡಿ!
ಹಾವುಗಳನ್ನು ಚೀಲದಿಂದ ಸುರಿಯುತ್ತಿರುವ ದೃಶ್ಯ
TV9 Web
| Edited By: |

Updated on:Feb 01, 2022 | 8:12 PM

Share

ನವದೆಹಲಿ: ಹಾವುಗಳನ್ನು ಕಂಡರೆ ಬಹುತೇಕ ಜನರಿಗೆ ಭಯ. ಆದರೆ, ಈ ಹಾವನ್ನು ಕೂಡ ಹಾರದ ಹಾಗೆ ಎತ್ತಿ ಹಿಡಿದುಕೊಂಡು, ಜೋಪಾನವಾಗಿ ಕಾಡಿಗೆ ತೆಗೆದುಕೊಂಡು ಹೋಗಿ ಬಿಡುವ ಅದೆಷ್ಟೋ ಜನರಿದ್ದಾರೆ. ನೂರಾರು ಹಾವುಗಳನ್ನು ಏಕಕಾಲಕ್ಕೆ ಕಾಡಿಗೆ ಬಿಡುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ (Social Media) ವೈರಲ್ ಆಗುತ್ತಿದೆ. ಎರಡು ದಿನಗಳ ಹಿಂದೆ ‘memewalanews’ ಎಂಬ ಇನ್​ಸ್ಟಾಗ್ರಾಂ (Instagram) ಬಳಕೆದಾರರು ಈ ವಿಡಿಯೋವನ್ನು ಅಪ್‌ಲೋಡ್ ಮಾಡಿದ್ದಾರೆ. ಆ ವ್ಯಕ್ತಿ ಸುಮಾರು 300 ಹಾವುಗಳನ್ನು ಹಿಡುದ ಕಾಡಿಗೆ ಬಿಟ್ಟಿದ್ದಾನೆ ಎಂದು ಇನ್​ಸ್ಟಾಗ್ರಾಂ ಬಳಕೆದಾರರು ಹೇಳಿದ್ದಾರೆ.

ವೈರಲ್ ಆಗಿರುವ ವಿಡಿಯೋದಲ್ಲಿ ಒಬ್ಬ ವ್ಯಕ್ತಿಯು ಕಾಡಿನಲ್ಲಿ ತನ್ನ ತೋಳುಗಳಲ್ಲಿ ಹಸಿರು ಬಣ್ಣದ ದೊಡ್ಡ ಗೋಣಿಚೀಲವನ್ನು ಹಿಡಿದುಕೊಂಡು ಅದನ್ನು ಕಾಡಿನಲ್ಲಿ ತೆರೆದ ಪ್ರದೇಶಕ್ಕೆ ತರುತ್ತಾನೆ. ಆ ಗೋಣಿ ಚೀಲದಿಂದ ಹೊರಬಂದ ಹಾವುಗಳ ಪ್ರಮಾಣವನ್ನು ನೋಡಿ ನೆಟ್ಟಿಗರು ಬೆಚ್ಚಿ ಬಿದ್ದಿದ್ದಾರೆ. ಆ ವ್ಯಕ್ತಿ ತನ್ನ ಕಾಲುಗಳ ಬಳಿಯೇ ಆ ಗೋಣಿ ಚೀಲವನ್ನು ಬಿಚ್ಚಿ, ಅದರೊಳಗಿದ್ದ 300ಕ್ಕೂ ಹೆಚ್ಚು ಹಾವುಗಳನ್ನು ಕೆಳಗೆ ಸುರಿದ ರೀತಿ ನೆಟ್ಟಿಗರನ್ನು ಬಿಚ್ಚಿ ಬೀಳಿಸಿದೆ.

View this post on Instagram

A post shared by Meme wala (@memewalanews)

ಕಾಡಿನಲ್ಲಿ ಹಾವುಗಳನ್ನು ಗೋಣಿ ಚೀಲದಿಂದ ಸುರಿದ ನಂತರ, ಆ ವ್ಯಕ್ತಿ ತನ್ನ ಕೈಗಳಿಂದ ಹಾವನ್ನು ಹರಡುವುದನ್ನು ನೋಡಬಹುದು. ಅದೇನೂ ದೊಡ್ಡ ವಿಷಯವಲ್ಲ. ಈ ವಿಡಿಯೋವನ್ನು ನೋಡಿದರೆ ನಿಮಗೂ ಮೈ ರೋಮಾಂಚನವಾದರೆ ಅಚ್ಚರಿಯೇನಲ್ಲ. ನಿಮಗೆ ಹಾವುಗಳನ್ನು ಕಂಡರೆ ಭಯವಾಗುವುದಾದರೆ ಈ ವಿಡಿಯೋವನ್ನು ನೋಡದಿರುವುದೇ ಒಳಿತು!

ಇದನ್ನೂ ಓದಿ: Shocking Video: ಗರ್ಭಿಣಿಯಾಗಿದ್ದ ಫಾರೆಸ್ಟ್​ ರೇಂಜರ್​ ಕೂದಲು ಹಿಡಿದೆಳೆದು, ಥಳಿಸಿದ ದಂಪತಿ; ಶಾಕಿಂಗ್ ವಿಡಿಯೋ ವೈರಲ್

Viral Video: ಗೋಲ್​ಗಪ್ಪ ಐಸ್ ಕ್ರೀಮ್ ತಿಂದಿದ್ದೀರಾ? ವೈರಲ್ ಆದ ಹೊಸ ರೆಸಿಪಿಯ ವಿಡಿಯೋ ನೋಡಿ

Published On - 8:11 pm, Tue, 1 February 22

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ