AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ದಾಖಲೆಯ ಮಳೆಯ ನಂತರ ಬೆಚ್ಚಿಬೀಳಿಸುವಂತೆ ಗರ್ಜಿಸಿದ ಜಲಪಾತ, ಸೇತುವೆ ಮೇಲಿಂದ ಚಿಮ್ಮಿದ ನೀರು!

ಮೇಘಾಲಯ ಮೌಸಿನ್ರಾಮ್‌ನಲ್ಲಿ ದಾಖಲೆಯ ಮಳೆಯ ನಂತರ ಬೆಚ್ಚಿಬೀಳಿಸುವಂತೆ ಜಲಪಾತವೊಂದು ಭೋರ್ಗರೆದಿದೆ. ಇದರ ವಿಡಿಯೋ ವೈರಲ್ ಆಗುತ್ತಿದ್ದು, ಈ ಸುದ್ದಿ ಮೂಲಕ ವಿಡಿಯೋ ವೀಕ್ಷಣೆ ಮಾಡಿ.

Viral Video: ದಾಖಲೆಯ ಮಳೆಯ ನಂತರ ಬೆಚ್ಚಿಬೀಳಿಸುವಂತೆ ಗರ್ಜಿಸಿದ ಜಲಪಾತ, ಸೇತುವೆ ಮೇಲಿಂದ ಚಿಮ್ಮಿದ ನೀರು!
ಭೋರ್ಗರೆದ ಜಲಪಾತ
TV9 Web
| Edited By: |

Updated on:Jun 19, 2022 | 6:41 PM

Share

ಮೇಘಾಲಯ ಮೌಸಿನ್ರಾಮ್‌ (Mawsynram)ನಲ್ಲಿ ದಾಖಲೆಯ ಮಳೆಯ ನಂತರ ಬೆಚ್ಚಿಬೀಳಿಸುವಂತೆ ಗರ್ಜಿಸುವ ಜಲಪಾತ (Waterfall)ದ ವಿಡಿಯೋ ವೈರಲ್ (Video Viral) ಆಗುತ್ತಿದೆ. ಒಂದು ವಾರದಿಂದ ಈಶಾನ್ಯ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಜೂನ್ 16 ರಂದು ಬೆಳಿಗ್ಗೆ ಆರಂಭವಾದ ಮಳೆ ನಿರಂತರವಾಗಿ 24 ಗಂಟೆಗಳ ಕಾಲ ಧಾರಾಕಾರವಾಗಿ ಸುರಿದಿದೆ. ಈ ಅವಧಿಯಲ್ಲಿ ಭೂಮಿಯ ಮೇಲಿನ ಅತ್ಯಂತ ತೇವಭರಿತ ಸ್ಥಳವಾದ ಮೇಘಾಲಯದ ಮೌಸಿನ್​ರಾಮ್​ನಲ್ಲಿ ದಾಖಲೆಯ 100 ಸೆಂ.ಮೀ ಮಳೆಯಾಗಿದ್ದು, ಜಲಪಾತವೊಂದು ಭೋರ್ಗರೆದಿದೆ.

ಮೌಸಿನ್​ರಾಮ್​ ಪಟ್ಟಣದಲ್ಲಿ ಸುರಿದ ಭಾರಿ ಮಳೆಗೆ ಜಲಪಾತ ಗರ್ಜಿಸಲು ಪ್ರಾರಂಭಿಸಿದ್ದು, ನೀರಿನ ರಭಸ ಎಷ್ಟಿತ್ತೆಂದರೆ ಸೇತುವೆ ಮೇಲಿನಿಂದ ನೀರು ಚಿಮ್ಮಿದೆ. ಜಲಪಾತದ ಭೂರ್ಗರೆತ ಹಾಗೂ ಸೇತುವೆ ಮೇಲಿಂದ ನೀರು ಚಿಮ್ಮುವ ದೃಶ್ಯವನ್ನು ವಾಹನ ಸವಾರರು ಸೆರೆಹಿಡಿದಿದ್ದಾರೆ.

ಇದನ್ನೂ ಓದಿ: Viral Video: ಬಾವಿಗೆ ಬಿದ್ದ ಚಿರತೆ, ಅರಣ್ಯಾಧಿಕಾರಿಗಳ ರಕ್ಷಣಾ ಕಾರ್ಯಕ್ಕೆ ನೆಟ್ಟಿಗರ ಶ್ಲಾಘನೆ

ಇದೀಗ ಜಲಪಾತದ ಭೂರ್ಗರೆತದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ವಿಡಿಯೋದಲ್ಲಿ ನೋಡುವಂತೆ, ಜಲಪಾತದಿಂದ ಉಕ್ಕಿದ ನೀರು ಸೇತುವೆ ಮೇಲಿಂದ ಚಿಮ್ಮುವುದನ್ನು ಕಾಣಬಹುದು. ವಿಡಿಯೋ ಚಿತ್ರೀಕರಿಸಿದ ವಾಹನ ಸವಾರರೊಬ್ಬರು ಕಾರಿನಲ್ಲಿ ಕುಳಿತುಕೊಂಡು “ಇದು ಮೋಡವಲ್ಲ, ನೀರು” ಎಂದು ಹೇಳುವುದನ್ನು ಕೇಳಬಹುದು. ಇನ್ನೊಂದು ಕಡೆ ಮಹಿಳೆಯೊಬ್ಬಳು “ಓ ಮೈ ಗಾಡ್” ಎಂದು ಪದೇಪದೇ ಹೇಳುವುದನ್ನು ಕೇಳಬಹುದು.

ಆದಾಗ್ಯೂ, ಕಾರಿನ ಚಾಲಕ ಕಾರನ್ನು ಮುಂದಕ್ಕೆ ತೆಗೆದುಕೊಂಡು ಹೋಗಲು ಪ್ರಾರಂಭಿಸಿದನು. ಗಾಬರಿಗೊಂಡ ಸಹ ಪ್ರಯಾಣಿಕರೊಬ್ಬರು, ಕಾರಿನಲ್ಲಿ ಮಕ್ಕಳಿದ್ದಾರೆ, ಕಾರನ್ನು ಮುಂದಕ್ಕೆ ಕೊಂಡೊಯ್ಯದಂತೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: Viral Video: ನೀವು ಇದುವರೆಗೆ ನೋಡಿರದಂಥ ವಿಭಿನ್ನ ಸ್ಕೂಟರ್ ಇಲ್ಲಿದೆ ನೋಡಿ, ವಿಡಿಯೋ ವೈರಲ್

ವರದಿಗಳ ಪ್ರಕಾರ, ಕಳೆದ 81 ವರ್ಷಗಳಲ್ಲಿ ಮೌಸಿನ್‌ರಾಮ್‌ನಲ್ಲಿ 24 ಗಂಟೆಗಳ ಅವಧಿಯಲ್ಲಿ ದಾಖಲಾದ ಅತಿ ಹೆಚ್ಚು ಮಳೆಯಾಗಿದೆ. ಕಳೆದ ಮೂರು ದಿನಗಳಲ್ಲಿ ಅಸ್ಸಾಂ ಮತ್ತು ಮೇಘಾಲಯದಲ್ಲಿ ಭಾರೀ ಮಳೆಗೆ 39 ಜನರು ಸಾವನ್ನಪ್ಪಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ. ಒಟ್ಟಾರೆ ಈ ಮುಂಗಾರು ಹಂಗಾಮಿನಲ್ಲಿ 90 ಮಂದಿ ಸಾವನ್ನಪ್ಪಿದ್ದಾರೆ.

ಟ್ರೆಂಡಿಂಗ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:38 pm, Sun, 19 June 22

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ